ನವದೆಹಲಿ : ಕೊರೊನಾಗೆ ದೆಹಲಿ ತತ್ತರಿಸಿ ಹೋಗಿದೆ. ಇದು ಹೀಗೆ ಮುಂದುವರೆದರೆ ಜುಲೈ ಅಂತ್ಯದ ವೇಳೆಗೆ ದೆಹಲಿಯಲ್ಲಿ 5.5 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಳ್ಳಲಿದೆ ಎಂದು ಡಿಸಿಎಂ ಮನೀಶ್ ಸಿಸೋಡಿಯಾ ಆತಂಕ ವ್ಯಕ್ತಪಡಿಸಿದ್ದಾರೆ.

ದೆಹಲಿಯಲ್ಲಿ ಕೊರೊನಾ ಆತಂಕ ಸೃಷ್ಟಿಸುತ್ತಿರುವ ಹಿನ್ನೆಲೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ಅನೀಲ್ ಬೈಜಾಲ್ ನಿವಾಸದಲ್ಲಿ ಮಹತ್ವದ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಡಿಸಿಎಂ ಮನೀಶ್ ಸಿಸೋಡಿಯಾ, ಆರೋಗ್ಯ ಸಚಿವ ಸತ್ಯಂದ್ರ ಜೈನ್ ಹಾಗೂ ದೆಹಲಿ ತುರ್ತು ನಿರ್ವಹಣಾ ಪ್ರಾಧಿಕಾರ ಅಧಿಕಾರಿಗಳು ಭಾಗವಹಿಸಿದ್ದರು.

ಜೂ. 15ರ ವೇಳೆಗೆ ದೆಹಲಿಯಲ್ಲಿ 44 ಸಾವಿರ ಜನರಲ್ಲಿ ಸೋಂಕು ಕಾಣಿಸಿಕೊಳ್ಳಲಿದೆ. 6,600 ಬೆಡ್ ಗಳ ಅವಶ್ಯಕತೆ ಇದೆ.

ಜೂ. 30ಕ್ಕೆ ಸೋಂಕಿತರ ಸಂಖ್ಯೆ 1 ಲಕ್ಷದ ಗಡಿ ದಾಟಲಿದೆ. ಆಗ ಕನಿಷ್ಠ 15 ಸಾವಿರ ಬೆಡ್ ಗಳ ಅವಶ್ಯಕತೆ ಇದೆ. ಜುಲೈನಲ್ಲಿ ಸೋಂಕಿತರ ಸಂಖ್ಯೆ ಇನ್ನೂ ಹೆಚ್ಚಾಗಲಿದೆ. ಜುಲೈ 15ರ ಹೊತ್ತಿಗೆ ಸೋಂಕಿತರ ಸಂಖ್ಯೆ 2.25 ಲಕ್ಷಕ್ಕೆ ಏರಿಕೆಯಾಗಲಿದೆ. ಹೀಗಾಗಿ ಬೆಡ್ ಗಳ ಅವಶ್ಯಕತೆ ಕೂಡ ಇನ್ನೂ ಹೆಚ್ಚಾಗಲಿದೆ. ದೆಹಲಿಯಲ್ಲಿಯೇ ಸೋಂಕಿತರ ಸಂಖ್ಯೆ 5.5 ಲಕ್ಷ ಏರಿಕೆಯಾಗಲಿದ್ದು, ಸುಮಾರು 80 ಸಾವಿರ ಬೆಡ್ ಗಳ ಅವಶ್ಯಕತೆ ಇದೆ ಎಂದು ಅವರು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಸಿಎಂ ಗೆಹ್ಲೋಟ್ V/s ಡಿಸಿಎಂ ಪೈಲಟ್: ರಾಜಸ್ತಾನ ಸರ್ಕಾರ ಕೆಡವಲು ಆಪರೇಷನ್ ಕಮಲ

ರಾಜಸ್ತಾನದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಬಿಜೆಪಿ ದೊಡ್ಡ ಆಫರ್ ನೀಡಿತ್ತು ಎಂದು 20 ಕಾಂಗ್ರೆಸ್ ಶಾಸಕರು ಆರೋಪಿಸಿದ್ದಾರೆ. ಡಿಸಿಎಂ ಸಚೀನ್ ಪೈಲಟ್ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ.

ಆಮ್ಲಜನಕ ಪೂರೈಸುವಲ್ಲಿ ಸರ್ಕಾರ ಸಮರ್ಥವಿದೆ : ಸಚಿವ ಸುಧಾಕರ್

ಸರ್ಕಾರಿ ಆಸ್ಪತ್ರೆಗಳಲ್ಲಿ ಆಮ್ಲಜನಕ ಪೂರೈಸುವಲ್ಲಿ ನಮ್ಮ ಸರ್ಕಾರ ಸಮರ್ಥವಿದೆ. ಈಗಾಗಲೇ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಬಡವರಿಗೆ ವಿಶೇಷ ಪ್ಯಾಕೇಜ್ ಘೋಷಿಸಿದ ರಾಜ್ಯ ಸರ್ಕಾರ

ಲಾಕ್‌ಡೌನ್‌ನಿಂದ ಸಂಕಷ್ಟಕ್ಕೊಳಗಾಗಿರುವ ಜನರಿಗೆ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಿದೆ.

ದೇಹ ಮಾರುವುದಕ್ಕಾಗಿ ಕರೆ ತಂದಿದ್ದ ಅಪ್ರಾಪ್ತೆಯರನ್ನು ರಕ್ಷಿಸಿದ ಪೊಲೀಸರು!

ಜೈಪುರ : ಅಪ್ರಾಪ್ತ ಬಾಲಕಿಯರನ್ನು ದೇಹ ವ್ಯಾಪಾರಕ್ಕೆಂದು ಕರೆ ತಂದಿದ್ದ ತಂಡದ ಮೇಲೆ ಪೊಲೀಸರು ದಾಳಿ ನಡೆಸಿದ್ದು, 21 ಅಪ್ರಾಪ್ತೆಯರನ್ನು ರಕ್ಷಿಸಿದ್ದಾರೆ.