ಜೈಪುರ: ಮಹಾಮಾರಿಯ ಅಟ್ಟಹಾಸ ದೇಶದ ಹಲವು ರಾಜ್ಯಗಳಲ್ಲಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ರಾಜಸ್ಥಾನದ ಗಡಿ ಬಂದ್ ಮಾಡಲಾಗಿದೆ.

ಒಂದು ವಾರದ ಮಟ್ಟಿಗೆ ರಾಜಸ್ತಾನ ಸರ್ಕಾರ ರಾಜ್ಯ ಎಲ್ಲಾ ಗಡಿಗಳನ್ನು ಬಂದ್ ಮಾಡಿದೆ. ಎನ್ಒಸಿ ಪ್ರಮಾಣ ಪತ್ರವಿಲ್ಲದೆ ಯಾರೊಬ್ಬರೂ ರಾಜ್ಯ ಪ್ರವೇಶಿಸುವಂತಿಲ್ಲ. ಅಲ್ಲದೆ, ಪಾಸ್ ಗಳಿಲ್ಲದೆ, ರಾಜ್ಯದಿಂದ ಯಾರೊಬ್ಬರು ಹೊರಗೆ ಹೋಗುವಂತಿಲ್ಲ ಎಂದು ಸರ್ಕಾರ ತಿಳಿಸಿದೆ.

ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ಆಯುಕ್ತರಿಗೆ ಪಾಸ್ ವಿತರಿಸುವ ಹೊಣೆಯನ್ನು ನೀಡಲಾಗಿದ್ದು, ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಹಾಗೂ ಸಾವಿಗೀಡಾದ ಕುಟುಂಬಸ್ಥರಿಗೆ ಆದೇಶದಲ್ಲಿ ವಿನಾಯಿತಿ ನೀಡಲಾಗಿದೆ. ರಾಜ್ಯದಲ್ಲಿ ಇಲ್ಲಿಯವರೆಗೂ 11,368 ಜನರಿಗೆ ಸೋಂಕು ತಗುಲಿದೆ.

Leave a Reply

Your email address will not be published. Required fields are marked *

You May Also Like

ಕೋಲಾರದ ಸುತ್ತಮುತ್ತ ಆವರಿಸಿದೆ ಕೊರೊನಾ!

ಲಾಕ್ಡೌನ್ ಸಡಿಲಿಕೆ ಮಾಡಿದ್ದರಿಂದಾಗಿ ಹಾಗೂ ಗಡಿ ರಾಜ್ಯಗಳಲ್ಲಿ ಪತ್ತೆಯಾಗಿರುವ ಕೊರೊನಾ ಪ್ರರಕಣಗಳ ಸಂಖ್ಯೆಯಿಂದಾಗಿ ಜಿಲ್ಲೆಯ ಜನರದಲ್ಲಿ ಆತಂಕ ಮನೆ ಮಾಡಿದ್ದು, ಇಲ್ಲಿ ಕೂಡ ಕೊರೊನಾ ಭಯ ಕಾಡುತ್ತಿದೆ.

ಬಿಜೆಪಿ ನಾಯಕನ ಮುಖಕ್ಕೆ ಮಸಿ ಬಳಿದ ಶಿವಸೇನೆ ಕಾರ್ಯಕರ್ತರು!

ಮುಂಬಯಿ : ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರ ವಿರುದ್ಧ ಟೀಕೆ ಮಾಡಿದ್ದಾರೆ ಎಂಬ ಕಾರಣಕ್ಕೆ ಬಿಜೆಪಿ ನಾಯಕನ ಮುಖಕ್ಕೆ ಶಿವಸೇನೆ ಕಾರ್ಯಕರ್ತರು ಮಸಿ ಬಳೆದಿರುವ ಘಟನೆ ನಡೆದಿದೆ.

ರಾಜ್ಯದಲ್ಲಿಂದು 388 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು ಕೊರೊನಾ ಪಾಸಿಟಿವ್ 388 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 3796 ಕ್ಕೆ ಏರಿಕೆಯಾದಂತಾಗಿದೆ.

ಮತ್ತೆ ಬಾಲ ಬಿಚ್ಚಿದ ಪಾಕ್ – ಓರ್ವ ಸೇನಾಧಿಕಾರಿ ಹುತಾತ್ಮ

ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣಾ ರೇಖೆಯ ಬಳಿ ಪಾಕಿಸ್ತಾನ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಭಾರತೀಯ ಸೇನೆಯ ಓರ್ವ ಕಿರಿಯ ಸೇನಾಧಿಕಾರಿ(ಜೆಸಿಒ) ಹುತಾತ್ಮರಾಗಿದ್ದಾರೆ ಎಂದು ಸೇನೆಯ ಮೂಲಗಳು ತಿಳಿಸಿವೆ.