ಗದಗ: ಕೊರೊನಾ ಗೈಡ್ ಲೈನ್ ಪ್ರಕಾರ ಸೋಂಕಿತರ ಹೆಸರನ್ನು ಬಹಿರಂಗಗೊಳಿಸಬಾರದು. ಆದರೆ ಇಂದು ಬೆಳಿಗ್ಗೆಯಿಂದಲೇ ಸೋಂಕಿತರ ಹೆಸರು ಇರುವ ಲೀಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆದರೆ ಈ ಲೀಸ್ಟ್ ಹೇಗೆ ಲೀಕ್ ಔಟ್ ಆಯಿತು? ಇದು ಅಸಲಿಯೋ ನಕಲಿಯೋ ಎನ್ನುವ ಸಂದೇಹ ಮೂಡಿಸಿದೆ.

07-06-2020 ದಿನಾಂಕ ಸಮೂದಿಸಿದ ಗದಗ ಜಿಮ್ಸ್ ಕೊರೊನಾ ಸೋಂಕು ದೃಡಪಡಿಸಿದ ಪ್ರಕರಣಗಳ ಪಟ್ಟಿ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ. ಇದು ಹೇಗೆ ಸಾಧ್ಯ ಎನ್ನುವುದು ಇದೀಗ ಪ್ರಶ್ನೆಯಾಗಿದೆ. ಜೊತೆಗೆ ಈ ಪಟ್ಟಿಯಲ್ಲಿ ಸೋಂಕು ದೃಢಪಡಿಸಿದ ವೈದ್ಯರ ಸಹಿ ಕೂಡ ಇದೆ.

ಕೊರೊನಾ ಗೈಡ್ ಲೈನ್ ಪ್ರಕಾರ ಜಿಲ್ಲಾಧಿಕಾರಿಗಳು ಮಾತ್ರ ಸೋಂಕಿತರ ಬಗ್ಗೆ ಮಾಹಿತಿ ನೀಡಬೇಕು. ಜೊತೆಗೆ ಸೋಂಕಿತರ ಹೆಸರನ್ನು ಬಹಿರಂಗಗೊಳಿಸುವುದು ಕಡ್ಡಾಯ ನಿಯಮವಾಗಿದೆ. ಆದರೆ ಜಿಲ್ಲಾಧಿಕಾರಿಗಳಿಗೂ ಮೊದಲೇ ಗದಗ ಹಾಗೂ ಗಜೇಂದ್ರಗಡ ಮೂಲದ 6 ಜನರಿಗೆ ಸೋಂಕು ದೃಢಪಟ್ಟಿರುವುದು ಹೆಸರು ಸಮೇತ ಹೇಗೆ ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗವಾಯಿತು?

ಅಥವಾ ಜಿಮ್ಸ್ ಹೆಸರಿನಲ್ಲಿರುವ ನಕಲಿ ಪಟ್ಟಿ ಇದಾಗಿದೆಯಾ? ಇಲ್ಲವೇ ಜಿಮ್ಸ್ ಸಿಬ್ಬಂಧಿಗಳೇ ಇದನ್ನು ಲೀಕ್ ಮಾಡಿದ್ದಾರೆಯೇ ಎನ್ನುವುದು ಪ್ರಶ್ನೆಯಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಜಿಮ್ಸ್ ನಿರ್ದೇಶಕ ಪಿ.ಎಸ್.ಭೂಸರಡ್ಡಿ, ಈ ಬಗ್ಗೆ ನನ್ನ ಗಮನಕ್ಕೂ ಬಂದಿದೆ. ಸಿಬ್ಬಂಧಿಗಳಿಂದ ಮಾಹಿತಿ ಪಡೆದು ಜಿಮ್ಸ್ ಸಿಬ್ಬಂಧಿಗಳಿಂದಲೇ ಲೀಸ್ ಬಹಿರಂಗವಾಗಿದ್ದಾದರೇ ತಪ್ಪಿತಸ್ಥ ಸಿಬ್ಬಂಧಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇನೆ ಎಂದರು.

Leave a Reply

Your email address will not be published. Required fields are marked *

You May Also Like

ಪೇಶೆಂಟ್ ನಂ.419 ಸೃಷ್ಟಿಸಿದ ಅವಾಂತರಕ್ಕೆ ಇಡೀ ರಾಜ್ಯವೇ ಮತ್ತೊಮ್ಮೆ ಬೆಚ್ಚಿ ಬಿದ್ದಿದೆ?

ಕ್ವಾರೆಂಟೈನ್ ಮುಗಿಸಿ ಬಂದ 419 ವ್ಯಕ್ತಿಯಿಂದಾಗಿ ಬೆಂಗಳೂರಿನಲ್ಲಿ ಆತಂಕ ಮನೆ ಮಾಡಿದೆ. ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ಬುಲೆಟಿನ್ ನಲ್ಲಿ ನಿನ್ನೆ ಈ ವ್ಯಕ್ತಿ ಐಸಿಯುನಲ್ಲಿಯೇ ಇದ್ದಾನೆ ಎಂದು ಹೇಳಲಾಗಿತ್ತು.

ಬಿಜೆಪಿಯಿಂದ ಬಿ.ಎಂ.ಟಿ.ಸಿ, ಕೆ.ಎಸ್.ಆರ್.ಟಿ.ಸಿ ಖಾಸಗೀಕರಣದ ಹುನ್ನಾರ: ಎಸ್.ಆರ್.ಪಾಟೀಲ

ಕೇಂದ್ರ ಸರ್ಕಾರ ಎಲ್ಲಾ ಕ್ಷೇತ್ರಗಳನ್ನು ಒಂದೊಂದಾಗಿ ಖಾಸಗೀಕರಣಗೊಳಿಸುತ್ತಿದ್ದು, ಇದೀಗ ಕರ್ನಾಟಕದ @BJP4Karnataka ಸರ್ಕರವೂ ಕೂಡ ಇದೇ ಹಾದಿ ತುಳಿಯುತ್ತಿದೆ. ಬಿಎಂಟಿಸಿ ಸಂಸ್ಥೆಯ ಖಾಸಗೀಕರಣಕ್ಕೆ @BSYBJP @LaxmanSavadi ಮುಂದಾಗಿರುವುದನ್ನು ನಾನು ಖಂಡಿಸುತ್ತೇನೆ ಎಂದು ವಿಧಾನಪರಿಷತ್ ಸದಸ್ಯ ಎಸ್.ಆರ್.ಪಾಟೀಲ್ ಹೇಳಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ ಚುನಾವಣೆ: ಮತಗಟ್ಟೆಗೆ ಜಿಲ್ಲಾಧಿಕಾರಿ ಬೇಟಿ

ಗದಗ ಮುನ್ಸಿಪಲ್ ಕಾಲೇಜಿನಲ್ಲಿ ನಡೆಯುತ್ತಿರುವ ಮತಗಟ್ಟೆಗೆ ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲೆಯ ಹಿರಿಯ ಅಧಿಕಾರಿಗಳು ಬೇಟಿ ನೀಡಿ ಮತದಾನದ ವಿವರ ಪಡೆದರು.

ಗದಗ ಜಿಲ್ಲೆಯಲ್ಲಿ ನಾಳೆ ರಾತ್ರಿ ಯಿಂದ ನಿಷೇದಾಜ್ಞೆ‌ ಜಾರಿ

ಗದಗ: ಜಿಲ್ಲೆಯಾದ್ಯಂತ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಂಭವಿಸಬಹುದಾದ ಅನಾಹುತಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು…