ಹೈದರಾಬಾದ್: ಹೈದರಾಬಾದ್ ನ ಗಾಂಧಿ ಆಸ್ಪತ್ರೆಯಲ್ಲಿ ಕೊರೊನಾ ರೋಗಿ ಚಿಕಿತ್ಸೆ ಫಲಕಾರಿಯಾಗದೆ ಬಲಿಯಾದ ನಂತರ ವೈದ್ಯರ ಮೇಲೆ ಹಲ್ಲೆ ನಡೆಸಲಾಗಿದೆ. ಕರ್ತವ್ಯನಿರತ ವೈದ್ಯರ ಮೇಲೆ ಸಾರ್ವಜನಿಕರು ಕಬ್ಬಿಣದ ಸರಳಿನಿಂದ ಹಲ್ಲೆ ನಡೆಸಿದ್ದಾರೆ ಎಂದು ವೈದ್ಯರು ಆರೋಪಿಸಿದ್ದಾರೆ. ಜೊತೆಗೆ, ಕನಿಷ್ಠ ರಕ್ಷಣೆ ನೀಡಬೇಕೆಂದು ಒತ್ತಾಯಿಸಿದ ವೈದ್ಯರು ಪ್ರತಿಭಟನೆ ನಡೆಸಿದರು. ತಪ್ಪಿಸಸ್ಥರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು, ಎಫ್ ಐ ಆರ್ ದಾಖಲಿಸಬೇಕು ಎಂದು ಅವರು ಒತ್ತಾಯಿಸಿದರು.

ದಾಳಿ ಕುರಿತು ಪ್ರತಿಕ್ರಿಯಿಸಿದ ಪ್ರತಿಭಟನಾ ನಿರತ ವೈದ್ಯರು, ನಾವು ಓವರ್ ಟೈಮ್ ಕೆಲಸ ಮಾಡಿದ್ದೇವೆ, ಒತ್ತಡ ಅನುಭವಿಸಿದ್ದೇವೆ ಮತ್ತೀಗ ನಮ್ಮನ್ನು ಥಳಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೊರೊನಾಗೆ ಚಿಕಿತ್ಸೆ ಪಡೆಯಲು 55 ವರ್ಷದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದರು. ಈ ವೇಳೆ ರೊಚ್ಚಿಗೆದ್ದ ಕುಟುಂಬಸ್ಥರ ಗುಂಪು ವೈದ್ಯರ ಮೇಲೆ ದಾಳಿ ನಡೆಸಿದೆ. ದಾಳಿ ನಡೆಸಿದ್ದರಿಂದ ಆಸ್ಪತ್ರೆಯಲ್ಲಿನ ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿರುವ ದೃಶ್ಯಗಳು ಕಂಡುಬಂದಿವೆ.

Leave a Reply

Your email address will not be published. Required fields are marked *

You May Also Like

ಪುದುಚೇರಿಯಲ್ಲಿ ನಾರಾಯಣ ಸ್ವಾಮಿ ಸರ್ಕಾರ ಪತನ!

ಬಹುಮತ ಸಾಬೀತು ಪಡಿಸಲು ಪುದುಚೇರಿ ಮುಖ್ಯಮಂತ್ರಿ ವಿ. ನಾರಾಯಣಸ್ವಾಮಿ ನೇತೃತ್ವದ ಸರ್ಕಾರ ವಿಫಲಗೊಂಡ ಕಾರಣ ಸರ್ಕಾರ ಪತನಗೊಂಡಿದೆ.

ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಗೆ ಕೊರೊನಾ ಪಾಸಿಟಿವ್..!

ಗಂಗಾವತಿ : ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿಯಲ್ಲಿ ಸೋಂಕು ಇರುವುದು ಖಚಿತವಾಗಿದೆ. ಈ ಘಟನೆ ಕಾರಟಗಿಯಲ್ಲಿ…

ಧಾರವಾಡದ ಸೋಂಕಿತ ವ್ಯಕ್ತಿಯಿಂದ ವೈದ್ಯರಿಗೂ ಶುರುವಾಗಿದೆ ಸಂಕಷ್ಟ!

ಹೊಸಯಲ್ಲಾಪುರ ಬಳಿಯ ಕೋಳಿಕೆರೆ ಪ್ರದೇಶದಲ್ಲಿನ ವ್ಯಕ್ತಿಗೆ ಕೊರೊನಾ ಸೋಂಕು ನಿನ್ನೆ ಕಂಡು ಬಂದಿದ್ದು, ಜಿಲ್ಲಾಡಳಿತ ಆ ವ್ಯಕ್ತಿಯ ಟ್ರಾವೆಲ್ ಹಿಸ್ಟರಿ ಕಲೆ ಹಾಕಿದೆ.

ಗದಗನಲ್ಲಿ ‌ಮತ್ತೊಂದು ಕೊರೊನಾ ಪಾಸಿಟಿವ್..!

ಜಿಲ್ಲೆಯ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಬೆಂಗಳೂರಿನಲ್ಲಿ ಪತ್ತೆಯಾಗಿದೆ. P-4079 ರೋಗಿ ಗದಗನ ನಗರದ ನಿವಾಸಿಯಾಗಿದ್ದು ಇತ್ತಿಚೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದು ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.