ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ: ಆಕಾಂಕ್ಷಿಗಳಿಗೆ ಅಚ್ಚರಿ

ಬೆಂಗಳೂರು: ಇದೇ 19 ರಂದು ರಾಜ್ಯದಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.

ಈ ಕುರಿತು ಬಿಜೆಪಿ ಕೇಂದ್ರ ಆಯ್ಕೆ ಸಮೀತಿ ಈರಣ್ಣ ಕಡಾಡಿ, ಅಶೋಕ್ ಗಸ್ತಿ ಅವರನ್ನು ಆಯ್ಕೆ ಮಾಡಿದೆ.
ರಾಜ್ಯದಿಂದ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು ಬಿಜೆಪಿಯ ಸಂಖ್ಯಾ ಬಲದ ಮೂಲಕ ಇಬ್ಬರನ್ನು ಸರಳವಾಗಿ ಆಯ್ಕೆ ಮಾಡಬಹುದಾಗಿದೆ. ಹೀಗಾಗಿ ಇಬ್ಬರನ್ನು ಬಿಜೆಪಿ ಆಯ್ಕೆ ಮಾಡಿದೆ. ಈ ಮೂಲಕ ಆಕಾಂಕ್ಷಿಗಳಿಗೆ ಬಿಜೆಪಿ ಹೈಕಮಾಂಡ್ ಅಚ್ಚರಿ ಮೂಡಿಸಿದೆ. ಈ ಮೂಲಕ ತಮ್ಮ ಸಹೋದರನಿಗೆ ಹೇಗಾದರೂ ಮಾಡಿ ರಾಜ್ಯಸಭೆಗೆ ಕಳುಹಿಸಲೇಬೇಕು ಎಂದುಕೊಂಡಿದ್ದ ಉಮೇಶ್ ಕತ್ತಿ ಅವರಿಗೆ ಮತ್ತೆ ನಿರಾಶೆಯಾಗಿದೆ.

Exit mobile version