ಬೆಂಗಳೂರು: ನಟ ಪ್ರಕಾಶ್‌ ರೈಗೆ ದೇಶದ ಬಹುತೇಕ ಭಾಷೆಗಳ ಅಭಿಮಾನಿಗಳಿದ್ದಾರೆ. ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ ಭಾಷೆಯ ಪ್ರೇಕ್ಷಕರಿಗೂ ಪರಿಚಿತರು. ಸದ್ಯ ಇಂತಹ ನಟ ಧನುಷ್ ಅವರಿಗೆ ಕಂಗ್ರಾಟ್ಸ್ ಹೇಳಿದ್ದಾರೆ.

ತಮಿಳಿನಲ್ಲಿ ಪ್ರಕಾಶ್ ರೈ ನಿರೂಪಣೆಯಲ್ಲಿ ಮೂಡಿಬಂದಿದ್ದ ವೈಲ್ಡ್ ಕರ್ನಾಟಕ ಡಾಕ್ಯುಮೆಂಟರಿ ನೋಡಿ, ಖುಷಿಯಾದ ಧನುಷ್‌ ಅವರು ಪ್ರಕಾಶ್‌ಗೆ ಕಂಗ್ರಾಟ್ಸ್ ಹೇಳಿದ್ದಾರೆ. ಕರ್ನಾಟಕ ಅರಣ್ಯ ಇಲಾಖೆಯ ಆಶ್ರಯದಲ್ಲಿ ಅಮೋಘವರ್ಷ ಮತ್ತು ಕಲ್ಯಾಣ್‌ ವರ್ಮ ವೈಲ್ಡ್ ಕರ್ನಾಟಕ ಸಾಕ್ಷ್ಯಚಿತ್ರವನ್ನು ನಿರ್ಮಿಸಿದ್ದರು. ಹಲವು ವರ್ಷಗಳ ಶ್ರಮದಿಂದ ಈ ವೈಲ್ಡ್ ಕರ್ನಾಟಕ ಡಾಕ್ಯುಮೆಂಟರಿ ನಿರ್ಮಾಣಗೊಂಡಿತ್ತು. ಈ ಡಾಕ್ಯುಮೆಂಟರಿಗೆ ಆಯಾ ಭಾಷೆಗಳಿಂದ ಒಬ್ಬೊಬ್ಬ ಕಲಾವಿದರಿಂದ ನಿರೂಪಣೆ ಮಾಡಿಸಲಾಗಿತ್ತು.

ಈಗ ತಮಿಳಿನಲ್ಲಿ ನೋಡಿರುವ ಧನುಷ್, ಕರ್ನಾಟಕದ ಜೀವವೈವಿಧ್ಯತೆ ಬಗ್ಗೆ ಪ್ರಾದೇಶಿಕ ಭಾಷೆಗಳಾದ ತೆಲುಗು, ತಮಿಳಿನಲ್ಲಿ ನಿರೂಪಣೆ ಮಾಡಿದ್ದಕ್ಕೆ ನಿಮಗೆ ಕಂಗ್ರಾಟ್ಸ್ ಪ್ರಕಾಶ್ ರೈ ಸರ್.. ಎಂದು ಧನುಷ್ ಟ್ವೀಟ್ ಮಾಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೊರೊನಾ ಮಧ್ಯೆಯೇ ಚಿತ್ರದ ಮುