ಬೆಂಗಳೂರು: ಟ್ರ್ಯಾಕ್ಟರ್‌, ವಾಹನ ಇರುವ ರೈತರು ಬಿಪಿಎಲ್‌ ಕಾರ್ಡ್‌ಗಳನ್ನು ಹಿಂದಿರುಗಿಸಬೇಕು, ಇಲ್ಲವಾದರೆ ಕಾನೂನು ಕ್ರಮಜರುಗಿಸಲಾಗುತ್ತದೆ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಇದು ಮೂರ್ಖತನದ ಸೂಚನೆ. ರೈತರ ಮೇಲೆ ದೌರ್ಜನ್ಯ ಎಸಗುವ, ಗುಂಡಿಕ್ಕುವ, ಕಾನೂನು ಕ್ರಮದ ಅಸ್ತ್ರ ಪ್ರಯೋಗಿಸಲು ಈ ಸರ್ಕಾರ ತುದಿಗಾಲಿನ ಮೇಲೆ ನಿಂತಂತೆ ಕಾಣುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ರೈತರಿಗೆ ಬಿಪಿಎಲ್‌ ಕಾರ್ಡ್‌ ಹಿಂದಿರುಗಿಸಲು ಹೇಳಿರುವ ಸರ್ಕಾರ ಅದಕ್ಕೆ ಟ್ರ್ಯಾಕ್ಟರ್‌, ವಾಹನಗಳನ್ನು ಮಾನದಂಡ ಮಾಡಿದೆ. ವೈಜ್ಞಾನಿಕ ಕೃಷಿ,ಟ್ರಾಕ್ಟರ್‌ ಖರೀದಿಗೆ ಪ್ರೋತ್ಸಾಹ ನೀಡುತ್ತಿರುವುದು ಸರ್ಕಾರಗಳೇ ಅಲ್ಲವೇ? ಟ್ರ್ಯಾಕ್ಟರ್‌ ಖರೀದಿಸಲು ಹೇಳಿ, ಅದನ್ನೇ ಮುಂದಿಟ್ಟು ಬಿಪಿಎಲ್‌ಕಾರ್ಡ್‌ ಕಿತ್ತುಕೊಳ್ಳುವುದು ಮೂರ್ಖತನವಲ್ಲವೇ? ಎಂದು ಅವರು ಟ್ವೀಟರ್ ಮೂಲಕ ಪ್ರಶ್ನಿಸಿದ್ದಾರೆ.

ಇಂದು ಸರಣಿ ಟ್ವೀಟ್ ಮೂಲಕ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ‍್ನಿಸಿರುವ ಅವರು, ಇಂದಿನ ಪೈಪೋಟಿ ಯುಗದಲ್ಲಿ ಕೃಷಿಕ ಯಂತ್ರ,ವಾಹನಗಳನ್ನು ಹೊಂದುವುದು ಅಗತ್ಯ. ಸರ್ಕಾರ ಅದಕ್ಕೆ ಪ್ರೋತ್ಸಾಹ ನೀಡಬೇಕು. ಬಿಪಿಎಲ್‌ ಕಾರ್ಡ್‌ ಕಿತ್ತುಕೊಳ್ಳುವ ಬೆದರಿಕೆಯೊಡ್ಡಬಾರದು.ಬಿಪಿಎಲ್‌ ಕಾರ್ಡ್‌ ಈಗ ಕೇವಲ ಪಡಿತರಕ್ಕೆ ಮಾತ್ರ ಸೀಮಿತವಲ್ಲ. ಹಲವು ಸವಲತ್ತು, ಸೌಲಭ್ಯಗಳಿಗೆ ಬಿಪಿಎಲ್‌ ಕಾರ್ಡೇ ಆಧಾರ ಎಂಬುದುಸರ್ಕಾರದ ಗಮನದಲ್ಲಿರಲಿ ಎಂದಿದ್ದಾರೆ.

