ಗದಗ: ಶಿರಹಟ್ಟಿ ಪಟ್ಟಣದಲ್ಲಿನ 7 ಕಟ್ಟಿಗೆ ಅಡ್ಡೆಗಳದ್ದು ಒಂದೊಂದು ಕಹಾನಿ ಇದೆ. ಆದರೆ ಈ ಕಥೆಯಲ್ಲಿ ಹೆಸ್ಕಾಂ ಇಲಾಖೆ ಪ್ರಮುಖ ಪಾತ್ರ ವಹಿಸುತ್ತಿದೆ. ಈಗಾಗಲೇ ಪಟ್ಟಣ ಪಂಚಾಯತಿ ಕಟ್ಟಿಗೆ ಅಡ್ಡೆಗಳಿಗೆ ನೀಡಿದ ವಿದ್ಯುತ್ ಸಂಪರ್ಕ ಕಡಿತ ಮಾಡುವ ಬಗ್ಗೆ ಹೆಸ್ಕಾಗೆ ಆದೇಶ ನೀಡಿದರೂ ಕೂಡ ಈವರೆಗೂ ವಿದ್ಯುತ್ ಸಂಪರ್ಕ ಕಡಿತಗೊಳಿಸದ ಹೆಸ್ಕಾಂನ ಉದ್ದೇಶವೇನು? ಪಟ್ಟಣದ ನಿರ್ವಹಣೆಯ ಜವಾಬ್ದಾರಿಯುತ ಅಧಿಕಾರಿಯ ಆದೇಶ ಪಾಲನೆ ಮಾಡದೇ ಮೊಂಡುತನ ಪ್ರದರ್ಶನ ಮಾಡುತ್ತಿರುವುದರ ಹಿಂದಿನ ಮರ್ಮವೇನು? ಎಂದು ಜನರು ಪ್ರಶ್ನಿಸಿಕೊಳ್ಳುವಂತಾಗಿದೆ.

ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ 19-05-2020ಕ್ಕೆ ಇಲ್ಲಿನ 15 ಮತ್ತು 16ನೇ ವಾರ್ಡಿನಲ್ಲಿರುವ ಕಟ್ಟಿಗೆ ಅಡ್ಡಗಳಿಗಳಿಂದ ಹೊರಹೊಮ್ಮುವ ಧೂಳು ಮತ್ತು ಶಬ್ದದಿಂದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಈ ಬಗ್ಗೆ ಕಂದಾಯ ಇಲಾಖೆ ನಿರೀಕ್ಷಕರು ಸ್ಥಳ ಪರಿಶೀಲನೆ ಮಾಡಿ ಕೊಟ್ಟಿರುವ ವರದಿಯನ್ವಯ ಕಟ್ಟಿಗೆ ಅಡ್ಡೆಗಳನ್ನು ತೆರವು ಅಥವಾ ಸ್ಥಳಾಂತರಕ್ಕೆ ಸೂಚಿಸಿದ್ದಾರೆ. ಈ ಬಗ್ಗೆ ಸಮಗ್ರ ಮಾಹಿತಿ ಪಡೆದ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಕಟ್ಟಿಗೆ ಅಡ್ಡೆಗಳಿಗೆ ನೀಡಲಾದ ನಿರಾಪೇಕ್ಷಣೆಯನ್ನು ಹಿಂಪಡೆದಿರುವ ಬಗ್ಗೆ ಆದೇಶದಲ್ಲಿ ತಿಳಿಸಿದ್ದಾರೆ.  

ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಹೆಸ್ಕಾಂ ಇಲಾಖೆಗೆ ನೀಡಿದ ಆದೇಶ

ನಿರಾಪೇಕ್ಷಣೆಯನ್ನು ಹಿಂಪಡೆದಾಗ್ಯೂ ಈವರೆಗೂ ಇನ್ನು ಕೂಡ ಕಟ್ಟಿಗೆ ಅಡ್ಡೆಗಳು ಚಾಲ್ತಿಯಲ್ಲಿರುವ ಕಾರಣ, ಈ ಪ್ರದೇಶ ಜನವಸತಿ ಪ್ರದೇಶ ಆಗಿದ್ದರಿಂದ ಜನಸಾಮಾನ್ಯರು, ಮಕ್ಕಳು, ವೃದ್ಧರಿಗೆ ಇದರ ಧೂಳಿನಿಂದ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ಜವಾಬ್ದಾರಿಗೆ ನೀವೆ ಹೊಣೆಗಾರರು ಎಂದು ಆದೇಶದಲ್ಲಿ ಮುಖ್ಯಾಧಿಕಾರಿ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಆದರೆ ಹೆಸ್ಕಾಂ ಅಧಿಕಾರಿಗಳಿಗೆ ಮಾತ್ರ ಇದರ ಬಗ್ಗೆ ಇನ್ನು ಗಂಭೀರತೆ ಬಂದಂತೆ ಕಾಣುತ್ತಿಲ್ಲ.

