ಯಾದಗಿರಿ: ಮಹಾರಾಷ್ಟ್ರದ ಕೊರೊನಾದಿಂದಾಗಿ ಜಿಲ್ಲೆಯ ಜನರು ಕಂಗೆಟ್ಟು ಹೋಗಿದ್ದಾರೆ. ಸದ್ಯ ಮತ್ತೊಂದು ತಲೆನೋವು ಶುರುವಾಗಿದೆ. ವರದಿ ಬರುವ ಮುನ್ನವೇ ಕ್ವಾರಂಟೈನ್ ಕೇಂದ್ರದಲ್ಲಿದ್ದವರನ್ನು ಮನೆಗೆ ಕಳುಹಿಸಿದ ಪರಿಣಾಮ ಜಿಲ್ಲೆಯ ಜನರು ಆತಂಕದಲ್ಲಿ ಕಾಲ ಕಳೆಯುತ್ತಿದ್ದಾರೆ.
ಟೆಸ್ಟ್ ವರದಿ ಬರುವ ಮುನ್ನವೇ ಮಹಾರಾಷ್ಟ್ರದಿಂದ ಬಂದವರನ್ನು ಮನೆಗೆ ಕಳುಹಿಸಲಾಗಿದೆ. ಹೋಮ್ ಕ್ವಾರಂಟೈನ್ ನಲ್ಲಿದ್ದ ನಗರದ ವಿವಿಧ ವಾರ್ಡ್ ಗಳಲ್ಲಿನ 18 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಜನರು ಕ್ವಾರಂಟೈನ್ ನಲ್ಲಿದ್ದರೂ ನಿಯಮ ಉಲ್ಲಂಘಿಸಿ ವಿವಿಧೆಡೆ ಸಂಚಾರ ಮಾಡಿದ್ದಾರೆ. ಇದರಿಂದಾಗಿ ಜಿಲ್ಲಾಡಳಿತಕ್ಕೆ ತಲೆ ನೋವು ಶುರುವಾಗಿದೆ.
ನಗರದ ತಪಾಡಗೇರಾದಲ್ಲಿನ ಒಂದೇ ಕುಟುಂಬದ 15 ಜನರಲ್ಲಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಕೋಳಿವಾಡದ ಇಬ್ಬರಿಗೆ, ಲಕ್ಷ್ಮೀನಗರದ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಇವರೆಲ್ಲರೂ ಹೋಮ್ ಕ್ವಾರಂಟೈನ್ ನಲ್ಲಿದ್ದವರು. ಹೀಗಾಗಿ ಇವರ ಓಡಾಟದ ಬಗ್ಗೆ ತಲೆ ನೋವು ಶುರುವಾಗಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಲಕ್ಷ್ಮಿ ನಗರ ಹಾಗೂ ಕೋಳಿವಾಡ ಬಡವಾವಣೆಯ 100 ಮೀಟರ್ ವ್ಯಾಪ್ತಿಯನ್ನು ಕಂಟ್ಮೋನೆಂಟ್ ಝೋನ್ ಎಂದು ಘೋಷಣೆ ಮಾಡಿ, ಸೀಲ್ ಡೌನ್ ಮಾಡಲಾಗಿದೆ.

Leave a Reply

Your email address will not be published. Required fields are marked *

You May Also Like

3 ಲಕ್ಷ ರೂ. ಚಿನ್ನದ ಮಾಸ್ಕ್ ಧರಿಸುವ ಶಂಕರ್ ಕುರಾಡೆ

ಪುಣೆ: ಈ ಮನುಷ್ಯನಿಗೆ ಚಿನ್ನದ ಹುಚ್ಚು ಮತ್ತು ಪ್ರಚಾರದ ತೆವಲು ಎಷ್ಟಿದೆಯೆಂದರೆ, ಕೊರೋನಾ ಬಿಕ್ಕಟ್ಟಿನಲ್ಲಿ ಚಿನ್ನದ…

ಖಾಸಗಿ ಶಾಲಾ ಶಿಕ್ಷಕರ ಗೋಳು ಕೇಳುವವರು ಯಾರು?: ಶಿಕ್ಷಕರ ಸಮಸ್ಯೆಗೆ ಸ್ಪಂದಿಸಬೇಕಿದೆ ಸರ್ಕಾರ

ಲಾಕ್ ಡೌನ್ ಹಿನ್ನೆಲೆ ಜೂನ್ 1 ಕ್ಕೆ ಆರಂಭವಾಗಬೇಕಿದ್ದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಈವರೆಗೆ ಆರಂಭವಾಗಿಲ್ಲ. ಇದರಿಂದ ಖಾಸಗಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ತೀವ್ರ ತೊಂದರೆಗೀಡಾಗಿದ್ದಾರೆ.

ಕಟ್ಟಡ ಕಾರ್ಮಿಕರು ಲಾಕ್ ಡೌನ್ ಪರಿಹಾರಧನ ಪಡೆಯಲು ಇರುವ ಷರತ್ತುಗಳೇನು?

ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ಘೋಷಿಸಿರುವಂತೆ ನೊಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ರೂ.3,000 ಲಾಕ್ ಡೌನ್ ವಿಶೇಷ ಪರಿಹಾರಧನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.

ವಾಹನ ಸವಾರರಿಗೆ ಆರ್ ಟಿ ಒ ಶಾಕ್..!

ವಾಹನದ ನಮಬರ್ ಪ್ಲೇಟ್ ಮೇಲೆ ನೋಂದಣಿ ಸಂಖ್ಯೆ ಬಿಟ್ಟು ಬೇರೆ ಏನೇ ಇದ್ದರು ಅಂತಹ ವಾಹನ ಸವಾರರ ಮೇಲೆ ಕ್ರಮ ಜರುಗುಸಲಾಗುವುದು ಎಂದು ಪ್ರದೇಶಿಕ ಸಾರಿಗೆ ಕಚೇರಿ (ಆರ್ ಟಿ ಒ) ಆದೇಶ ಹೊರಡಿಸಿದ್ದು, ಮೇ 12 ರಿಂದಲೇ ಈ ನಿಯಮ ಜಾರಿಗೆ ಬರಲಿದೆ.