ಬೆಂಗಳೂರು: ಕಿಚ್ಚ ಸುದೀಪ್ ಅವರನ್ನು ಟಾಲಿವುಡ್ ಅಂಗಳಕ್ಕೆ ಕರೆ ತರುವ ಮಾತುಗಳು ಮುನ್ನೆಲೆಗೆ ಬಂದಿದೆ. ಮಹೇಶ್ ಬಾಬು ಅಭಿನಯದ ಹೊಸ ಚಿತ್ರಕ್ಕೆ ವಿಲನ್ ಆಗಿ ಕಿಚ್ಚ ಸುದೀಪ್ ಅವರನ್ನು ಕರೆತರಲು ಚಿತ್ರ ತಂಡ ಚಿಂತನೆ ನಡೆಸಿದೆ.

ಮಹೇಶ್ ಬಾಬು ಅಭಿನಯದ ಮುಂದಿನ ಚಿತ್ರ ಸರ್ಕಾರು ವಾರಿ ಪಾಟದಲ್ಲಿ ಕಿಚ್ಚನನ್ನು ವಿಲನ್ ಆಗಿ ನೋಡಲು ಚಿತ್ರ ತಂಡ ಬಯಸಿದೆ. ಚಿತ್ರದ ನಿರ್ದೇಶಕ ಪರುಶುರಾಮ್ ಅವರು ಮಹೇಶ್ ಬಾಬುಗೆ ಟಕ್ಕರ್ ಕೊಡಲು ಮತ್ತು ಆ ವಿಲನ್ ಪಾತ್ರಕ್ಕೆ ಜೀವ ತುಂಬಲು ಸುದೀಪ್ ಅವರೇ ಸರಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕಿಚ್ಚ ಸುದೀಪ್ ಅವರಿಗೆ ಭಾರತದ ಎಲ್ಲಡೇ ಅಭಿಮಾನಿಗಳು ಇದ್ದಾರೆ. ಅವರು ಈಗಾಗಲೇ ಟಾಲಿವುಡ್, ಕಾಲಿವುಡ್ ಮತ್ತು ಬಾಲಿವುಡ್ ನಲ್ಲಿ ನಟಿಸಿ ಎಲ್ಲರ ಮೆಚ್ಚುಗೆ ಗಳಿಸಿದ್ದಾರೆ. ಹೀಗಾಗಿ ದಕ್ಷಿಣ ಭಾರತದೊಂದಿಗೆ ಬಾಲಿವುಡ್ ಮತ್ತು ಟಾಲಿವುಡ್ ನಲ್ಲಿ ತನ್ನ ಪ್ರಾಭಲ್ಯ ಮೆರೆದಿದ್ದಾರೆ. ಹೀಗಾಗಿ ಎಲ್ಲೆಡೆ ಅವರ ಅಭಿಮಾನಿಗಳು ಇವರನ್ನು ಕಾಣಲು ಹಾತೋರೆಯುತ್ತಿದ್ದಾರೆ. ಪರಿಣಾಮವಾಗಿಯೇ ಅವರಿಗೆ ಈ ಆಫರ್ ಬಂದಿದೆ.

ಈಗಾಗಲೇ ಸರ್ಕಾರು ಪಾಟಿ ಪಾಟದ ಮೊದಲ ಪೋಸ್ಟರ್ ಬಿಡುಗಡೆಯಾಗಿದ್ದು, ಇದರಲ್ಲಿ ಒಂದು ರೂಪಾಯಿ ನಾಣ್ಯದ ಟ್ಯಾಟೂವನ್ನು ಕತ್ತಿನ ಮೇಲೆ ಹಾಕಿಸಿಕೊಂಡು ಮಹೇಶ್ ಬಾಬು ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಇನ್ನೊಂದು ಜನ್ಮವಿದ್ದರೆ ಶಿವಣ್ಣ ಅಣ್ಣನಾಗಲಿ ಎಂದ ಜಗ್ಗೇಶ್

ನನಗೆ ಇನ್ನೊಂದು ಜನ್ಮ ಇದ್ದರೆ ಶಿವಣ್ಣನೆ ನನಗೆ ಅಣ್ಣನಾಗಿ ಬರಲಿ.. ನನ್ನ ಬದುಕಲ್ಲಿ ನಾನು ಕಂಡ ಶ್ರೇಷ್ಠಮನುಜ..ರಾಜಣ್ಣ ಅವರ ಕರೆಯುತ್ತಿದ್ದದ್ದು ದೊಡ್ಡ ನೋಟಿನ ಸಾಹುಕಾರ ಎಂದು!

ಪ್ರೇಮಕಥೆಯ ಸಲಿಗೆ ಸಿಂಗಲ್ ಸಾಂಗ್ ಚಂದನ್ ಶೆಟ್ಟಿ ಡ್ಯಾನ್ಸ್

ಬೆಂಗಳೂರು: ಪ್ರೇಮಿಯೊಬ್ಬ ಪ್ರೀತಿಯಿಂದ ಆಗ ಬದಲಾವಣೆಯನ್ನು ಚಂದನ್ ಶೆಟ್ಟಿ ಲವ್ ಸಾಂಗ್ ಒಂದರಲ್ಲಿ ಬಿಂಬಿಸಿದ್ದಾರೆ. ಈ ಮೂಲಕ ಆಲ್ಬಂ ಸಾಂಗ್ ನಲ್ಲಿ ಚಂದನ್ ಶೆಟ್ಟಿ ಹೊಸ ಪ್ರಯೋಗ ಮಾಡಿದ್ದಾರೆ. ಸಲಿಗೆ ಹೆಸರಿನ ಸಿಂಗಲ್ ಆಲ್ಬಂ ಅನ್ನು ಚಂದನ್ ಶೆಟ್ಟಿ ಮೇ 28 ರಂದು ಬಿಡುಗಡೆ ಮಾಡಿದ್ದಾರೆ. ಕೆನಡಾದಲ್ಲಿ ಚಿತ್ರೀಕರಿಸಿದ ಹಾಡನ್ನು ತಾವೇ ಶೂಟ್ ಮಾಡಿದ್ದಲ್ಲದೇ ಚೆನ್ನಾಗಿ ನೃತ್ಯ ಮಾಡಿದ್ದಾರೆ ಚಂದನ್ ಶೆಟ್ಟಿ.

ಕನ್ನಡ ಚಿತ್ರ ರಂಗದ ಹಿರಿಯ ಕಲಾವಿದ ಹುಲಿವಾನ್ ಗಂಗಾಧರಯ್ಯ ನಿಧನ!

ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಹುಲಿವಾನ್ ಗಂಗಾಧರಯ್ಯ (70) ನಿಧನ ಹೊಂದಿದ್ದಾರೆ. ನಿನ್ನೆ ರಾತ್ರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಸಂಗೀತ ಲೋಕದ ಧ್ರವತಾರೆ ಇನ್ನೂ ಮುಂದೆ ನೆನಪು ಮಾತ್ರ!

ಶ್ರೀಪತಿ ಪಂಡಿತಾರಾಧ್ಯುಲ ಬಾಲಸುಬ್ರಹ್ಮಣ್ಯಂ (ಎಸ್ಪಿಬಿ) ಇನ್ನು ಸಂಗೀತ ಲೋಕದ ನೆನಪು ಮಾತ್ರ!