ಉಸಿರಾಟ ತೊಂದರೆಯಿಂದ ನಟ ಚಿರಂಜೀವಿ ಸರ್ಜಾ ಸಾವು..!

ಬೆಂಗಳೂರು: ನಟ ಚಿರಂಜೀವಿ ಸರ್ಜಾ ಉಸಿರಾಟದ ತೊಂದರೆ ಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದರು.

ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ನಟ ಚಿರಂಜೀವಿ ಸರ್ಜಾ ಸಾವನ್ನಪ್ಪಿದ್ದಾರೆ. ಜಯನಗರದ ಸಾಗರ್ ಅಪೋಲೋ ಆಸ್ಪತ್ರೆಗೆ ಇಂದು ಚಿರು ದಾಖಲಾಗಿದ್ದರು. ವಾಯುಪುತ್ರ ಚಿತ್ರದ ಮೂಲಕ ಸ್ಯಾಂಡಲ್​​ವುಡ್​ಗೆ ಎಂಟ್ರಿ ಕೊಟ್ಟಿದ್ದ ಚಿರಂಜೀವಿ ಸರ್ಜಾ, ದಂಡಂ ದಶಗುಣಂ, ವರದ ನಾಯಕ, ಸಿಂಗ ಸೇರಿ ಹಲವು ಸಿನಿಮಾಗಳಲ್ಲಿ ನಟಿಸಿದ್ದರು. ಚಿರಂಜೀವಿ ಸರ್ಜಾ, 22 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದರು.

ಕನ್ನಡ ಚಿತ್ರರಂಗದಲ್ಲಿ ವಿಶಿಷ್ಠ ನಟನೆಯ ಮೂಲಕ ನಟ ಚಿರಂಜೀವಿ ಸರ್ಜಾ ಗುರುತಿಸಿಕೊಂಡಿದ್ದರು. ಕಳೆದ ವರ್ಷವಷ್ಟೆ ಕನ್ನಡ ಚಿತ್ರರಂಗದ ಸುಂದರ್ ರಾಜ್ ಮತ್ತು ಪ್ರಮಿಳಾ ಜೋಶಾಯ್ ಅವರ ಮಗಳನ್ನು ವಿವಾಹವಾಗಿದ್ದರು.

Exit mobile version