ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿಯೇ ಸಾವನ್ನಪ್ಪಿದ ವೈದ್ಯ!

ಹಾಸನ: ಕೊರೊನಾ ವಿರುದ್ಧ ಹೋರಾಡುತ್ತಿದ್ದ ವೈದ್ಯ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿಯೇ ಅನಾರೋಗ್ಯದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

ಶಿವಕಿರಣ್ ಮೃತ ದುರ್ದೈವಿ ವೈದ್ಯ. ಕೊರೊನಾ ವಿರುದ್ಧ ವೈದ್ಯ ಶಿವಕಿರಣ್ ರಜೆಯಿಲ್ಲದೇ ನಿರಂತರವಾಗಿ ಕೆಲಸ ಮಾಡಿದ್ದರು. ಕೆಲಸದ ಸಮಯದಲ್ಲಿ ತಲೆನೋವಿನಿಂದ ಬಳಲಿದ್ದ ಅವರು, ಶಿವಕಿರಣ್ ಸಹೋದ್ಯೋಗಿಗಳ ಬಳಿ ಈ ಕುರಿತು ಹೇಳಿಕೊಂಡಿದ್ದರು. ಆದರೆ ಕಳೆದು ಐದು ದಿನದ ಹಿಂದೆ ಕರ್ತವ್ಯದಲ್ಲಿದ್ದಾಗಲೇ ಶಿವಕಿರಣ್ ತಲೆ ಸುತ್ತಿ ಬಿದ್ದಿದ್ದರು.

ತಕ್ಷಣ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 5 ದಿನ ವೆಂಟಿಲೇಶನ್ನತಲ್ಲಿ ಇದ್ದ ವೈದ್ಯ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾರೆ.

Exit mobile version