ಹೈದರಾಬಾದ್:  ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಜನಾಂಗೀಯ ನಿಂದನೆಗೆ ಒಳಗಾಗಿದ್ದೆ ಎಂದು ವೆಸ್ಟ್ ಇಂಡೀಸ್ ಕ್ರಿಕೆಟಿಗ ಡ್ಯಾರೆನ್ ಸಮ್ಮಿ ನೀಡಿರುವ ಹೇಳಿಕೆಯನ್ನು ಸನ್ ರೈಸರ್ಸ್ ಹೈದರಾಬಾದ್ ತಂಡದ ಮಾಜಿ ಆಟಗಾರರು ನಿರಾಕರಿಸಿದ್ದಾರೆ.

ಡ್ಯಾರೆನ್ ಸಮ್ಮಿ ಆಡುತ್ತಿದ್ದ ವೇಳೆ ಹೈದರಾಬದ್ ತಂಡದಲ್ಲಿದ್ದ ವಿಕೆಟ್ ಕೀಪರ್ ಪಾರ್ಥೀವ್ ಪಟೇಲ್, ಆಲ್ ರೌಂಡರ್ ಇರ್ಫಾನ್ ಪಠಾಣ್ ಮತ್ತು ಬ್ಯಾಟ್ಸಮನ್ ಆಗಿದ್ದ ವೇಣುಗೋಪಾಲ್ ಈ ಮಾತುಗಳನ್ನು ಅಲ್ಲಗಳೆದಿದ್ದಾರೆ. ಅದು ಮಾತ್ರವಲ್ಲ, ಡ್ಯಾರೆನ್ ಸಮ್ಮಿ ವಿರುದ್ಧ ಅಂತಹ ಟೀಕೆಗಳನ್ನು ನಾವು ಯಾವತ್ತೂ ಕೇಳಿಲ್ಲ ಎಂದಿದ್ದಾರೆ.

ಸನ್ ರೈಸರ್ಸ್ ಹೈದರಾಬಾದ್ ತಂಡದ ಪರವಾಗಿ ಆಡುತ್ತಿದ್ದಾಗ ನನ್ನನ್ನು ಮತ್ತು ಶ್ರೀಲಂಕಾದ ತಿಸ್ಸರಾ ಪೆರರಾ ಅವರನ್ನು ಕಲು ಎಂದು ಕರೆಯುತ್ತಿದ್ದರು. ಮೊದಲು ಅರ್ಥವಾಗಲಿಲ್ಲ. ನಮ್ಮನ್ನು ಪ್ರೀತಿಯಿಂದ ಕರೆಯುತ್ತಿದ್ದರು ಎಂದು ಖುಷಿ ಪಟ್ಟಿದ್ದೆ. ಆದರೆ ಈಗ ಅದರ ಅರ್ಥ ಗೊತ್ತಾಗಿದೆ ಎಂದು ಡ್ಯಾರೆನ್ ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಮತ್ತೆ ಪ್ರವಾಹ.. ಉತ್ತರ ಕರ್ನಾಟಕಕ್ಕೆ ಮತ್ತೆ ಸಂಕಷ್ಟ

ಹಳೆ ಗಾಯ ಇನ್ನೂ ಮಾಸಿಲ್ಲ. ಈಗ ಮತ್ತೆ ನಾಡಿನ ಜನರಿಗೆ ಜಲಾಘಾತ ಒಕ್ಕರಿಸಿದೆ. ಜಲಸ್ಫೋಟಕ್ಕೆ ಉತ್ತರ ಕರ್ನಾಟಕದ ಹಲವು ಗ್ರಾಮಗಳ ಸಾವಿರಾರೂ ಎಕರೆ ಬೆಳೆ ಜೊತೆಗೆ ಅವರ ಬದುಕು ಮತ್ತೆ ನೀರು ಪಾಲಾಗಿದೆ. ರಕ್ಕಸ ಪ್ರವಾಹಕ್ಕೆ ಎಲ್ಲವೂ ಕಳೆದುಕೊಂಡು ಕಣ್ಣೀರು ಹಾಕುತ್ತಿರುವ ಜನರ ಕಥೆ ಕೇಳಿದಾಗ ಕರಳು ಕಿತ್ತು ಬರುತ್ತೆ. ಮನೆಯ ಬಾಗಿಲಿಗೆ ಮತ್ತೆ ನದಿಗಳು ಭೇಟಿ ನೀಡಿವೆ. ಬದುಕನ್ನೇ ನಲುಗಿಸಿಬಿಟ್ಟಿವೆ. ರಸ್ತೆ, ಹೊಲ ಗದ್ದೆ, ಮನೆ ಮಠಗಳು ನೀರು ಪಾಲಾಗುತ್ತಿವೆ.

ರೋಣ: ತಾಲೂಕಿನ ಸಮಗ್ರ ಅಭಿವೃದ್ಧಿಗೆ ಒತ್ತಾಯಿಸಿ ಧರಣಿ; ಐಷಾರಾಮಿ ವಾಹನದಲ್ಲಿ ಓಡಾಡುವವರಿಗೆ ನಮ್ಮ ಕಷ್ಟ ಗೊತ್ತಾಗೋದು ಹೇಗೆ?

ಸಾರ್ವಜನಿಕರು ಪ್ರತಿನಿತ್ಯ ಪರದಾಡುತ್ತಿರುವಾಗ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಐಷಾರಾಮಿ ವಾಹನದಲ್ಲಿ ಅಡ್ಡಾಡುತ್ತಿರುವಾಗ ನಮ್ಮಂತವರ ಕಷ್ಟ ನಿಮಗೆ ಹೇಗೆ ಗೊತ್ತಾಗುತ್ತದೆ ಎಂದು ತಾಲೂಕು ದಲಿತ ಸಂಘಟನೆಯ ಮುಖಂಡ ವೀರಪ್ಪ ತೆಗ್ಗಿನಮನಿ ಆಕ್ರೋಶ ವ್ಯಕ್ತಪಡಿಸಿದರು.

ಧೋನಿ ನಿವೃತ್ತಿಯಾಗಲು ಇದೂ ಕಾರಣವಂತೆ!

ಕೊರೊನಾವೈರಸ್, ಟೀಮ್ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ನಿವೃತ್ತಿಯ ನಿರ್ಧಾರ ತಾಳುವಂತೆ ಮಾಡಿತು ಎಂದು ಭಾರತದ ಸ್ಪಿನ್ನರ್ ಯುಜುವೇಂದ್ರ ಚಾಹಲ್ ಬೇಸರ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿಂದು 1272 ಕೊರೊನಾ ಪಾಸಿಟಿವ್! : ಒಟ್ಟು ಸೋಂಕಿತರ ಸಂಖ್ಯೆ 16514ಕ್ಕೆ ಏರಿಕೆ!

ರಾಜ್ಯದಲ್ಲಿಂದು 1272 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 16514 ಕ್ಕೆ ಏರಿಕೆಯಾದಂತಾಗಿದೆ.