ಬೆಂಗಳೂರು: ನಟ ಪ್ರಕಾಶ್‌ ರೈಗೆ ದೇಶದ ಬಹುತೇಕ ಭಾಷೆಗಳ ಅಭಿಮಾನಿಗಳಿದ್ದಾರೆ. ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ ಭಾಷೆಯ ಪ್ರೇಕ್ಷಕರಿಗೂ ಪರಿಚಿತರು. ಸದ್ಯ ಇಂತಹ ನಟ ಧನುಷ್ ಅವರಿಗೆ ಕಂಗ್ರಾಟ್ಸ್ ಹೇಳಿದ್ದಾರೆ.

ತಮಿಳಿನಲ್ಲಿ ಪ್ರಕಾಶ್ ರೈ ನಿರೂಪಣೆಯಲ್ಲಿ ಮೂಡಿಬಂದಿದ್ದ ವೈಲ್ಡ್ ಕರ್ನಾಟಕ ಡಾಕ್ಯುಮೆಂಟರಿ ನೋಡಿ, ಖುಷಿಯಾದ ಧನುಷ್‌ ಅವರು ಪ್ರಕಾಶ್‌ಗೆ ಕಂಗ್ರಾಟ್ಸ್ ಹೇಳಿದ್ದಾರೆ. ಕರ್ನಾಟಕ ಅರಣ್ಯ ಇಲಾಖೆಯ ಆಶ್ರಯದಲ್ಲಿ ಅಮೋಘವರ್ಷ ಮತ್ತು ಕಲ್ಯಾಣ್‌ ವರ್ಮ ವೈಲ್ಡ್ ಕರ್ನಾಟಕ ಸಾಕ್ಷ್ಯಚಿತ್ರವನ್ನು ನಿರ್ಮಿಸಿದ್ದರು. ಹಲವು ವರ್ಷಗಳ ಶ್ರಮದಿಂದ ಈ ವೈಲ್ಡ್ ಕರ್ನಾಟಕ ಡಾಕ್ಯುಮೆಂಟರಿ ನಿರ್ಮಾಣಗೊಂಡಿತ್ತು. ಈ ಡಾಕ್ಯುಮೆಂಟರಿಗೆ ಆಯಾ ಭಾಷೆಗಳಿಂದ ಒಬ್ಬೊಬ್ಬ ಕಲಾವಿದರಿಂದ ನಿರೂಪಣೆ ಮಾಡಿಸಲಾಗಿತ್ತು.

ಈಗ ತಮಿಳಿನಲ್ಲಿ ನೋಡಿರುವ ಧನುಷ್, ಕರ್ನಾಟಕದ ಜೀವವೈವಿಧ್ಯತೆ ಬಗ್ಗೆ ಪ್ರಾದೇಶಿಕ ಭಾಷೆಗಳಾದ ತೆಲುಗು, ತಮಿಳಿನಲ್ಲಿ ನಿರೂಪಣೆ ಮಾಡಿದ್ದಕ್ಕೆ ನಿಮಗೆ ಕಂಗ್ರಾಟ್ಸ್ ಪ್ರಕಾಶ್ ರೈ ಸರ್.. ಎಂದು ಧನುಷ್ ಟ್ವೀಟ್ ಮಾಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಶೂಟಿಂಗ್ ಮುಗಿಸಿ ಬರುತ್ತಿದ್ದ ವೇಳೆ ಅಲ್ಲು ಅರ್ಜುನ್ ಕಾರ್ ಗೆ ಅಪಘಾತ!

ಮುಂಬಯಿ : ಶೂಟಿಂಗ್ ಮುಗಿಸಿ ಮರಳಿ ಬರುತ್ತಿದ್ದ ಸಂದರ್ಭದಲ್ಲಿ ನಟ ಅಲ್ಲು ಅರ್ಜುನ್ ಅವರ ಕ್ಯಾರವಾನ್ ಗೆ ಹಿಂದಿನಿಂದ ಲಾರಿ ಗುದ್ದಿದ ಘಟನೆ ನಡೆದಿದೆ.

ರಾಜವೀರಮದಕರಿ ನಾಯಕ ಚಿತ್ರಿಕರಣಕ್ಕೆ ಸಿದ್ಧತೆ

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಜ ವೀರಮದಕರಿ ನಾಯಕ ಸಿನಿಮಾ ಮತ್ತೆ ಆಗಸ್ಟ್ ನಲ್ಲಿ ಚಿತ್ರೀಕರಣ ಆರಂಭಿಸಲು ಚಿತ್ರತಂಡ ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಕೊರೋನಾದಿಂದಾಗಿ ಸಿನಿಮಾ ಚಿತ್ರಿಕರಣ ಅರ್ಧಕ್ಕೇ ಸ್ಥಗಿತಗೊಂಡಿತ್ತು. ಆಗಸ್ಟ್ ಅಷ್ಟೊತ್ತಿಗೆ ಚಿತ್ರಿಕರಣಕ್ಕೆ ಅವಕಾಶ ಸಿಗಬಹುದು ಎಂಬ ನಿರೀಕ್ಷೆಯಿಂದ ಚಿತ್ರತಂಡ ಚಿತ್ರಿಕರಣದ ತಯಾರಿ ನಡೆಸಿದೆ. ಕೊರೊನಾ ಕಾರಣದಿಂದ ಹಲವು ಮುಂಜಾಗೃತ ಕ್ರಮಗಳ ಮೂಲಕ ಸರ್ಕಾರ‌ ಚಿತ್ರಿಕರಣಕ್ಕೆ ಅನುಮತಿ ನೀಡಿದರೆ ಚಿತ್ರಿಕರಣ ಆರಂಭಿಸುವ ತಯಾರಿಯಲ್ಲಿ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಇದ್ದಾರೆ.

ಮಹೇಶ್ ಬಾಬು ಡೈಲಾಗ್ ಟಿಕ್ ಮಾಡಿದ ವಾರ್ನರ್

ಆಸ್ಟ್ರೇಲಿಯಾ ಕ್ರಿಕೇಟಿಗರೊಬ್ಬರು ಇಂಡಿಯಾದ ಚಿತ್ರನಟರೊಬ್ಬರ ಡೈಲಾಗ್ ನ್ನು ಟಿಕ್ ಟಾಕ್ ಮಾಟಿದ್ದು ಇದೀಗ ವೈರಲ್ ಆಗಿದೆ.