ಬೆಂಗಳೂರು: ಇದೇ 30-06-2020ಕ್ಕೆ ಪದವಿಧರ ಹಾಗೂ ಶಿಕ್ಷಕರ ಕ್ಷೇತ್ರದ ನಾಲ್ಕು ಸ್ಥಾನಗಳಿಗೆ ಅವಧಿ ಪೂರ್ಣಗೊಳ್ಳಲಿದೆ. ಆದರೆ ಸದ್ಯ ಕೋವಿಡ್ 19 ಸೋಂಕು ನಿಯಂತ್ರಣದ ಉದ್ದೇಶದಿಂದ 2 ಪದವಿಧರ ಹಾಗೂ 2-ಶಿಕ್ಷಕರ ಮತಕ್ಷೇತ್ರಗಳಿಗೆ ನಡೆಯಬೇಕಿದ್ದ ಚುನಾವಣೆ ಕುರಿತು ಚುನಾವಣಾ ಆಯೋಗ ಮಹತ್ವದ ಆದೇಶ ನೀಡಿದೆ.

ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳಿಂದ ದಿನಾಂಕ 30-05-2020 ರಂದು ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗ ವರದಿಯನ್ನು ಪಡೆದುಕೊಂಡಿದೆ. ವರದಿ ಪರಿಶೀಲಿಸಿ ಭಾರತ ಸಂವಿಧಾನದ 324ನೇ ಪರಿಚ್ಛೇದದ 1951ರ ಜನಪ್ರತಿನಿಧಿ ಕಾಯ್ದೆ ಸೆಕ್ಷನ್ 16ರ ಅಡಿಯಲ್ಲಿ ಅವಧಿ ಪೂರ್ಣಗೊಳ್ಳುವ ವಿಧಾನ ಪರಿಷತ್ ಸ್ಥಾನಗಳಿಗೆ ನಡೆಸಬೇಕಿದ್ದ ಚುನಾವಣೆಯನ್ನು ಸದ್ಯಕ್ಕೆ ನಡೆಸದಿರುವ ಬಗ್ಗೆ ಚುನಾವಣಾ ಆಯೋಗ ಆದೇಶಿಸಿದೆ.

ಕೊರೊನಾ ಸೋಂಕು ನಿಯಂತ್ರಣದ ಪರಿಸ್ಥಿತಿಯನ್ನು ಅವಲೋಕಿಸಿ ಮುಂದೆ ಚುನಾವಣೆ ನಡೆಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಚುನಾವಣಾ ಆಯೋಗ ಕಾರ್ಯದರ್ಶಿ ಸುಮನ್ ಕುಮಾರ್ ದಾಸ್ ಆದೇಶ ಹೊರಡಿಸಿದ್ದಾರೆ.  

Leave a Reply

Your email address will not be published. Required fields are marked *

You May Also Like

ಹಳೆಯ ಧಾರಾವಾಹಿಗಳಿಗೆ ಮೊರೆ: ದಾಖಲೆ ಸೇರಿದ ರಾಮಾಯಣ ಧಾರಾವಾಹಿ

ಲಾಕ್ ಡೌನ್ ಹಿನ್ನೆಲೆ ಬಹುತೇಕ ಚಾಲ್ತಿಯಲ್ಲಿರು ಧಾರಾವಾಹಿ ಶೂಟಿಂಗ್ ಕಾರ್ಯ ಕೂಡ ನಿಂತಿದೆ. ಇದರಿಂದಾಗಿ ಡಿಡಿ ವಾಹಿನಿ ಮತ್ತೆ ರಾಮಾಯಣ ಧಾರಾವಾಹಿ ಮರುಪ್ರಸಾರ ಮಾಡಿದ್ದು ವೀಕ್ಷಕರ ಸಂಖ್ಯೆಯಲ್ಲಿ ದಾಖಲೆ ಮೆರೆದಿದೆ.

ಅಡರಕಟ್ಟಿ ವಿಎಸ್ಎಸ್ ಸಂಘಕ್ಕೆ ಅವಿರೋಧ ಆಯ್ಕೆ

ಲಕ್ಷ್ಮೇಶ್ವರ ತಾಲೂಕಿನ ಅಡರಕಟ್ಟಿ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಅವಿರೋಧ ಆಯ್ಕೆ ಮಾಡಲಾಯಿತು.

ರಾಜ್ಯದಲ್ಲಿಂದು 1498 ಕೊರೊನಾ ಪಾಸಿಟಿವ್!: ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ರಾಜ್ಯದಲ್ಲಿಂದು 1498 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟು‌ ಸೋಂಕಿತರ ಸಂಖ್ಯೆ 26815 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 571. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 11098 ಕೇಸ್ ಗಳು. ರಾಜ್ಯದಲ್ಲಿ 15297 ಸಕ್ರೀಯ ಪ್ರಕರಣಗಳಿವೆ.

ಮಾಜಿ ಸಂಸದ ಐ.ಜಿ.ಸನದಿಗೆ ಮಾತೃ ವಿಯೋಗ

ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಂಸದರು ಆದ ಮಾನ್ಯ ಶ್ರೀ ಪ್ರೋ.ಐ.ಜಿ.ಸನದಿ ಅವರ ತಾಯಿ ಶ್ರೀಮತಿ ಫಾತೋಬಿ ಕೋಂ ಗೌಸುಸಾಹೇಬ್.ಸನದಿ ಶತಾಯುಷಿ ವಯಾ (102) ಇವರು ಇಂದು ಮಧ್ಯಾಹ್ನ 1-00