ಬೆಂಗಳೂರು:  ನಗರದಲ್ಲಿ ಪೊಲೀಸ್ ಸಿಬ್ಬಂದಿಗೂ ಕೊರೊನಾ ಮಹಾಮಾರಿ ಬೆನ್ನು ಬಿದ್ದಿರುವುದಕ್ಕೆ ಇಲಾಖೆ ವಿಷಾದ ವ್ಯಕ್ತಪಡಿಸುತ್ತಿದೆ. ಸಶಸ್ತ್ರ ಮೀಸಲು ಪಡೆಯ ಒಬ್ಬರು ಸೇರಿದಂತೆ 6 ಜನರಿಗೆ ಸೋಂಕು ತಗುಲಿದೆ.

ಹೊಸದಾಗಿ ಕೆ.ಆರ್‌.ಮಾರ್ಕೆಟ್‌ ಸಿಬ್ಬಂದಿಯೊಬ್ಬರಿಗೆ ಮಂಗಳವಾರ ಸೋಂಕು ತಗುಲಿದ್ದು, ಆ ಠಾಣೆಯನ್ನು ಸೀಲ್‌ಡೌನ್‌ ಮಾಡಲಾಗಿದೆ. ಸೋಮವಾರವಷ್ಟೇ ಸೋಲದೇವನಹಳ್ಳಿ ಠಾಣೆಯ ಸಿಬ್ಬಂದಿಯೊಬ್ಬರಿಗೆ ಸೋಂಕು ದೃಢಪಟ್ಟಿತ್ತು. ಆ ಠಾಣೆಯನ್ನು ಸಹ ಬಂದ್‌ ಮಾಡಲಾಗಿದೆ.

ರಾಷ್ಟ್ರ ಮತ್ತು ರಾಜ್ಯದಲ್ಲಿ ಕ್ವಾರಂಟೈನ್‌ಗೆ ಒಳಪಟ್ಟವರಲ್ಲಿ ಸರಾಸರಿ ಶೇ.3ರಷ್ಟು ಮಂದಿಗೆ ಸೋಂಕು ತಗುಲಿದೆ ಎನ್ನಲಾಗುತ್ತಿದೆ. ನಗರದಲ್ಲಿ ಅಪರಾಧಿಗಳು ಸೇರಿದಂತೆ ಸಿಬ್ಬಂದಿಗೆ ಕೊರೊನಾ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಹಲವು ಠಾಣೆಗಳನ್ನು ಸೀಲ್ ಡೌನ್ ಮಾಡಲಾಗಿದೆ. ಅಲ್ಲದೇ, ಹಲವರನ್ನು ಕ್ವಾರಂಟೈನ್ ಮಾಡಲಾಗಿದೆ. ಹೆಬ್ಬಗೋಡಿ ಠಾಣೆಯಲ್ಲಿ 30 ಸಿಬ್ಬಂದಿ, ಚಾಮರಾಜಪೇಟೆ ಠಾಣೆಯಲ್ಲಿ 23 ಸಿಬ್ಬಂದಿ, ಫ್ರೇಜರ್‌ಟೌನ್‌ ಠಾಣೆಯಲ್ಲಿ 40 ಸಿಬ್ಬಂದಿ, ಬೈಯ್ಯಪ್ಪನಹಳ್ಳಿ ಠಾಣೆಯಲ್ಲಿ 16 ಸಿಬ್ಬಂದಿ, ಸೋಲದೇವನಹಳ್ಳಿ ಠಾಣೆಯಲ್ಲಿ 15 ಸಿಬ್ಬಂದಿ, ಜೆ.ಜೆ. ನಗರ ಠಾಣೆಯಲ್ಲಿ 33 ಸಿಬ್ಬಂದಿ, ಜೆ.ಬಿ ನಗರ ಠಾಣೆಯಲ್ಲಿ 20 ಸಿಬ್ಬಂದಿ,ಕೆ.ಆರ್‌.ಮಾರ್ಕೆಟ್‌ ಠಾಣೆಯಲ್ಲಿ 8 ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ.

Leave a Reply

Your email address will not be published. Required fields are marked *

You May Also Like

GTTC ಸಂಸ್ಥೆ ಧಾರವಾಡದಲ್ಲಿ ಯೋಗ ದಿನಾಚರಣೆ

ಉತ್ತರಪ್ರಭಧಾರವಾಡ: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ರಾಯಾಪುರ ಧಾರವಾಡದಲ್ಲಿ 8 ನೇ ಅಂತಾರಾಷ್ಟ್ರೀಯ ಯೋಗ…

ಲಕ್ಷ್ಮೇಶ್ವರ ತಾಲೂಕಿನಲ್ಲಿ 7 ಜನ ಅವಿರೋಧ ಆಯ್ಕೆ: 167 ಸ್ಥಾನಗಳಿಗೆ ಚುನಾವಣೆ

ತಾಲ್ಲೂಕಿನಲ್ಲಿ ಗ್ರಾಮ ಪಂಚಾಯ್ತಿಗಳ ಚುನಾವಣಾ ಕಣ ರಂಗೇರುತ್ತಿದೆ. ಸೋಮವಾರ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿತ್ತು.

15 ತಿಂಗಳ ಮಗುವನ್ನು ಮನೆಯಲ್ಲಿಯೇ ಬಿಟ್ಟು ಕೊರೊನಾ ವಿರುದ್ಧ ಹೋರಾಡುತ್ತಿರುವ ತಾಯಿ!

ಕೊರೊನಾ ವಾರಿಯರ್ಸ್ ತಮ್ಮ ಜೀವವನ್ನೇ ಮುಡಿಪಾಗಿಟ್ಟು ಕೆಲಸ ಮಡುತ್ತಿದ್ದಾರೆ. ಇಲ್ಲೊಬ್ಬರು ಸ್ಟಾಫ್ ನರ್ಸ್ ತಮ್ಮ 15 ತಿಂಗಳ ಹಸುಗೂಸನ್ನು ಮನೆಯಲ್ಲಿಯೇ ಬಿಟ್ಟು ಕೊರೊನಾ ವಿರುದ್ಧ ಹೋರಾಡುತ್ತಿದ್ದು, ವಾರಿಯರ್ಸ್ ನಡುವೆಯೇ ಮಾದರಿಯಾಗಿದ್ದಾರೆ.

ವಿದ್ಯಾರ್ಥಿಗಲಿಗೆ ಈ ವರ್ಷ ಸೈಕಲ್ ಸಿಗೋದು ಡೌಟ್!

ರಾಜ್ಯದ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಆರ್ಥಿಕ ಬಿಕ್ಕಟ್ಟಿನಿಂದಾಗಿ ರಾಜ್ಯ ಸರ್ಕಾರ ಈ ವರ್ಷ ಸೈಕಲ್ ಖರೀದಿಯನ್ನು ಕೈ ಬಿಡಲು ನಿರ್ಧರಿಸಿದೆ ಎನ್ನಲಾಗಿದೆ.