ಬೆಂಗಳೂರು: ರಾಜ್ಯದಲ್ಲಿ 40 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ನೀಡಲು 3 ಸಾವಿರ ರೂ.ಗಳ ಪ್ರೋತ್ಸಾಹ ಧನ ನೀಡಲಾಗಿದೆ. ಇದರ ಜೊತೆಗೆ ಅವರು ಆರ್ಥಿಕವಾಗಿ ಸದೃಢರಾಗಲು ಜಿಲ್ಲಾವಾರು ಪತ್ತಿನ ಸಹಕಾರ ಸಂಘ ಸ್ಥಾಪಿಸಲು ಇಲಾಖೆ ಅಧಿಕಾರಿಗಳಿಗೆ ತಿಳಿಸಬೇಕು ಎಂದು ಸಹಕಾರ ಇಲಾಖೆಯ ರಿಜಿಸ್ಟಾರ್ ಗೆ ಸೂಚಿಸಿದ್ದಾರೆ.

ರಾಜ್ಯ ಸರ್ಕಾರವು ಆಶಾ ಕಾರ್ಯಕರ್ತೆಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಆಶಾ ಕಾರ್ಯಕರ್ತೆಯರಿಗಾಗಿ ಜಿಲ್ಲಾವಾರು ಪತ್ತಿನ ಸಹಕಾರ ಸಂಘ ಸ್ಥಾಪನೆಗೆ ಕ್ರಮ ಕೈಗೊಳ್ಳುವಂತೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಸೂಚಿಸಿದ್ದಾರೆ.

ಸರ್ಕಾರದ ಆದೇಶ ಪ್ರತಿ

ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 40,000ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರನ್ನು ಗುರುತಿಸಿ, ಅವರಿಗೆ ನೈತಿಕವಾಗಿ ಆತ್ಮಸ್ಥೈರ್ಯ ತುಂಬಲು ಹಾಗೂ ಆರ್ಥಿಕ ಸದೃಢತೆ ಹೊಂದಲು ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಆಶಾ ಕಾರ್ಯಕರ್ತೆಯರ ಪತ್ತಿನ ಸಹಕಾರ ಸಂಘವನ್ನು ಸ್ಥಾಪಿಸುವ ಸಲುವಾಗಿ, ಆಯಾ ಜಿಲ್ಲೆಗಳಲ್ಲಿ ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ, ಈ ಬಗ್ಗೆ ಅರಿವು ಮೂಡಿಸಿ, ಅವರುಗಳಿಗೆ ಆರ್ಥಿಕವಾಗಿ ಸಬಲತೆ ಹೊಂದಲು, ಪ್ರತಿಜಿಲ್ಲೆಯಲ್ಲಿಯೂ ಆಶಾ ಕಾರ್ಯಕರ್ತೆಯರ ಪತ್ತಿನ ಸಹಕಾರ ಸಂಘವನ್ನು ಸ್ಥಾಪಿಸಲು ಸಂಬಂಧಪಟ್ಟ ಪ್ರಾಂತೀಯ ಜಂಟಿ ನಿಬಂಧಕರು, ಉಪನಿಬಂಧಕರು ಹಾಗೂ ಸಹಾಯಕ ನಿಬಂಧಕರುಗಳಿಗೆ ನಿರ್ದೇಶನ ನೀಡಿ, ಅಗತ್ಯ ಕ್ರಮಕೈಗೊಳ್ಳುವಂತೆ ಹಾಗೂ ಕೈಗೊಂಡಕ್ರಮದ ಬಗ್ಗೆ 15 ದಿನಗಳೊಳಗಾಗಿ ಈ ಕಛೇರಿಗೆ ವರದಿ ಸಲ್ಲಿಸುವಂತೆ ಪತ್ರದಲ್ಲಿ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಪಾಕ್ ರೂಪದರ್ಶಿಗೆ ಟ್ರೋಲ್ ಮಾಡುತ್ತಿರುವ ಕಿಡಿಗೇಡಿಗಳು!

ಕರಾಚಿ ವಿಮಾನ ದುರಂತದಲ್ಲಿ ಸಾವನ್ನಪ್ಪಿದ ಪಾಕ್ ರೂಪದರ್ಶಿಯನ್ನು ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡಲಾಗುತ್ತಿದೆ.

ಕೊರೊನಾ ಕರ್ಪ್ಯೂಗೆ ಶಿರಹಟ್ಟಿ ಸಂಪೂರ್ಣ ಸ್ತಬ್ಧ..!

ಕೊರೊನಾ ಹಿನ್ನೆಲೆಯಲ್ಲಿ ಕೈಗೊಳ್ಳಲಾದ ವೀಕೆಂಡ್ ಕಫ್ಯೂ೯ಗೆ ಶನಿವಾರ ಪಟ್ಟಣ ಸಂಪೂರ್ಣ ಸ್ಥಬ್ಧವಾದ ಚಿತ್ರಣ ಕಂಡು ಬಂದಿತು.

ಬಿಗ್ ಬಿ ಮನೆಯಲ್ಲಿ ಕೌನ್ ಬನೇಗಾ ಕರೋಡಪತಿ ಪ್ರೋಮೊ ಶೂಟ್

ಬಾಲಿವುಡ್ ಖ್ಯಾತ ನಟ ಹಾಗೂ ಬಿಗ್ ಬಿ ಅಮಿತಾಬ್ ಬಚ್ಚನ್ ಅವರ ಮನೆಯಿಂದಲೇ ಪ್ರೊಮೊ ವಿಡಿಯೊವನ್ನು ಚಿತ್ರೀಕರಿಸಲಾಗಿದ್ದು ಅದನ್ನು ಡಿಜಿಟಲ್ ಮೂಲಕ ದಂಗಲ್ ಚಿತ್ರದ ನಿರ್ದೇಶಕ ನಿತೇಶ್ ತಿವಾರಿ ಚಿತ್ರೀಕರಿಸಿದ್ದಾರೆ. ಲಾಕ್ ಡೌನ್ ಸಮಯದಲ್ಲಿ ಇದ್ಯಾವ ಚಿತ್ರಕರಣ ಅಂತ ಕುತೂಹಲಾನಾ?

Леон букмекерская контора Викиреальность

Обзор БК «Леон», отзывы клиентов оператора, как вывести выигрыш из БК «Леон»…