ಬೆಂಗಳೂರು: ಇದೇ 30-06-2020ಕ್ಕೆ ಪದವಿಧರ ಹಾಗೂ ಶಿಕ್ಷಕರ ಕ್ಷೇತ್ರದ ನಾಲ್ಕು ಸ್ಥಾನಗಳಿಗೆ ಅವಧಿ ಪೂರ್ಣಗೊಳ್ಳಲಿದೆ. ಆದರೆ ಸದ್ಯ ಕೋವಿಡ್ 19 ಸೋಂಕು ನಿಯಂತ್ರಣದ ಉದ್ದೇಶದಿಂದ 2 ಪದವಿಧರ ಹಾಗೂ 2-ಶಿಕ್ಷಕರ ಮತಕ್ಷೇತ್ರಗಳಿಗೆ ನಡೆಯಬೇಕಿದ್ದ ಚುನಾವಣೆ ಕುರಿತು ಚುನಾವಣಾ ಆಯೋಗ ಮಹತ್ವದ ಆದೇಶ ನೀಡಿದೆ.

ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳಿಂದ ದಿನಾಂಕ 30-05-2020 ರಂದು ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗ ವರದಿಯನ್ನು ಪಡೆದುಕೊಂಡಿದೆ. ವರದಿ ಪರಿಶೀಲಿಸಿ ಭಾರತ ಸಂವಿಧಾನದ 324ನೇ ಪರಿಚ್ಛೇದದ 1951ರ ಜನಪ್ರತಿನಿಧಿ ಕಾಯ್ದೆ ಸೆಕ್ಷನ್ 16ರ ಅಡಿಯಲ್ಲಿ ಅವಧಿ ಪೂರ್ಣಗೊಳ್ಳುವ ವಿಧಾನ ಪರಿಷತ್ ಸ್ಥಾನಗಳಿಗೆ ನಡೆಸಬೇಕಿದ್ದ ಚುನಾವಣೆಯನ್ನು ಸದ್ಯಕ್ಕೆ ನಡೆಸದಿರುವ ಬಗ್ಗೆ ಚುನಾವಣಾ ಆಯೋಗ ಆದೇಶಿಸಿದೆ.

ಕೊರೊನಾ ಸೋಂಕು ನಿಯಂತ್ರಣದ ಪರಿಸ್ಥಿತಿಯನ್ನು ಅವಲೋಕಿಸಿ ಮುಂದೆ ಚುನಾವಣೆ ನಡೆಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಚುನಾವಣಾ ಆಯೋಗ ಕಾರ್ಯದರ್ಶಿ ಸುಮನ್ ಕುಮಾರ್ ದಾಸ್ ಆದೇಶ ಹೊರಡಿಸಿದ್ದಾರೆ.  

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 2000 ಗಡಿ ದಾಟಿದ ಸೋಂಕಿತರ ಸಂಖ್ಯೆ: ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ರಾಜ್ಯದಲ್ಲಿಂದು 2062 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟು‌ ಸೋಂಕಿತರ ಸಂಖ್ಯೆ 28877…

ಲಿಂ.ತೋಂಟದ ಸಿದ್ದಲಿಂಗ ಶ್ರೀಗಳವರ “ಆಲಮಟ್ಟಿ ಪ್ರೇಮ ಕಾವ್ಯಭಾವ” ಅನನ್ಯ !!!

ಬರಹ : ಗುಲಾಬಚಂದ ಆರ್.ಜಾಧವ. ಆಲಮಟ್ಟಿಆಲಮಟ್ಟಿ (ವಿಜಯಪುರ ಜಿಲ್ಲೆ) : ಮನದಾಳದಿಂದ ಹೊರಡುವ ನಿಷ್ಕಲ್ಮಶ,ನಿಸ್ವಾರ್ಥವುಳ್ಳ ಪ್ರೀತಿ…

ಲಾಕ್ ಡೌನ್ ನಲ್ಲೂ ನಿಮಗೆ ಬರ್ತಡೇ ಆಚರಣೆ ಬೇಕಿತ್ತಾ ಸಿಪಿಐ ಸಾಹೇಬರೇ??

ದೇಶದಲ್ಲಿ ಲಾಕ್ ಡೌನ್ ಇದ್ದಾಗಲೂ ನಮ್ಮ ರಾಣೆಬೆನ್ನೂರು ಗ್ರಾಮೀಣ ಸಿಪಿಐ ಸುರೇಶ್ ಸಗರಿ ಲಾಕ್ ಡೌನ್ ಮದ್ಯದಲ್ಲೂ ಜನರ ಗುಂಪಿನ ಮದ್ಯೆ ನಿಂತು ಕೇಕ್ ಕತ್ತರಿಸಿ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ಬೇಲಿಯೇ ಎದ್ದು ಹೊಲ ಮೇಯ್ದರೆ ಹೇಗೆ? ಎಂದು ಜಿಲ್ಲೆಯಲ್ಲೀಗ ಜನ ಮಾತಾಡಿಕೊಳ್ಳುತ್ತಿದ್ದಾರೆ.

ಪ್ಲಾಸ್ಮಾ ಥೆರಪಿ ಚಿಕಿತ್ಸೆಗೆ ಕೇಂದ್ರ ಸರ್ಕಾರದ ಅನುಮತಿ : ಸಚಿವ ಎಸ್.ಸುರೇಶ್ ಕುಮಾರ್

ಬೆಂಗಳೂರು: ರಾಜ್ಯದಲ್ಲಿ ಬೆಂಗಳೂರು, ಮಂಗಳೂರು, ಹುಬ್ಬಳ್ಳಿ ಹಾಗೂ ಮೈಸೂರಿನಲ್ಲಿ ಪ್ಲಾಸ್ಮಾಥೆರಪಿ ಚಿಕಿತ್ಸೆಯನ್ನು ಪ್ರಾಯೋಗಿಕವಾಗಿ ಆರಂಭಿಸಲು ಕೇಂದ್ರ…