ದೆಹಲಿ/ಬೆಂಗಳೂರು: ಇದೇ ಜೂನ್ 30ರಂದು ಅವಧಿ ಮುಕ್ತಾಯವಾಗಲಿರುವ 7 ವಿಧಾನಪರಿಷತ್ ಸ್ಥಾನಗಳಿಗೆ ಜೂನ್ 29ರಂದು ಚುನಾವಣೆ ನಡೆಯಲಿದೆ. ಈ ವಿಷಯವನ್ನು ಚುನಾವಣಾ ಆಯೋಗ ಘೋಷಿಸಿದೆ.

ಜೂನ್ 30, 2020ರಂದು ಕರ್ನಾಟಕದ ನಜೀರ್ ಅಹ್ಮದ್, ಜಯಮ್ಮ, ಎನ್ ಎಸ್ ಬೋಸರಾಜು, ಹೆಚ್.ಎಂ.ರೇವಣ್ಣ, ಟಿ.ಎ.ಶರವಣ ಮತ್ತು ಡಿ.ಯು.ಮಲ್ಲಿಕಾರ್ಜುನ್ ಅವರ ವಿಧಾನ ಪರಿಷತ್ ಅವಧಿ ಅಂತ್ಯವಾಗಲಿದೆ.


ದಿನಾಂಕ 11/06/2020ರಂದು ಚುನಾವಣಾ ಪ್ರಕ್ರಿಯೆ ಆರಂಭಗೊಳ್ಳಲಿದೆ. 18ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನ, 19 ನಾಮಪತ್ರಗಳ ಪರಿಶೀಲನೆ, 22ರಂದು ನಾಮಪತ್ರ ವಾಪಸ್ ಪಡೆಯಲು ಕಡೆಯ ದಿನಾಂಕವನ್ನು ನಿಗದಿಮಾಡಲಾಗಿದೆ. 29ರಂದು ಮತದಾನ ನಡೆಯಲಿದೆ. ಅಂದೇ ಮತ ಎಣಿಕೆ ನಡೆದು ಫಲಿತಾಂಶ ಘೋಷಣೆ ಮಾಡುವುದಾಗಿ ಆಯೋಗ ಅಧಿಸೂಚನೆ ಹೊರಡಿಸಿದೆ.

Leave a Reply

Your email address will not be published. Required fields are marked *

You May Also Like

ಥೂ ನಿಮ್ಮ ಯೋಗ್ಯತೆಗಿಷ್ಟು ಬೆಂಕಿ ಹಾಕ!: ವೈದ್ಯಕೀಯ ಶಿಕ್ಷಣ ಸಚಿವರಿಗೆ ಮಹಿಳಾ ವೈದ್ಯೆಯ ತರಾಟೆ!

ಥೂ ನಿಮ್ಮ ಯೋಗ್ಯತೆಗಿಷ್ಟು ಬೆಂಕಿ ಹಾಕ. ಮೂವತ್ತು ಲಕ್ಷ ಪರಿಹಾರ ಕೊಟ್ಟು ಸಮಾಧಾನ ಮಾಡ್ತೀರೆನ್ರಿ. ನಿಮ್ಮದು ಒಂದು ಸರ್ಕಾರನೇನ್ರಿ? ಯಾರಿಗೆ ಬೇಕು ನಿಮ್ಮ ಹಣ ..? ಎಲ್ಲರೂ ಒಂದು ತಿಂಗಳ ಸಂಬಳ ಕೊಟ್ರೆ ಸಾಕು..! ಹಣಕೊಟ್ಟು ಸಮಾಧಾನ ಮಾಡ್ತಿರೇನ್ರೀ? ನನಗೆ ನಮ್ಮ ನಾಗೇಂದ್ರ ಬೇಕು.. ಇದು ಮಹಿಳಾ ವೈದ್ಯೆ ಒಬ್ಬರು ವೈದ್ಯಕೀಯ ಶಿಕ್ಷಣ ಸಚಿವರನ್ನು ತರಾಟೆಗೆ ತೆಗೆದುಕೊಂಡ ಪರಿ.

ಹೆಚ್ಚು ಸಂಭಾವನೆ ಪಡೆಯುವ 100 ಕ್ರಿಕೇಟಿಗರಲ್ಲಿ ಭಾರತೀಯ ಕ್ರೀಕೆಟಿಗ ಯಾರು?

ದೆಹಲಿ: 2020 ರ ಅತೀ ಹೆಚ್ಚು ಸಂಭಾವನೆ ಪಡೆಯುವ 100 ಕ್ರೀಡಾಪಟುಗಳಲ್ಲಿ ಫೋರ್ಬ್ಸ್ ನ ಏಕೈಕ…

ಮೋದಿ ವಿರುದ್ಧ ಗುಡುಗಿರುವ ಮಾಜಿ ಪ್ರಧಾನಿ!

ನವದೆಹಲಿ : ಚೀನಾ ಸಂಘರ್ಷದ ಕುರಿತು ಮಾತನಾಡಿರುವ ಪ್ರಧಾನಿ ತಾವು ಆಡುವ ಮಾತುಗಳ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು ಮತ್ತು ತಮ್ಮ ಸ್ಥಾನದ ಸಮರ್ಥನೆ ಮಾಡಿಕೊಳ್ಳಬೇಕು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ.

ಬುಲೆಟ್ ಕೊಟ್ರ ತಾಳಿ ಕಟ್ತಿನಿ ಅಂತ ಪಟ್ಟು ಹಿಡಿದ ವರನಿಗೆ ಏನಾತು ನೋಡ್ರಿ.

ಉತ್ತರಪ್ರದೇಶ್: ಪ್ರತಿಯೊಬ್ಬ ಹೆಣ್ ಮಕ್ಕಳು ಮನ್ಯಾಗ್ ತಂದಿ-ತಾಯಿ ಸಾಲಾಸೂಲಾ ಮಾಡಿ ಮದ್ವಿ ಮಾಡಿ, ಅಳಿಯಾ ಕೇಳೋವಷ್ಟು ವರದಕ್ಷಿಣೆ ಕೊಟ್ಟು ಮಗಳನ್ ಗಂನ್ ಮನಿಗೆ ಕಳಿಸಬೇಕು ಅನ್ನೋವಷ್ಟರಲ್ಲಿ ಹೈರಾಣಾಗಿ ಹೋಗುತ್ತ. ಷ್ ಅಪ್ಪಾ ಅಂತ ಮಗಳ್ ಮದ್ವಿ ಆದ್ರ ಸಾಕು ತಂದಿ-ತಾಯಿ ನಿಟ್ಟುಸಿರು ಬಿಡ್ತಾರಾ? ಆದರೆ ಇಲ್ಲೊಬ್ಬ ಹುಡುಗಿ ವರದಕ್ಷಣಿ ಅಂತ ನಂಗ್ ಬುಲೇಟ್ ಬೇಕಾಬೇಕು ಅಂತ ಪಟ್ಟು ಹಿಡಿದ ವರನಿಗೆ ತಕ್ಕ ಪಾಠಾ ಕಲಿಸ್ಯಾಳ.