ಯಾದಗಿರಿ: ಕೊರೊನಾ ವೈರಸ್, ಈಗ ಜಿಲ್ಲೆಯ ಮದುವೆ ಮನೆಯೊಂದರ ಬಾಗಿಲಿಗೆ ತೆರಳಿದೆ. ನಾಳೆ ಮದುವೆಯಾಗಬೇಕಿದ್ದ ವಧುವಿನ ತಂದೆ ಹಾಗೂ ತಂಗಿಗೆ ಕೊರೊನಾ ಅಂಟಿಕೊಂಡಿದೆ.
ಯಾದಗಿರಿ ತಾಲೂಕಿನ ಅಲ್ಲಿಪೂರತಾಂಡಾದ ಯುವತಿ ಜೊತೆ ನಾಲ್ವಾರತಾಂಡಾದ ಯುವಕನ ನಾಳೆ(ಗುರುವಾರ) ಮದುವೆ ನಿಗದಿಯಾಗಿತ್ತು. ಮದುವೆ ಮನೆಯಲ್ಲಿ ಈಗ ಆತಂಕದ ವಾತಾವರಣ ಸೃಷ್ಟಿಸಿದೆ. ಹೀಗಾಗಿ ಮದುವೆಯನ್ನು ಮುಂದಕ್ಕೆ ಹಾಕಲಾಗಿದೆ.
ವಧು ಮತ್ತು ಕುಟುಂಬಸ್ಥರು, ಸದ್ಯ ಆಂಧ್ರಪ್ರದೇಶದ ನೆಲ್ಲೂರನಲ್ಲಿ ವಾಸವಿದ್ದಾರೆ. ಮಗಳ ಮದುವೆ ಮಾಡುವ ಹಿನ್ನೆಲೆಯಲ್ಲಿ ಈ ಕುಟುಂಬ ಕಳೆದ 10 ದಿನಗಳ ಹಿಂದೆ ಜಿಲ್ಲೆಗೆ ಆಗಮಿಸಿತ್ತು. ಅಂತರ್ ರಾಜ್ಯ ಪ್ರಯಾಣದ ಹಿನ್ನೆಲೆ ಈ ಕುಟುಂಬದ ಎಲ್ಲರಿಗೂ ಪರೀಕ್ಷೆ ಮಾಡಿ ಸ್ಯಾಂಪನ್ ಗಳನ್ನು ಲ್ಯಾಬ್ ಗೆ ಕಳುಹಿಸಲಾಗಿತ್ತು. ಇವರೆಲ್ಲರನ್ನು ಏಳು ದಿನ ಕ್ವಾರೆಂಟೈನ್ ನಲ್ಲಿಟ್ಟು ವರದಿ ಬರುವ ಮುನ್ನವೇ ಮನೆಗೆ ಕಳುಹಿಸಲಾಗಿತ್ತು. ಸದ್ಯ ಇವರ ಫಲಿತಾಂಶ ಹೊರ ಬಿದ್ದಿದ್ದು, ಇದರಲ್ಲಿ ತಂದೆ ಮತ್ತು ಮಗಳಿಗೆ ಕೊರೊನಾ ಪಾಸಿಟಿವ್ ಧೃಡಪಟ್ಟಿದೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ನಿಲ್ಲದ ಸೋಂಕಿನ ಸುಳಿ: ಯಾವ ಊರಲ್ಲಿ ಎಷ್ಟು?

ಜಿಲ್ಲೆಯಲ್ಲಿ ಭಾನುವಾರ ದಿ. 19 ರಂದು 28 ಜನರಿಗೆ(ಹೆಲ್ಥ್ ಬುಲಿಟಿನ್ ನಲ್ಲಿ 30) ಕೊವಿಡ್-19 ಸೋಂಕು ದೃಢಪಟ್ಟಿದ್ದು, ವಿವರ ಇಂತಿದೆ.ಗದಗ ನಗರದ ಸಾಲ ಓಣಿ ನಿವಾಸಿ (15 ವರ್ಷದ ಮಹಿಳೆ),

0% ಲವ್ ಚಿತ್ರದ ಅಭಿರಾಮ್ ಹಿಂಬಾಲಿಸಿದ ಮಂಜುನಾಥ್

ಬೆಂಗಳೂರು: ಕೊರೊನಾ ವೈರಸ್ ಎರಡನೇ ಅಲೆಗೆ ಸ್ಯಾಂಡಲ್ವುಡ್ನ ಸಾಕಷ್ಟು ಮಂದಿ ಮೃತಪಟ್ಟಿದ್ದಾರೆ. ಸ್ಯಾಂಡಲ್ವುಡ್ ಯುವ ನಟ ಹಾಗೂ ನಿರ್ಮಾಪಕ ಡಾ. ಡಿ.ಎಸ್.ಮಂಜುನಾಥ್ ಏಪ್ರಿಲ್ ತಿಂಗಳಲ್ಲಿ ಮೃತಪಟ್ಟಿದ್ದರು. ಈಗ ಇವರು ನಿರ್ಮಾಣ ಮಾಡಿದ ಎರಡು ಚಿತ್ರಗಳ ನಿರ್ದೇಶಕ ಅಭಿರಾಮ್ ಕೊವಿಡ್ನಿಂದ ಮೃತಪಟ್ಟಿದ್ದಾರೆ. ಅವರಿಗೆ 34 ವರ್ಷ ವಯಸ್ಸಾಗಿತ್ತು.

ಕಾಂಗ್ರೆಸ್ ನ ಬಂಡೆಗೆ ನಮ್ಮ ಡೈನಾಮೈಟ್ ಗಳು ಉತ್ತರ ನೀಡಲಿವೆ – ಕಟೀಲ್!

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಗುಡುಗಿದ್ದಾರೆ.

ಡ್ರಗ್ಸ್ ವಿಚಾರ: ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ಬಂಧನ

ಇತ್ತಿಚೆಗೆ ಕೆಲವು ದಿನಗಳಿಂದ ಡ್ರಗ್ಸ್ ವಿಷಯ ರಾಜ್ಯದಲ್ಲಿ ಬಹಳಷ್ಟು ಚರ್ಚೆಗೆ ಗ್ರಾಸವಾಗಿದೆ. ಚಿತ್ರ ನಟಿಯ ಡ್ರಗ್ಸ್ ಜಾಲದ ಬೆನ್ನಲ್ಲೆ ಈಗ ಜನಪ್ರತಿನಿಧಿಗಳ ಪುತ್ರರೀಗೂ ಈ ನಂಟು ವ್ಯಾಪಿಸುತ್ತಿದೆ.