ಯಾದಗಿರಿ: ಮಹಾರಾಷ್ಟ್ರದ ಕೊರೊನಾದಿಂದಾಗಿ ಜಿಲ್ಲೆಯ ಜನರು ಕಂಗೆಟ್ಟು ಹೋಗಿದ್ದಾರೆ. ಸದ್ಯ ಮತ್ತೊಂದು ತಲೆನೋವು ಶುರುವಾಗಿದೆ. ವರದಿ ಬರುವ ಮುನ್ನವೇ ಕ್ವಾರಂಟೈನ್ ಕೇಂದ್ರದಲ್ಲಿದ್ದವರನ್ನು ಮನೆಗೆ ಕಳುಹಿಸಿದ ಪರಿಣಾಮ ಜಿಲ್ಲೆಯ ಜನರು ಆತಂಕದಲ್ಲಿ ಕಾಲ ಕಳೆಯುತ್ತಿದ್ದಾರೆ.
ಟೆಸ್ಟ್ ವರದಿ ಬರುವ ಮುನ್ನವೇ ಮಹಾರಾಷ್ಟ್ರದಿಂದ ಬಂದವರನ್ನು ಮನೆಗೆ ಕಳುಹಿಸಲಾಗಿದೆ. ಹೋಮ್ ಕ್ವಾರಂಟೈನ್ ನಲ್ಲಿದ್ದ ನಗರದ ವಿವಿಧ ವಾರ್ಡ್ ಗಳಲ್ಲಿನ 18 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಜನರು ಕ್ವಾರಂಟೈನ್ ನಲ್ಲಿದ್ದರೂ ನಿಯಮ ಉಲ್ಲಂಘಿಸಿ ವಿವಿಧೆಡೆ ಸಂಚಾರ ಮಾಡಿದ್ದಾರೆ. ಇದರಿಂದಾಗಿ ಜಿಲ್ಲಾಡಳಿತಕ್ಕೆ ತಲೆ ನೋವು ಶುರುವಾಗಿದೆ.
ನಗರದ ತಪಾಡಗೇರಾದಲ್ಲಿನ ಒಂದೇ ಕುಟುಂಬದ 15 ಜನರಲ್ಲಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಕೋಳಿವಾಡದ ಇಬ್ಬರಿಗೆ, ಲಕ್ಷ್ಮೀನಗರದ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಇವರೆಲ್ಲರೂ ಹೋಮ್ ಕ್ವಾರಂಟೈನ್ ನಲ್ಲಿದ್ದವರು. ಹೀಗಾಗಿ ಇವರ ಓಡಾಟದ ಬಗ್ಗೆ ತಲೆ ನೋವು ಶುರುವಾಗಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಲಕ್ಷ್ಮಿ ನಗರ ಹಾಗೂ ಕೋಳಿವಾಡ ಬಡವಾವಣೆಯ 100 ಮೀಟರ್ ವ್ಯಾಪ್ತಿಯನ್ನು ಕಂಟ್ಮೋನೆಂಟ್ ಝೋನ್ ಎಂದು ಘೋಷಣೆ ಮಾಡಿ, ಸೀಲ್ ಡೌನ್ ಮಾಡಲಾಗಿದೆ.

Leave a Reply

Your email address will not be published. Required fields are marked *

You May Also Like

ಲವ್ ಜಿಹಾದ್ ಪ್ರಕರಣ ಕ್ರಮಕ್ಕೆ ಒತ್ತಾಯಿಸಿ ಲಕ್ಷ್ಮೇಶ್ವರದಲ್ಲಿ ಮನವಿ

ಪಟ್ಟಣದಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿದ್ದು, ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ.

ನಟ ಚಿರು ಸಮಾಧಿಗೆ ಕುಟುಂಬಸ್ಥರಿಂದ ಪೂಜೆ

ನಟ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ನಿಧನರಾಗಿ ಹಿನ್ನಲೆಯಲ್ಲಿ ಕುಟುಂಬಸ್ಥರು ಬೆಂಗಳೂರಿನ ಹೊರವಲಯ ಕನಕಪುರದಲ್ಲಿರುವ ಧ್ರುವ ಸರ್ಜಾ ಫಾರ್ಮ್ ಹೌಸ್ಗೆ ತೆರಳಿ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ ಚುನಾವಣೆ: ಮತಗಟ್ಟೆಗೆ ಜಿಲ್ಲಾಧಿಕಾರಿ ಬೇಟಿ

ಗದಗ ಮುನ್ಸಿಪಲ್ ಕಾಲೇಜಿನಲ್ಲಿ ನಡೆಯುತ್ತಿರುವ ಮತಗಟ್ಟೆಗೆ ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲೆಯ ಹಿರಿಯ ಅಧಿಕಾರಿಗಳು ಬೇಟಿ ನೀಡಿ ಮತದಾನದ ವಿವರ ಪಡೆದರು.

ಹೆಲ್ತ್ ರಿಜಿಸ್ಟರ್ ಗೆ ಸರ್ಕಾರದ ಮುನ್ನುಡಿ: ತಜ್ಞರ ಜತೆ ಸಚಿವ ಸುಧಾಕರ್ ಸಮಾಲೋಚನೆ

ಆರೋಗ್ಯ ಕರ್ನಾಟಕ’ಕ್ಕೆ ವೇದಿಕೆ ಕಲ್ಪಿಸಲಿರುವ “ಹೆಲ್ತ್ ರಿಜಿಸ್ಟರ್’ ಯೋಜನೆ ಅನುಷ್ಠಾನಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮುನ್ನುಡಿ ಬರೆದರು.