ಜೈಪುರ: ಗುಜರಾತ್ ಕಾಂಗ್ರೆಸ್ ನ ಕೆಲವು ಶಾಸಕರನ್ನು ಕಾಂಗ್ರೆಸ್ ರಾಜಸ್ಥಾನದ ಸಿರೋಹಿಯಲ್ಲಿರುವ ರೆಸಾರ್ಟ್ ಗೆ ಕರೆದೊಯ್ಯಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿಯ ನಾರಾಯಣ ಪುರೋಹಿತ್, ಕಾಂಗ್ರೆಸ್ ಶಾಸಕರನ್ನು ಬಂಧಿಸಿಟ್ಟಿದೆ ಎಂದಿದ್ದಾರೆ.
ಕಾಂಗ್ರೆಸ್ ನವರು 22 ಶಾಸಕರನ್ನು ಕರೆತಂದಿದ್ದಾರೆ. ನಾವು ಈಗಾಗಲೇ ಒಂದು ದೂರು ದಾಖಲಿಸಿದ್ದೇವೆ. ಅವರ ವಿರುದ್ಧ ಖಂಡಿತ ಕ್ರಮ ಕೈಗೊಳ್ಳುತ್ತೇವೆ ಎಂದಿದೆ.
ಜೂನ್ 19ರಂದು ನಡೆಯಲಿರುವ ರಾಜ್ಯಸಭೆಯ ದ್ವೈವಾರ್ಷಿಕ ಚುನಾವಣೆಯಲ್ಲಿ ಅಡ್ಡಮಾರ್ಗದಿಂದ ಗೆಲ್ಲಲು ಬಿಜೆಪಿ ತನ್ನ ಶಾಸಕರನ್ನು ಖರೀದಿ ಮಾಡುವ ಆತಂಕದಿಂದ ಕಾಂಗ್ರೆಸ್ ಈ ಹೆಜ್ಜೆ ಇಟ್ಟಿದೆ. ಸದ್ಯಕ್ಕೆ ಇಲ್ಲಿರುವ ಶಾಸಕರನ್ನು ಚುನಾವಣೆಯಂದು ನೇರವಾಗಿ ಮತದಾನಕ್ಕೆ ಕರೆದೊಯ್ಯಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ.