ನವದೆಹಲಿ : ಕೊರೊನಾಗೆ ದೆಹಲಿ ತತ್ತರಿಸಿ ಹೋಗಿದೆ. ಇದು ಹೀಗೆ ಮುಂದುವರೆದರೆ ಜುಲೈ ಅಂತ್ಯದ ವೇಳೆಗೆ ದೆಹಲಿಯಲ್ಲಿ 5.5 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಳ್ಳಲಿದೆ ಎಂದು ಡಿಸಿಎಂ ಮನೀಶ್ ಸಿಸೋಡಿಯಾ ಆತಂಕ ವ್ಯಕ್ತಪಡಿಸಿದ್ದಾರೆ.

ದೆಹಲಿಯಲ್ಲಿ ಕೊರೊನಾ ಆತಂಕ ಸೃಷ್ಟಿಸುತ್ತಿರುವ ಹಿನ್ನೆಲೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ಅನೀಲ್ ಬೈಜಾಲ್ ನಿವಾಸದಲ್ಲಿ ಮಹತ್ವದ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಡಿಸಿಎಂ ಮನೀಶ್ ಸಿಸೋಡಿಯಾ, ಆರೋಗ್ಯ ಸಚಿವ ಸತ್ಯಂದ್ರ ಜೈನ್ ಹಾಗೂ ದೆಹಲಿ ತುರ್ತು ನಿರ್ವಹಣಾ ಪ್ರಾಧಿಕಾರ ಅಧಿಕಾರಿಗಳು ಭಾಗವಹಿಸಿದ್ದರು.

ಜೂ. 15ರ ವೇಳೆಗೆ ದೆಹಲಿಯಲ್ಲಿ 44 ಸಾವಿರ ಜನರಲ್ಲಿ ಸೋಂಕು ಕಾಣಿಸಿಕೊಳ್ಳಲಿದೆ. 6,600 ಬೆಡ್ ಗಳ ಅವಶ್ಯಕತೆ ಇದೆ.

ಜೂ. 30ಕ್ಕೆ ಸೋಂಕಿತರ ಸಂಖ್ಯೆ 1 ಲಕ್ಷದ ಗಡಿ ದಾಟಲಿದೆ. ಆಗ ಕನಿಷ್ಠ 15 ಸಾವಿರ ಬೆಡ್ ಗಳ ಅವಶ್ಯಕತೆ ಇದೆ. ಜುಲೈನಲ್ಲಿ ಸೋಂಕಿತರ ಸಂಖ್ಯೆ ಇನ್ನೂ ಹೆಚ್ಚಾಗಲಿದೆ. ಜುಲೈ 15ರ ಹೊತ್ತಿಗೆ ಸೋಂಕಿತರ ಸಂಖ್ಯೆ 2.25 ಲಕ್ಷಕ್ಕೆ ಏರಿಕೆಯಾಗಲಿದೆ. ಹೀಗಾಗಿ ಬೆಡ್ ಗಳ ಅವಶ್ಯಕತೆ ಕೂಡ ಇನ್ನೂ ಹೆಚ್ಚಾಗಲಿದೆ. ದೆಹಲಿಯಲ್ಲಿಯೇ ಸೋಂಕಿತರ ಸಂಖ್ಯೆ 5.5 ಲಕ್ಷ ಏರಿಕೆಯಾಗಲಿದ್ದು, ಸುಮಾರು 80 ಸಾವಿರ ಬೆಡ್ ಗಳ ಅವಶ್ಯಕತೆ ಇದೆ ಎಂದು ಅವರು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಬಿಹಾರ ಸಮರ – ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ!

ಪಾಟ್ನಾ : ಬಿಹಾರ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯು ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಪ್ರಣಾಳಿಕೆಯಲ್ಲಿ ಎಲ್ಲರಿಗೂ ಉಚಿತ ವೈರಸ್ ಲಸಿಕೆ ನೀಡುವ ಭರವಸೆ ನೀಡಿದೆ.

ಸಿದ್ದರಾಮಯ್ಯ ಸ್ವಾರ್ಥ ರಾಜಕಾರಣವೇ ಪಕ್ಷ ಬಿಡಲು ಕಾರಣ: ಸಚಿವ ಬಿ.ಸಿ ಪಾಟೀಲ್…!

ಕೊಪ್ಪಳ: ಕಾಂಗ್ರೆಸ್ ನವರು ಶಾಸಕರನ್ನು ಸರಿಯಾದ ರೀತಿಯಲ್ಲಿ ನಡೆಸಿಕೊಳ್ಳದೆ ಅವರಿಗೆ ಮೋಸ ಮಾಡಿದರು. ಇದಲ್ಲದೆ ಮುಖ್ಯಮಂತ್ರಿಯಾಗಿ…

ಹಸಿರು ವಲಯದಲ್ಲಿದ್ದ ಚಾಮರಾಜನಗರದಲ್ಲಿ ಮನೆ ಮಾಡಿದ ಆತಂಕ!

ಇಲ್ಲಿಯವರೆಗೂ ಹಸಿರು ವಲಯದಲ್ಲಿದ್ದ ಚಾಮರಾಜನಗರ ಜಿಲ್ಲೆಯಲ್ಲಿ ಆತಂಕ ಮನೆ ಮಾಡಿದೆ. ಕೊರೊನಾ ಸೋಂಕಿತ ಪೊಲೀಸ್ ಪೇದೆ ಚಾಮರಾಜನಗರಕ್ಕೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ 22 ಜನರನ್ನು ಜನರನ್ನು ಕ್ವಾರಂಟೈನ್ ಮಾಡಲಾಗಿದೆ.

ಇಂದು ರಾಜ್ಯದಲ್ಲಿ 75 ಕೊರೋನಾ ಪಾಸಿಟಿವ್!: ಯಾವ ಜಿಲ್ಲೆಯಲ್ಲಿ ಎಷ್ಟು..?

ಇಂದು ರಾಜ್ಯದಲ್ಲಿ 75 ಕೊರೋನಾ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕು ತಗುಲಿದವರ ಸಂಖ್ಯೆ 2493 ಆಗಿದೆ.