ನವದೆಹಲಿ : ಕೊರೊನಾಗೆ ದೆಹಲಿ ತತ್ತರಿಸಿ ಹೋಗಿದೆ. ಇದು ಹೀಗೆ ಮುಂದುವರೆದರೆ ಜುಲೈ ಅಂತ್ಯದ ವೇಳೆಗೆ ದೆಹಲಿಯಲ್ಲಿ 5.5 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಳ್ಳಲಿದೆ ಎಂದು ಡಿಸಿಎಂ ಮನೀಶ್ ಸಿಸೋಡಿಯಾ ಆತಂಕ ವ್ಯಕ್ತಪಡಿಸಿದ್ದಾರೆ.

ದೆಹಲಿಯಲ್ಲಿ ಕೊರೊನಾ ಆತಂಕ ಸೃಷ್ಟಿಸುತ್ತಿರುವ ಹಿನ್ನೆಲೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ಅನೀಲ್ ಬೈಜಾಲ್ ನಿವಾಸದಲ್ಲಿ ಮಹತ್ವದ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಡಿಸಿಎಂ ಮನೀಶ್ ಸಿಸೋಡಿಯಾ, ಆರೋಗ್ಯ ಸಚಿವ ಸತ್ಯಂದ್ರ ಜೈನ್ ಹಾಗೂ ದೆಹಲಿ ತುರ್ತು ನಿರ್ವಹಣಾ ಪ್ರಾಧಿಕಾರ ಅಧಿಕಾರಿಗಳು ಭಾಗವಹಿಸಿದ್ದರು.

ಜೂ. 15ರ ವೇಳೆಗೆ ದೆಹಲಿಯಲ್ಲಿ 44 ಸಾವಿರ ಜನರಲ್ಲಿ ಸೋಂಕು ಕಾಣಿಸಿಕೊಳ್ಳಲಿದೆ. 6,600 ಬೆಡ್ ಗಳ ಅವಶ್ಯಕತೆ ಇದೆ.

ಜೂ. 30ಕ್ಕೆ ಸೋಂಕಿತರ ಸಂಖ್ಯೆ 1 ಲಕ್ಷದ ಗಡಿ ದಾಟಲಿದೆ. ಆಗ ಕನಿಷ್ಠ 15 ಸಾವಿರ ಬೆಡ್ ಗಳ ಅವಶ್ಯಕತೆ ಇದೆ. ಜುಲೈನಲ್ಲಿ ಸೋಂಕಿತರ ಸಂಖ್ಯೆ ಇನ್ನೂ ಹೆಚ್ಚಾಗಲಿದೆ. ಜುಲೈ 15ರ ಹೊತ್ತಿಗೆ ಸೋಂಕಿತರ ಸಂಖ್ಯೆ 2.25 ಲಕ್ಷಕ್ಕೆ ಏರಿಕೆಯಾಗಲಿದೆ. ಹೀಗಾಗಿ ಬೆಡ್ ಗಳ ಅವಶ್ಯಕತೆ ಕೂಡ ಇನ್ನೂ ಹೆಚ್ಚಾಗಲಿದೆ. ದೆಹಲಿಯಲ್ಲಿಯೇ ಸೋಂಕಿತರ ಸಂಖ್ಯೆ 5.5 ಲಕ್ಷ ಏರಿಕೆಯಾಗಲಿದ್ದು, ಸುಮಾರು 80 ಸಾವಿರ ಬೆಡ್ ಗಳ ಅವಶ್ಯಕತೆ ಇದೆ ಎಂದು ಅವರು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೆಸಿಸಿ ಬ್ಯಾಂಕ್ ಗೆ ಪುಲಕೇಶಿ ಉಪನಾಳ ನಾಮನಿರ್ದೇಶನ

ಲಕ್ಷ್ಮೇಶ್ವರ: ಇಲ್ಲಿನ ಶ್ರೀ ಸೋಮೇಶ್ವರ ರೈತರ ಸಹಕಾರಿ ನೂಲಿನ ಗಿರಣಿ ಅಧ್ಯಕ್ಷರಾದ ಪುಲಿಕೇಶಿ ಗೂಳಪ್ಪ ಉಪನಾಳ…

ತೋಂಟದಾರ್ಯ ಇಂಜನೀಯರಿಂಗ್ ಕಾಲೇಜಿಗೆ ಎನ್.ಬಿ.ಎ ಮಾನ್ಯತೆ

ತೋಂಟದಾರ್ಯ ಇಂಜನೀಯರಿಂಗ್ ಕಾಲೇಜಿಗೆ ಎನ್.ಬಿ.ಎ ಮಾನ್ಯತೆ ದೊರೆತಿದೆ. ಈ ಮೂಲಕ ಗದಗ ಜಿಲ್ಲೆಯಲ್ಲಿ ಎನ್.ಬಿ.ಎ ಮಾನ್ಯತೆ ಪಡೆದ ಮೊದಲ ಕಾಲೆಜು ಎನ್ನುವ ಹೆಗ್ಗಳಿಗೆ ತೋಂಟದಾರ್ಯ ಇಂಜನೀಯರಿಂಗ್ ಕಾಲೇಜ್ ಪಾತ್ರವಾಗಿದೆ.

ಗಡಿಯಲ್ಲಿ ತೊಡೆ ತಟ್ಟಿ ನಿಂತಿದೆಯೇ ಚೀನಾ? ಬಗ್ಗು ಬಡಿಯದೆ ಬಿಡಲ್ಲ ಎನ್ನುತ್ತಿದ್ದಾರೆ ಭಾರತೀಯ ಸೈನಿಕರು!

ಬೀಜಿಂಗ್ : ಗಡಿಯಲ್ಲಿ ಉದ್ಧಟತನ ಮೆರೆಯುತ್ತಿರುವ ಚೀನಾ, ಯುದ್ಧದ ಉನ್ಮಾದದಲ್ಲಿ ಇದೆಯೇ ಎಂಬ ಸಂಶಯ ಮೂಡುತ್ತಿದೆ.