ದೆಹಲಿ/ಬೆಂಗಳೂರು: ಇದೇ ಜೂನ್ 30ರಂದು ಅವಧಿ ಮುಕ್ತಾಯವಾಗಲಿರುವ 7 ವಿಧಾನಪರಿಷತ್ ಸ್ಥಾನಗಳಿಗೆ ಜೂನ್ 29ರಂದು ಚುನಾವಣೆ ನಡೆಯಲಿದೆ. ಈ ವಿಷಯವನ್ನು ಚುನಾವಣಾ ಆಯೋಗ ಘೋಷಿಸಿದೆ.

ಜೂನ್ 30, 2020ರಂದು ಕರ್ನಾಟಕದ ನಜೀರ್ ಅಹ್ಮದ್, ಜಯಮ್ಮ, ಎನ್ ಎಸ್ ಬೋಸರಾಜು, ಹೆಚ್.ಎಂ.ರೇವಣ್ಣ, ಟಿ.ಎ.ಶರವಣ ಮತ್ತು ಡಿ.ಯು.ಮಲ್ಲಿಕಾರ್ಜುನ್ ಅವರ ವಿಧಾನ ಪರಿಷತ್ ಅವಧಿ ಅಂತ್ಯವಾಗಲಿದೆ.


ದಿನಾಂಕ 11/06/2020ರಂದು ಚುನಾವಣಾ ಪ್ರಕ್ರಿಯೆ ಆರಂಭಗೊಳ್ಳಲಿದೆ. 18ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನ, 19 ನಾಮಪತ್ರಗಳ ಪರಿಶೀಲನೆ, 22ರಂದು ನಾಮಪತ್ರ ವಾಪಸ್ ಪಡೆಯಲು ಕಡೆಯ ದಿನಾಂಕವನ್ನು ನಿಗದಿಮಾಡಲಾಗಿದೆ. 29ರಂದು ಮತದಾನ ನಡೆಯಲಿದೆ. ಅಂದೇ ಮತ ಎಣಿಕೆ ನಡೆದು ಫಲಿತಾಂಶ ಘೋಷಣೆ ಮಾಡುವುದಾಗಿ ಆಯೋಗ ಅಧಿಸೂಚನೆ ಹೊರಡಿಸಿದೆ.

Leave a Reply

Your email address will not be published. Required fields are marked *

You May Also Like

ದಲಿತ ವಿಮೋಚನಾ ಸೇನೆಯ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಪೂಜಾ

ನಿಡಗುಂದಿ; ದಲಿತ ವಿಮೋಚನಾ ಸೇನೆಯ ಮಹಿಳಾ ಘಟಕದ ರಾಜ್ಯ ಅಧ್ಯಕ್ಷೆಯಾಗಿ ಪಟ್ಟಣದ ಪೂಜಾ ಪೀರಪ್ಪ ದೊಡಮನಿ…

ಸಾರಿಗೆ ನೌಕರರ ಗೊಂದಲಕ್ಕೆ ತೆರೆ ಎಳೆದ ಸಚಿವ ಸವದಿ

ಸಾರಿಗೆ ಇಲಾಖೆ ನೌಕರರನ್ನು ಕೆಲಸದಿಂದ ತೆಗೆದುಹಾಕುವುದಿಲ್ಲ. ಕೆಲವು ನೌಕರರನ್ನು ಕೆಲಸದಿಂದ ತೆಗೆದುಹಾಕಲಾಗುತ್ತದೆ ಎನ್ನುವ ವದಂತಿ ಹಬ್ಬಿದೆ. ಅಂತಹ ಯಾವುದೇ ಪ್ರಸ್ತಾಪ ಇಲ್ಲ.

ಪೊಲೀಸರಿಂದ ವರೀಷ್ಠಾಧಿಕಾರಿ ಮೇಲೆ ಹಲ್ಲೆ..!

ಕೋಲ್ಕತಾ: ಅಂಫಾನ್ ಚಂಡಮಾರುತ ಹಿನ್ನಲೆಯಲ್ಲಿ ನಿಯೋಜನೆಯಾಗಿರುವ ಅಂದಾಜು 500 ಪೊಲೀಸ್ ಪೇದೆಗಳು ತಮ್ಮ ರೂಂ ಸ್ಯಾನಿಟೈಸ್…