ಗದಗ: ಕೊರೊನಾ ಗೈಡ್ ಲೈನ್ ಪ್ರಕಾರ ಸೋಂಕಿತರ ಹೆಸರನ್ನು ಬಹಿರಂಗಗೊಳಿಸಬಾರದು. ಆದರೆ ಇಂದು ಬೆಳಿಗ್ಗೆಯಿಂದಲೇ ಸೋಂಕಿತರ ಹೆಸರು ಇರುವ ಲೀಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆದರೆ ಈ ಲೀಸ್ಟ್ ಹೇಗೆ ಲೀಕ್ ಔಟ್ ಆಯಿತು? ಇದು ಅಸಲಿಯೋ ನಕಲಿಯೋ ಎನ್ನುವ ಸಂದೇಹ ಮೂಡಿಸಿದೆ.

07-06-2020 ದಿನಾಂಕ ಸಮೂದಿಸಿದ ಗದಗ ಜಿಮ್ಸ್ ಕೊರೊನಾ ಸೋಂಕು ದೃಡಪಡಿಸಿದ ಪ್ರಕರಣಗಳ ಪಟ್ಟಿ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ. ಇದು ಹೇಗೆ ಸಾಧ್ಯ ಎನ್ನುವುದು ಇದೀಗ ಪ್ರಶ್ನೆಯಾಗಿದೆ. ಜೊತೆಗೆ ಈ ಪಟ್ಟಿಯಲ್ಲಿ ಸೋಂಕು ದೃಢಪಡಿಸಿದ ವೈದ್ಯರ ಸಹಿ ಕೂಡ ಇದೆ.

ಕೊರೊನಾ ಗೈಡ್ ಲೈನ್ ಪ್ರಕಾರ ಜಿಲ್ಲಾಧಿಕಾರಿಗಳು ಮಾತ್ರ ಸೋಂಕಿತರ ಬಗ್ಗೆ ಮಾಹಿತಿ ನೀಡಬೇಕು. ಜೊತೆಗೆ ಸೋಂಕಿತರ ಹೆಸರನ್ನು ಬಹಿರಂಗಗೊಳಿಸುವುದು ಕಡ್ಡಾಯ ನಿಯಮವಾಗಿದೆ. ಆದರೆ ಜಿಲ್ಲಾಧಿಕಾರಿಗಳಿಗೂ ಮೊದಲೇ ಗದಗ ಹಾಗೂ ಗಜೇಂದ್ರಗಡ ಮೂಲದ 6 ಜನರಿಗೆ ಸೋಂಕು ದೃಢಪಟ್ಟಿರುವುದು ಹೆಸರು ಸಮೇತ ಹೇಗೆ ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗವಾಯಿತು?

ಅಥವಾ ಜಿಮ್ಸ್ ಹೆಸರಿನಲ್ಲಿರುವ ನಕಲಿ ಪಟ್ಟಿ ಇದಾಗಿದೆಯಾ? ಇಲ್ಲವೇ ಜಿಮ್ಸ್ ಸಿಬ್ಬಂಧಿಗಳೇ ಇದನ್ನು ಲೀಕ್ ಮಾಡಿದ್ದಾರೆಯೇ ಎನ್ನುವುದು ಪ್ರಶ್ನೆಯಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಜಿಮ್ಸ್ ನಿರ್ದೇಶಕ ಪಿ.ಎಸ್.ಭೂಸರಡ್ಡಿ, ಈ ಬಗ್ಗೆ ನನ್ನ ಗಮನಕ್ಕೂ ಬಂದಿದೆ. ಸಿಬ್ಬಂಧಿಗಳಿಂದ ಮಾಹಿತಿ ಪಡೆದು ಜಿಮ್ಸ್ ಸಿಬ್ಬಂಧಿಗಳಿಂದಲೇ ಲೀಸ್ ಬಹಿರಂಗವಾಗಿದ್ದಾದರೇ ತಪ್ಪಿತಸ್ಥ ಸಿಬ್ಬಂಧಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇನೆ ಎಂದರು.

Leave a Reply

Your email address will not be published. Required fields are marked *

You May Also Like

ಆನ್ ಲೈನ್ ಶಿಕ್ಷಣ ರದ್ದುಗೊಳಿಸಿದ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರ, ಎಲ್.ಕೆ.ಜಿ, ಯು.ಕೆ.ಜಿ ಹಾಗೂ ಪ್ರಾಥಮಿಕ ಹಂತದ 7ನೇ ತರಗತಿವರೆಗಿನ ಆನ್ ಲೈನ್…

ಪೊಲೀಸರಿಗೆ ವಾಚಮನ್ ಎಂದು ಆವಾಜ್ ಹಾಕಿದ ಯುವಕ

ಲಾಕ್ ಡೌನ್ ಇದ್ದಾಗಲೂ ಅನವಶ್ಯಕವಾಗಿ ಬೈಕ್ ನಲ್ಲಿ ಓಡಾಡುತ್ತಿದ್ದ ಯುವಕನಿಗೆ ಓಡಾಡದಂತೆ ಸೂಚನೆ ನೀಡಿದ ಪೊಲೀಸರಿಗೆ ಯುವಕ ನೀವು ವಾಚಮನ್ ಇದ್ದ ಹಾಗೆ ಎಂದು ಆವಾಜ್ ಹಾಕಿದ್ದಾನೆ.

ವೈದ್ಯಾಧಿಕಾರಿ ಆತ್ಮಹತ್ಯೆಗೆ ಕಾರಣರಾದವರನ್ನು ಶಿಕ್ಷಿಸಿ: ಡಿ.ಕೆ.ಶಿವಕುಮಾರ್

ಆತ್ಮಹತ್ಯೆ ಮಾಡಿಕೊಂಡಿರುವ ವೈದ್ಯಾಧಿಕಾರಿ ಕುಟುಂಬಕ್ಕೆ ಸರ್ಕಾರ 50 ಲಕ್ಷ ರೂಪಾಯಿ ದುಡ್ಡು ನೀಡುವುದರಿಂದ ಅವರಿಗೆ ನ್ಯಾಯ ಸಿಗುವುದಿಲ್ಲ. ಆತ್ಮಹತ್ಯೆಗೆ ಕಾರಣರಾಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಒತ್ತಾಯಿಸಿದರು.

ಮುಳಗುಂದ : ಮರುಜೀವ ಪಡೆದ ಪಟ್ಟಣಶೆಟ್ಟಿ ಕೆರೆ

ಪಟ್ಟಣದ ಕಲ್ಲೂರ ರಸ್ತೆಗೆ ಹೊಂದಿಕೊಂಡ ಪಟ್ಟಣಶೆಟ್ಟಿ ಕೆರೆ ಈಗ ಅಭಿವೃದ್ದಿಗೊಂಡಿದ್ದು ಕಡಿಮೆ ವೆಚ್ಚದಲ್ಲಿ ಬೃಹತ್ ಕೆರೆ ನಿರ್ಮಿಸಿದ ಧರ್ಮಸ್ಥಳ ಅಭಿವೃದ್ದಿ ಸಮಿತಿ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.