ಯಾದಗಿರಿ: ಕೊರೊನಾ ವೈರಸ್, ಈಗ ಜಿಲ್ಲೆಯ ಮದುವೆ ಮನೆಯೊಂದರ ಬಾಗಿಲಿಗೆ ತೆರಳಿದೆ. ನಾಳೆ ಮದುವೆಯಾಗಬೇಕಿದ್ದ ವಧುವಿನ ತಂದೆ ಹಾಗೂ ತಂಗಿಗೆ ಕೊರೊನಾ ಅಂಟಿಕೊಂಡಿದೆ.
ಯಾದಗಿರಿ ತಾಲೂಕಿನ ಅಲ್ಲಿಪೂರತಾಂಡಾದ ಯುವತಿ ಜೊತೆ ನಾಲ್ವಾರತಾಂಡಾದ ಯುವಕನ ನಾಳೆ(ಗುರುವಾರ) ಮದುವೆ ನಿಗದಿಯಾಗಿತ್ತು. ಮದುವೆ ಮನೆಯಲ್ಲಿ ಈಗ ಆತಂಕದ ವಾತಾವರಣ ಸೃಷ್ಟಿಸಿದೆ. ಹೀಗಾಗಿ ಮದುವೆಯನ್ನು ಮುಂದಕ್ಕೆ ಹಾಕಲಾಗಿದೆ.
ವಧು ಮತ್ತು ಕುಟುಂಬಸ್ಥರು, ಸದ್ಯ ಆಂಧ್ರಪ್ರದೇಶದ ನೆಲ್ಲೂರನಲ್ಲಿ ವಾಸವಿದ್ದಾರೆ. ಮಗಳ ಮದುವೆ ಮಾಡುವ ಹಿನ್ನೆಲೆಯಲ್ಲಿ ಈ ಕುಟುಂಬ ಕಳೆದ 10 ದಿನಗಳ ಹಿಂದೆ ಜಿಲ್ಲೆಗೆ ಆಗಮಿಸಿತ್ತು. ಅಂತರ್ ರಾಜ್ಯ ಪ್ರಯಾಣದ ಹಿನ್ನೆಲೆ ಈ ಕುಟುಂಬದ ಎಲ್ಲರಿಗೂ ಪರೀಕ್ಷೆ ಮಾಡಿ ಸ್ಯಾಂಪನ್ ಗಳನ್ನು ಲ್ಯಾಬ್ ಗೆ ಕಳುಹಿಸಲಾಗಿತ್ತು. ಇವರೆಲ್ಲರನ್ನು ಏಳು ದಿನ ಕ್ವಾರೆಂಟೈನ್ ನಲ್ಲಿಟ್ಟು ವರದಿ ಬರುವ ಮುನ್ನವೇ ಮನೆಗೆ ಕಳುಹಿಸಲಾಗಿತ್ತು. ಸದ್ಯ ಇವರ ಫಲಿತಾಂಶ ಹೊರ ಬಿದ್ದಿದ್ದು, ಇದರಲ್ಲಿ ತಂದೆ ಮತ್ತು ಮಗಳಿಗೆ ಕೊರೊನಾ ಪಾಸಿಟಿವ್ ಧೃಡಪಟ್ಟಿದೆ.

Leave a Reply

Your email address will not be published. Required fields are marked *

You May Also Like

ವಿಧಾನ ಪರಿಷತ್ ಚುನಾವಣೆ ಪ್ರಚಾರಕ್ಕೆ ಗದಗ ಆಗಮಿಸಿದ ಸಿ ಎಂ ಬೊಮ್ಮಾಯಿ

ಉತ್ತರಪ್ರಭ ಸುದ್ದಿ ಗದಗ: ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನುಹಮ್ಮಿಕೋಂಡಿದ್ದ ಸಿ ಎಂ ಬಸವರಾಜ ಬೊಮ್ಮಾಯಿಯವರು ಇಂದು ಗದಗ…

ಚಾಮುಂಡೇಶ್ವರಿ ತಾಯಿಗೆ ಹರಕೆ ತೀರಿಸಿದ ಜಿಲ್ಲಾಧಿಕಾರಿ ರೋಹಿಣಿ!

ಮೈಸೂರು : ತಾಯಿ ಚಾಮುಂಡೇಶ್ವರಿಗೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಹರಿಕೆ ತೀರಿಸಿದ್ದಾರೆ.

ಜಗತ್ತಿನಲ್ಲಿ ಎರಡನೇ ಸ್ಥಾನದಲ್ಲಿರುವ ಭಾರತದಲ್ಲಿ ನಿನ್ನೆ ಪತ್ತೆಯಾದ ಸೋಂಕಿತರ ಸಂಖ್ಯೆ ಎಷ್ಟು ಗೊತ್ತಾ?

ದೇಶದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಆತಂಕ ಮೂಡಿಸುತ್ತಿದೆ. ಕಳೆದ 24 ಭಾರತ ದೇಶದಲ್ಲಿ ಸೋಂಕಿತರು ಬೇಗ ಚೇತರಿಸಿಕೊಳ್ಳುತ್ತಿದ್ದಾರೆ. ಕೊರೊನಾ ವಾರಿಯರ್ಸ್ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವುದು ಇದರಿಂದ ತಿಳಿದು ಬರುತ್ತಿದೆ. ಸದ್ಯ ದೇಶದಲ್ಲಿ 9,07,883 ಸಕ್ರಿಯ ಪ್ರಕರಣಗಳಿವೆ. ಒಟ್ಟು ಸೋಂಕಿತರ ಸಂಖ್ಯೆ 67,57,132ಕ್ಕೆ ಏರಿಕೆ ಕಂಡಿದೆ. ದೇಶದಲ್ಲಿ ಇದುವರೆಗೂ 8,22,71,657 ಜನ ಕೊರೊನಾ ಟೆಸ್ಟ್ ಗೆ ಒಳಪಟ್ಟಿದ್ದಾರೆ.ಗಂಟೆಗಳಲ್ಲಿ 72,049 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಮುಂಡರಗಿ ಅರಣ್ಯಾಧಿಕಾರಿ ದೌರ್ಜನ್ಯ ಇಬ್ಬರು ಮಹಿಳೆಯರು ವಿಷ ಸೇವಿಸಿ ಆತ್ಮಹತ್ಯಗೆ ಯತ್ನ ಸ್ಥಿತಿ ಗಂಭೀರ: ಜಿಲ್ಲಾಧಿಕಾರಿಗೆ ಹಿಡಿ ಶಾಪ ಹಾಕುತ್ತಿರುವ ರೈತರು

ಗದಗ: ಮುಂಡರಗಿ ತಾಲೂಕಿನ ಕೆಲೂರ ಗ್ರಾಮದ ಬಗರಹುಕುಂ ಸಾಗುವಳಿ ಮಾಡುವ ರೈತರನ್ನು ಒಕ್ಕಲೆಬ್ಬಿಸಲು ಅರಣ್ಯ ಇಲಾಖೆ…