ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕೊರೊನಾ ತನ್ನ ಅಟ್ಟಹಾಸ ಮುಂದುವರೆಸಿದ್ದು, ಸಮುದಾಯ ಹಂತ ತಲುಪಿದೆ. ಆದರೆ, ಕೇಂದ್ರ ಸರ್ಕಾರದ ಘೋಷಣೆಗಾಗಿ ಕಾಯುತ್ತಿದ್ದೇವೆ ಎಂದು ಆರೋಗ್ಯ ಸಚಿವ ಸತ್ಯೇಂದರ್ ಜೈನ್ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮುದಾಯದ ಹಂತ ತಲುಪಿರುವುದಕ್ಕೆ ಏಮ್ಸ್ ನಿರ್ದೇಶಕ ಡಾ. ರಂದೀಪ್ ಗುಲೇರಿಯಾ ಒಪ್ಪಿಕೊಂಡಿದ್ದಾರೆ. ಆದರೆ, ಈ ಕುರಿತು ಘೋಷಣೆ ಮಾಡುವ ವಿಚಾರ ಕೇಂದ್ರ ಸರ್ಕಾರಕ್ಕೆ ಬಿಟ್ಟಿದ್ದು ಎಂದು ಅವರು ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಏಮ್ಸ್ ನಿರ್ದೇಶಕ ರಂದೀಪ್ ಗುಲೇರಿಯಾ, ದೆಹಲಿಯಲ್ಲಿ ಕೊರೊನಾ ಸಮುದಾಯದ ಹಂತ ತಲುಪಿದೆ. ಆದರೆ, ಕೇಂದ್ರ ಸರ್ಕಾರ ಇದನ್ನು ಒಪ್ಪಿಕೊಳ್ಳುತ್ತಿಲ್ಲ. ಸಮುದಾಯ ತಲುಪಿರುವ ಕುರಿತು ನಾವು ಘೋಷಣೆ ಮಾಡಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರವೇ ಇದನ್ನು ಘೋಷಣೆ ಮಾಡಬೇಕು ಎಂದು ಹೇಳಿದ್ದಾರೆ.