ಮುಖ್ಯಾಧಿಕಾರಿ ಆದೇಶ ಮಾಡಿ 20 ದಿನಗಳಾದರೂ ಈವರೆಗೆ ಹೆಸ್ಕಾಂ ಅಧಿಕಾರಿಗಳು ಕ್ರಮಕ್ಕೆ ಮುಂದಾಗದಿರುವುದು ವಿಪರ್ಯಾಸ. ಒಬ್ಬ ಹಿರಿಯ ಅಧಿಕಾರಿ ಆದೇಶ ಪಾಲನೆಗೂ ಇಷ್ಟೊಂದು ಮೀನಾಮೇಷವೇ ಎಂದು ಜನ ಮಾತಾಡಿಕೊಳ್ಳುತ್ತಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೇಗೆ ಶಿರಹಟ್ಟಿ ಹೆಸ್ಕಾಂ ಅಧಿಕಾರಿಗಳನ್ನು ಸಂಪರ್ಕಿಸಲಾಯಿತು. ಆದರೆ ಅವರ ಮೊಬೈಲ್ ಸಂಖ್ಯೆ ಸಂಪರ್ಕಕ್ಕೆ ಸಿಗಲಿಲ್ಲ.

ಇನ್ನಾದರೂ ಜನಸೇವೆ ಮಾಡಬೇಕಿದ್ದ ಅಧಿಕಾರಿಗಳು ಜನಸಾಮಾನ್ಯರ ಆರೋಗ್ಯಕ್ಕೆ ಪೂರಕವಾಗಿ ಕೆಲಸ ಮಾಡಬೇಕಿದೆ. ಜೊತೆಗೆ ಮೇಲಾಧಿಕಾರಿಗಳ ನ್ಯಾಯಯುತ ಆದೇಶವನ್ನು ಪಾಲಿಸಬೇಕು ಎನ್ನುವುದು ನಮ್ಮ ಆಶಯ.  

Leave a Reply

Your email address will not be published. Required fields are marked *

You May Also Like

ಓರ್ವ ಉಗ್ರನನ್ನು ಬಲಿ ಪಡೆದ ಸೇನೆ

ಜಮ್ಮು ಮತ್ತು ಕಾಶ್ಮೀರದ ಅವಂತಿಪೊರಾದಲ್ಲಿ ಓರ್ವ ಉಗ್ರನನ್ನು ಭಾರತೀಯ ಸೇನೆ ಬಲಿ ಪಡೆದಿದೆ. ಶರ್ಷಾಲಿ ಖ್ರೂ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಮಾಹಿತಿಯ ಮೇರೆಗೆ ಸೇನಾಪಡೆ ಕಾರ್ಯಾಚರಣೆ ನಡೆಸಿತ್ತು..

ಕೊರ್ಲಹಳ್ಳಿಯಲ್ಲಿ ನೀರಿನ ಗೋಳು: ತುಂಗೆಯ ಪಾತ್ರದಲ್ಲೂ ನೀರಿಗೆ ತಾಪತ್ರಯ!

ನದಿ ನೀರಿನ ಪಾತ್ರದ ಗ್ರಾಮಗಳಲ್ಲೂ ನೀರಿನ ಸಮಸ್ಯೆ ಇದೆ ಎಂದರೆ ನಿಜಕ್ಕೂ ಆಶ್ಚರ್ಯ. ಹೌದು ನೀರಿನ ಸಮಸ್ಯೆ ಎಂದರೆ ಒಂದೆಡೆ ಆಳುವವರ ನಿರ್ಲಕ್ಷ್ಯ, ಮತ್ತೊಂದೆಡೆ ಇರುವ ಶುದ್ಧ ಕುಡಿಯುವ ನೀರಿನ ಘಟಕದ ಹೆಚ್ಚಿನ ಹಣದ ವಸೂಲಿ. ಇದರಿಂದ ಗ್ರಾಮಸ್ಥರು ತತ್ತಿರಿಸುವಂತಾದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ಒಳ್ಳೆ ಕಥೆ ಸಿಕ್ರೆ ಶಿವಣ್ಣ-ಪುನಿತ್ ಬೆಳ್ಳಿ ತೆರೆಮೇಲೆ ಒಟ್ಟಿಗೆ ಕಾಣಿಸಿಕೊಳ್ತಾರಂತೆ

ಪುನೀತ್ ರಾಜ್‌ಕುಮಾರ್ ಜೊತೆ ಸಿನಿಮಾ ಯಾವಾಗ? ಎಂದು ಕೆಲವರು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಶಿವರಾಜಕುಮಾರ್, ನೂರಕ್ಕೆ ನೂರು ನಾನು ಮತ್ತು ಪುನೀತ್ ರಾಜ್‌ಕುಮಾರ್ ಒಟ್ಟಿಗೆ ಸಿನಿಮಾ ಮಾಡ್ತೀವಿ ಅಂದ್ರು ಶಿವಣ್ಣ..

ಮಕ್ಕಳಿಗೆ ಸೇವಾ ಮನೋಭಾವ ನೀಡಿ ; ಲಮಾಣಿ

ಸ್ಕೌಟ್ಸ್ ಮತ್ತು ಗೈಡ್ಸ್ಗಳು ಸನ್ನಡತೆ, ಸದ್ಭಾವನೆ, ಶಿಸ್ತು ಮತ್ತು ಸೇವಾ ಮನೋಭಾವದಂಥ ಶಿಕ್ಷ ಣ ಪಡೆದು ಭಾರತೀಯ ಸಂಪನ್ಮೂಲ ವ್ಯಕ್ತಿಗಳಾಗಿ ಹೊರಹೊಮ್ಮುತ್ತಿರುವುದು ಹೆಮ್ಮೆಯ ವಿಚಾರ ಎಂದು ಕೆ.ಆರ್.ಲಮಾಣಿ ಹೇಳಿದರು.