ಅರ್ಹ ಫಲಾನುಭವಿಗಳಿಗೆ ಸವಲತ್ತು ಸಿಗಬೇಕು. ಅದಕ್ಕಾಗಿ ರೈತರ ಅನ್ನದ ತಟ್ಟೆಗೆ ಕೈ ಹಾಕಬಾರದು. ಸಾರ್ವಜನಿಕ ಪಡಿತರ ವಿತರಣೆವ್ಯವಸ್ಥೆಯಲ್ಲಿ ದೋಷಗಳಿವೆ. ಪಟ್ಟಭದ್ರ ಹಿತಾಸಕ್ತಿಗಳಿವೆ. ಅದನ್ನು ಮೊದಲು ಹೋಗಲಾಡಿಸಬೇಕು. ಸರ್ಕಾರ ಅದರತ್ತ ಗಮನ ಹರಿಸಲಿ.ಮಾತಿಗೆ ಮೊದಲು ರೈತರ ಕೊರಳು ಹಿಂಡುವ ತನ್ನ ಎಂದಿನ ಅಭ್ಯಾಸವನ್ನು ಸರ್ಕಾರ ತೊರೆಯಲಿ ಎಂದು ಅವರು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ತಂದೆಯ ಮೇಲಿನ ಕೋಪಕ್ಕೆ ಕೆರೆಗೆ ಹಾರಿದ ಮಗ…ಹಿಂದೆಯೇ ಹೋಗಿದ್ದ ಬಾಮೈದ ಕೂಡ ಮರಳಲಿಲ್ಲ!

ಮೈಸೂರು : ಯುವಕನೊಬ್ಬ ನೀರಿನಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನನ್ನು ರಕ್ಷಿಸಲು ಹೋದ, ಬಾಮೈದುನ ಕೂಡ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬಸವಣ್ಣನವರ ವಚನ ಕ್ರಾಂತಿ ವಿಶ್ವದ ಬಹುದೊಡ್ಡ ಕ್ರಾಂತಿ: ಡಾ.ಬಸವಲಿಂಗ ಸ್ವಾಮೀಜಿ

ವೇದ ಪರಂಪರೆ, ವೈದಿಕ ಪರಂಪರೆ ಮತ್ತು ಆಚಾರ್ಯ ಪರಂಪರೆಗಳಿಗಿಂತಲೂ ಬಸವ ಪರಂಪರೆ ಶ್ರೇಷ್ಠವಾದುದು. ಎಲ್ಲರ ಬದುಕಿಗೆ ಅನುಗುಣವಾದ ಪರಂಪರೆ ಇದು. ಈ ನಿಟ್ಟಿನಲ್ಲಿ ಬಸವಣ್ಣನವರ ವಚನ ಕ್ರಾಂತಿ ವಿಶ್ವದ ಬಹುದೊಡ್ಡ ಕ್ರಾಂತಿಯಾಗಿದೆ

ರಾಗ ಪೊಲ್ಕ್ ಪ್ಯೂಜನ್ ಬ್ಯಾಂಡ್ ವತಿಯಿಂದ ಸಂಗೀತ ತರಗತಿಗಳು

ರಾಗ ಪೊಲ್ಕ್ ಪ್ಯೂಜನ್ ಬ್ಯಾಂಡ್ ವತಿಯಿಂದ ಗದಗನಲ್ಲಿ ಪ್ರಪ್ರಥಮ ಬಾರಿಗೆ ಆರು ವಿವಿಧ ಸಂಗೀತ ವಾದ್ಯಗಳನ್ನು ಕಲಿಯುವ ಆಶಕ್ತಿಯುಳ್ಳ ಸಂಗೀತ ಪ್ರೀಯರಿಗೆ ಅದರಲ್ಲಿ ವಿಶೇಷವಾಗಿ ಕೊಳಲು, ಡಿಜಂಬೆ, ತಬಲಾ, ಗೀಟಾರ್, ಕಾಜನ, ಕೀ ಬೋರ್ಡ, ಧೋಲ್ ತಾಶಾ ಸಂಗೀತ ತರಗತಿಗಳು ಇದೇ ತಿಂಗಳು ಜೂನ್

ವರ್ತಮಾನ, ಇತಿಹಾಸ ಯಡಿಯೂರಪ್ಪರನ್ನು ಕ್ಷಮಿಸಲಾರದು: ಸಿದ್ದು

ರೈತ ವಿರೋಧಿ @BSYBJP ಅವರೇ, ಚುನಾವಣಾ ಪ್ರಣಾಳಿಕೆಯಲ್ಲಿ ಹೇಳದೆ ಇರುವ ಭೂ ಸುಧಾರಣೆ ಮತ್ತು ಎಪಿಎಂಸಿ ಕಾಯ್ದೆ ತಿದ್ದುಪಡಿ ಜಾರಿಗೆ ನಿಮಗೆ ಯಾವ ನೈತಿಕತೆ ಇದೆ? ನಿಮಗೆ ತಾಕತ್ ಇದ್ದರೆ ಮೊದಲು ವಿಧಾನಸಭೆಯನ್ನು ವಿಸರ್ಜಿಸಿ, ಇದೇ ವಿಷಯವನ್ನು ಮುಂದಿಟ್ಟು ಚುನಾವಣೆ ಎದುರಿಸಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸವಾಲೆಸೆದಿದ್ದಾರೆ.