ಭೋಪಾಲ್: ಕಾಂಗ್ರೆಸ್ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ದಿಗ್ವಿಜಯ್ ಸಿಂಗ್ ಹೆಸರಿನಲ್ಲಿ ನಕಲಿ ಟ್ವೀಟರ್ ಖಾತೆ ತೆರೆದು, ಆಕ್ರಮಣಕಾರಿ ಪೋಸ್ಟ್ ಗಳನ್ನು ಹಾಕಲಾಗಿದೆ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ದಿಗ್ವಿಜಯ್ ಸಿಂಗ್ ಮಧ್ಯಪ್ರದೇಶದ ಸೈಬರ್ ಘಟಕದಲ್ಲಿ ದೂರು ದಾಖಲಿಸಿದ್ದಾರೆ.
ದಿಗ್ವಿಜಯ್ ಸಿಂಗ್ ಅವರು ಭೋಪಾಲ್ ನ ಸೈಬರ್ ಸೆಲ್ ಠಾಣೆಯಲ್ಲಿ ನೀಡಿರುವ ದೂರಿನಲ್ಲಿ, ಯಾವುದೋ ವ್ಯಕ್ತಿಯೊಬ್ಬ ನನ್ನ ಹೆಸರಿನಲ್ಲಿ ನಕಲಿ ಟ್ವೀಟರ್ ಖಾತೆಯನ್ನು ತೆರೆದು, ಅದನ್ನು ನಿರ್ವಹಿಸುತ್ತಿದ್ದು, ಆಕ್ರಮಣಕಾರಿಯಾದ ಪೋಸ್ಟ್ ಗಳನ್ನು ಹಂಚಿಕೊಳ್ಳುತ್ತಿದ್ದಾನೆ ಎಂದಿದ್ದಾರೆ. ಅಲ್ಲದೇ, ಈ ವ್ಯಕ್ತಿಯ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಮತ್ತು ನಕಲಿ ಟ್ವೀಟರ್ ಖಾತೆ ಮೂಲಕ ನಡೆಸಲಾಗುತ್ತಿರುವ ಕುಕೃತ್ಯವನ್ನು ತಕ್ಷಣ ನಿಲ್ಲಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ದೂರು ಸ್ವೀಕರಿಸಿದ ಬಳಿಕ ಕಾರ್ಯೋನ್ಮುಖರಾಗಿರುವ ಮಧ್ಯಪ್ರದೇಶ ಸೈಬರ್ ಸೆಲ್ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ಶ್ಯಾಮ್ ಸಿಂಗ್ ಸೋಲಂಕಿ, ಟ್ವೀಟರ್ ಇಂಡಿಯಾದೊಂದಿಗೆ ಸಂಭಾಷಣೆ ನಡೆಸಿ, ನಕಲಿ ಖಾತೆಯನ್ನು ಡಿಲೀಟ್ ಮಾಡಲು ಮನವಿ ಮಾಡಿದ್ದಾರೆ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *

You May Also Like

ತ್ರಿಪುರಾದಲ್ಲಿ ಸೈನಿಕರಿಗೆ ಮಾತ್ರ ಕಂಡು ಬಂದ ಸೋಂಕು!

ತ್ರಿಪುರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಸಾಗುತ್ತಿದೆ. ಮತ್ತೆ 24 ಜನ ಬಿಎಸ್ ಎಫ್ ಯೋಧರಲ್ಲಿ ಕೊರೊನಾ ಸೋಂಕು ಕಂಡು ಬಂದಿದ್ದು, ರಾಜ್ಯದಲ್ಲಿ ಒಟ್ಟು ಪ್ರಕರಣ 88 ಕ್ಕೆ ತಲುಪಿವೆ .

ಕೋವಿಡ್ ಚಿಕಿತ್ಸೆಗೆ ₹5 ಲಕ್ಷದವರೆಗೆ ಸಾಲ: ಸಾರ್ವಜನಿಕ ವಲಯದ ಬ್ಯಾಂಕುಗಳು ಘೋಷಣೆ

ಕೋವಿಡ್ ಎರಡನೇ ಅಲೆ ದೇಶಾದ್ಯಂತ ಹೆಚ್ಚು ವ್ಯಾಪಿಸಿ ಸಂದಿಗ್ಧ ಪರಿಸ್ಥಿತಿ ಉಂಟು ಮಾಡಿದ್ದು, ಇದರಿಂದ ಅಸುರಕ್ಷಿತ ಸಾಲ ನೀಡುಲು ನಿರ್ಧಾರ ಮಾಡಲಾಗಿದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇಂಡಿಯನ್ ಬ್ಯಾಂಕುಗಳ ಸಂಘ (ಐಬಿಎ) ಜಂಟಿಯಾಗಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿವೆ

ಮಾರುಕಟ್ಟೆಯಲ್ಲಿಲ್ಲ ಮೆಣಸಿನಕಾಯಿ ಘಾಟು..! ರೈತರಿಗೆ ತಪ್ಪದ ಪರಿಪಾಟಲು..!

ಕೊರೋನಾ ಕಾಟದಿಂದ ತೀವ್ರ ಸಂಕಷ್ಟ ಎದುರಿಸುತ್ತಿರುವ ರೈತರ ಸಂಕಷ್ಟದ ಬದುಕಿನ ಮೇಲೆ ಬೆಳಕು ಚೆಲ್ಲುವ ಪ್ರಯತ್ನ ನಿಮ್ಮ ಉತ್ತರ ಪ್ರಭ ಮಾಡಿದೆ

ರೈತರನ್ನು ರಾಸ್ಕಲ್ ಎಂದ ಸಚಿವರನ್ನು ಸಂಪುಟದಿಂದ ಕೈಬಿಟ್ಟು ಮಾನ ಉಳಿಸಿಕೊಳ್ಳಿ: ಸಿದ್ದರಾಮಯ್ಯ

ಅಹವಾಲು ಸಲ್ಲಿಸಲು ಬಂದಿದ್ದ ಅನ್ಯಾಯಕ್ಕೊಳಗಾಗಿರುವ ರೈತ ಮಹಿಳೆಯನ್ನು ನಿಂದಿಸಿದ ಸಚಿವ ಮಾಧುಸ್ವಾಮಿಯವರ ದುರ್ವರ್ತನೆ ಅಕ್ಷಮ್ಯ. ಅವರು ತಕ್ಷಣ ಆ ರೈತ ಮಹಿಳೆಯ ಕ್ಷಮೆ‌ ಯಾಚಿಸುವಂತೆ‌‌ ಮಾಡಿ, ಅವರನ್ನು‌ ಸಂಪುಟದಿಂದ ಕೈ ಬಿಟ್ಟು‌‌ ಸರ್ಕಾರದ ಮಾನ‌ ಉಳಿಸಬೇಕು