ಜೈಪುರ: ಮಹಾಮಾರಿಯ ಅಟ್ಟಹಾಸ ದೇಶದ ಹಲವು ರಾಜ್ಯಗಳಲ್ಲಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ರಾಜಸ್ಥಾನದ ಗಡಿ ಬಂದ್ ಮಾಡಲಾಗಿದೆ.

ಒಂದು ವಾರದ ಮಟ್ಟಿಗೆ ರಾಜಸ್ತಾನ ಸರ್ಕಾರ ರಾಜ್ಯದ ಎಲ್ಲಾ ಗಡಿಗಳನ್ನು ಬಂದ್ ಮಾಡಿದೆ. ಎನ್ಒಸಿ ಪ್ರಮಾಣ ಪತ್ರವಿಲ್ಲದೆ ಯಾರೊಬ್ಬರೂ ರಾಜ್ಯ ಪ್ರವೇಶಿಸುವಂತಿಲ್ಲ. ಅಲ್ಲದೆ, ಪಾಸ್ ಗಳಿಲ್ಲದೆ, ರಾಜ್ಯದಿಂದ ಯಾರೊಬ್ಬರು ಹೊರಗೆ ಹೋಗುವಂತಿಲ್ಲ ಎಂದು ಸರ್ಕಾರ ತಿಳಿಸಿದೆ.

ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ಆಯುಕ್ತರಿಗೆ ಪಾಸ್ ವಿತರಿಸುವ ಹೊಣೆಯನ್ನು ನೀಡಲಾಗಿದ್ದು, ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಹಾಗೂ ಸಾವಿಗೀಡಾದ ಕುಟುಂಬಸ್ಥರಿಗೆ ಆದೇಶದಲ್ಲಿ ವಿನಾಯಿತಿ ನೀಡಲಾಗಿದೆ. ರಾಜ್ಯದಲ್ಲಿ ಇಲ್ಲಿಯವರೆಗೂ 11,368 ಜನರಿಗೆ ಸೋಂಕು ತಗುಲಿದೆ.

Leave a Reply

Your email address will not be published. Required fields are marked *

You May Also Like

ಶಾಲೆ ತೆರೆಯದಂತೆ ಪೋಷಕರು, ಶಿಕ್ಷಕರ ಒತ್ತಾಯ!

ದೆಹಲಿಯಲ್ಲಿ ಕೊರೊನಾ ಆತಂಕ ಮೂಡಿಸಿದ್ದು, ಆಸ್ಪತ್ರೆಗಳಲ್ಲಿ ಬೆಡ್ ಗಳ ಕೊರತೆ ಸೃಷ್ಟಿಯಾಗಿದೆ. ಈ ನಿಟ್ಟಿನಲ್ಲಿ ಶಾಲೆಗಳನ್ನೇ ತೆರೆಯುವುದೇ ಬೇಡ ಎಂದು ಶಿಕ್ಷಕರು ಮತ್ತು ಪೋಷಕರು ದೆಹಲಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ: ಡಾ. ಕೆ. ಸುಧಾಕರ್

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಆದರೆ, ಸೋಂಕಿತರು ಹೆಚ್ಚಿನ…

ಸತ್ತಲ್ಲಿ 20 ಜನರಿರಬೇಕು…ಮದ್ಯಕ್ಕೆ ಮಾತ್ರ ಸಾವಿರ ಜನರಿದ್ದರೂ ಸೈ!!

ಅಂತ್ಯ ಸಂಸ್ಕಾರಕ್ಕೆ 20 ಜನರ ಸೇರುವಂತಿಲ್ಲ. ಆದರೆ, ಮದ್ಯದಂಗಡಿಯ ಮುಂದೆ 1 ಸಾವಿರ ಜನರು ನಿಲ್ಲಬಹುದೇ ಎಂದು ಕೇಂದ್ರ ಸರ್ಕಾರದ ವಿರುದ್ಧ ಶಿವಸೇನೆ ಟೀಕೆ ಮಾಡಿದೆ.

ಪಾಕ್ ನ ಉಪಟಳ – ಯೋಧ ಹುತಾತ್ಮ!

ಶ್ರೀನಗರ : ಲಡಾಖ್ ನಲ್ಲಿ ಚೀನಾ ಸಂಘರ್ಷ ನಡೆಸುತ್ತಿದ್ದರೆ, ಇನ್ನೊಂದೆಡೆ ಪಾಕ್ ತನ್ನ ಉಪಟಳ ಮುಂದುವರೆಸಿದೆ. ಗಡಿ ಉಲ್ಲಂಘಿಸಿ ಬಂದ ಪಾಕಿಸ್ತಾನ ಸೇನಾ ಯೋಧರು ನಡೆಸಿದ ದಾಳಿಯಲ್ಲಿ ಭಾರತೀಯ ಸೇನೆಯ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.