ಜೈಪುರ: ಮಹಾಮಾರಿಯ ಅಟ್ಟಹಾಸ ದೇಶದ ಹಲವು ರಾಜ್ಯಗಳಲ್ಲಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ರಾಜಸ್ಥಾನದ ಗಡಿ ಬಂದ್ ಮಾಡಲಾಗಿದೆ.
ಒಂದು ವಾರದ ಮಟ್ಟಿಗೆ ರಾಜಸ್ತಾನ ಸರ್ಕಾರ ರಾಜ್ಯ ಎಲ್ಲಾ ಗಡಿಗಳನ್ನು ಬಂದ್ ಮಾಡಿದೆ. ಎನ್ಒಸಿ ಪ್ರಮಾಣ ಪತ್ರವಿಲ್ಲದೆ ಯಾರೊಬ್ಬರೂ ರಾಜ್ಯ ಪ್ರವೇಶಿಸುವಂತಿಲ್ಲ. ಅಲ್ಲದೆ, ಪಾಸ್ ಗಳಿಲ್ಲದೆ, ರಾಜ್ಯದಿಂದ ಯಾರೊಬ್ಬರು ಹೊರಗೆ ಹೋಗುವಂತಿಲ್ಲ ಎಂದು ಸರ್ಕಾರ ತಿಳಿಸಿದೆ.
ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ಆಯುಕ್ತರಿಗೆ ಪಾಸ್ ವಿತರಿಸುವ ಹೊಣೆಯನ್ನು ನೀಡಲಾಗಿದ್ದು, ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಹಾಗೂ ಸಾವಿಗೀಡಾದ ಕುಟುಂಬಸ್ಥರಿಗೆ ಆದೇಶದಲ್ಲಿ ವಿನಾಯಿತಿ ನೀಡಲಾಗಿದೆ. ರಾಜ್ಯದಲ್ಲಿ ಇಲ್ಲಿಯವರೆಗೂ 11,368 ಜನರಿಗೆ ಸೋಂಕು ತಗುಲಿದೆ.