ಯಾದಗಿರಿ: ಮಹಾರಾಷ್ಟ್ರದ ಕೊರೊನಾದಿಂದಾಗಿ ಜಿಲ್ಲೆಯ ಜನರು ಕಂಗೆಟ್ಟು ಹೋಗಿದ್ದಾರೆ. ಸದ್ಯ ಮತ್ತೊಂದು ತಲೆನೋವು ಶುರುವಾಗಿದೆ. ವರದಿ ಬರುವ ಮುನ್ನವೇ ಕ್ವಾರಂಟೈನ್ ಕೇಂದ್ರದಲ್ಲಿದ್ದವರನ್ನು ಮನೆಗೆ ಕಳುಹಿಸಿದ ಪರಿಣಾಮ ಜಿಲ್ಲೆಯ ಜನರು ಆತಂಕದಲ್ಲಿ ಕಾಲ ಕಳೆಯುತ್ತಿದ್ದಾರೆ.
ಟೆಸ್ಟ್ ವರದಿ ಬರುವ ಮುನ್ನವೇ ಮಹಾರಾಷ್ಟ್ರದಿಂದ ಬಂದವರನ್ನು ಮನೆಗೆ ಕಳುಹಿಸಲಾಗಿದೆ. ಹೋಮ್ ಕ್ವಾರಂಟೈನ್ ನಲ್ಲಿದ್ದ ನಗರದ ವಿವಿಧ ವಾರ್ಡ್ ಗಳಲ್ಲಿನ 18 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಜನರು ಕ್ವಾರಂಟೈನ್ ನಲ್ಲಿದ್ದರೂ ನಿಯಮ ಉಲ್ಲಂಘಿಸಿ ವಿವಿಧೆಡೆ ಸಂಚಾರ ಮಾಡಿದ್ದಾರೆ. ಇದರಿಂದಾಗಿ ಜಿಲ್ಲಾಡಳಿತಕ್ಕೆ ತಲೆ ನೋವು ಶುರುವಾಗಿದೆ.
ನಗರದ ತಪಾಡಗೇರಾದಲ್ಲಿನ ಒಂದೇ ಕುಟುಂಬದ 15 ಜನರಲ್ಲಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಕೋಳಿವಾಡದ ಇಬ್ಬರಿಗೆ, ಲಕ್ಷ್ಮೀನಗರದ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಇವರೆಲ್ಲರೂ ಹೋಮ್ ಕ್ವಾರಂಟೈನ್ ನಲ್ಲಿದ್ದವರು. ಹೀಗಾಗಿ ಇವರ ಓಡಾಟದ ಬಗ್ಗೆ ತಲೆ ನೋವು ಶುರುವಾಗಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಲಕ್ಷ್ಮಿ ನಗರ ಹಾಗೂ ಕೋಳಿವಾಡ ಬಡವಾವಣೆಯ 100 ಮೀಟರ್ ವ್ಯಾಪ್ತಿಯನ್ನು ಕಂಟ್ಮೋನೆಂಟ್ ಝೋನ್ ಎಂದು ಘೋಷಣೆ ಮಾಡಿ, ಸೀಲ್ ಡೌನ್ ಮಾಡಲಾಗಿದೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿಂದು ಅಂತರ್ ಜಿಲ್ಲಾ ಪ್ರವಾಸದಿಂದ ಹೆಚ್ಚಿನ ಸೋಂಕು: ಯಾವ ಊರಲ್ಲಿ ಎಷ್ಟು?

ಗದಗ ಜಿಲ್ಲೆಯಲ್ಲಿ ಇಂದು ಪತ್ತೆಯಾದ ಸೋಂಕಿತರಲ್ಲಿ ಜಿಲ್ಲೆಯ ಯಾವ ತಾಲೂಕಿನಲ್ಲಿ ಸೋಂಕಿತರು ಇಂದು ಪತ್ತೆಯಾಗಿದ್ದಾರೆ ಎನ್ನುವ ಮಾಹಿತಿ ಇಲ್ಲಿದೆ ನೋಡಿ..

ಲಕ್ಷ್ಮೇಶ್ವರ:ಬತ್ತಿದ ಬೋರ್ ವೆಲ್ ನಲ್ಲಿ ಜಲಲ ಧಾರೆ…!

ಅಂತರ್ಜಲ ಹೆಚ್ಚಳದಿಂದ ಬತ್ತಿದ ಕೊಳವೆ ಬಾವಿಯಲ್ಲಿ ನೀರು ಚಿಮ್ಮುತ್ತಿದೆ. ಇದರಿಂದ ರೈತರಲ್ಲಿ ಸಂತಸ ಮೂಡಿದೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಲಕ್ಷ್ಮೇಶ್ವರ ತಾಲೂಕಿನ ಅಡರಕಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ.

ಚೀಟಿ ಎತ್ತುವ ಮೂಲಕ ಹುಡುಗನೊಂದಿಗೆ ಮದುವೆ

ನಾಲ್ವರು ಯುವಕರ ಜೊತೆ ಓಡಿಹೋಗಿದ್ದ ಹುಡುಗಿಯೊಬ್ಬಳು ಸಿಕ್ಕಿ ಬಿದ್ದ ವೇಳೆ ಯಾರೊಂದಿಗೆ ವಿವಾಹ ಮಾಡಿಸಬೇಕೆಂಬ ಗೊಂದಲಕ್ಕೆ ಸಿಲುಕಿದ ಗ್ರಾಮಸ್ಥರು ಅಂತಿಮವಾಗಿ ನಾಲ್ವರು ಯುವಕರ ಹೆಸರನ್ನು ಚೀಟಿ ಒಂದರಲ್ಲಿ ಬರೆದು ಲಾಟರಿ ಎತ್ತುವ ಮೂಲಕ ಅದರಲ್ಲಿದ್ದ ಹೆಸರಿನವನ ಮದುವೆ ಮಾಡಿಸಿದ್ದಾರೆ.

ದೈಹಿಕ ಶಿಕ್ಷಣ ನಿರ್ದೇಶಕ ಪ್ರಕಾಶ ನಿಧನಕ್ಕೆ ಗಣ್ಯರ ಸಂತಾಪ

ನಗರದ ಆರ್‌ಬಿಪಿಜಿ ಹಳಕಟ್ಟಿ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕ ಗುಲಾಬಚಂದ ಜಾಧವ ಅವರ ಕಿರಿಯ ಸಹೋದರ ಪ್ರಕಾಶ ಜಾಧವ ಅವರ ಅಕಾಲಿಕ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿ ಶೋಕ ವ್ಯಕ್ತಪಡಿಸಿದ್ದಾರೆ.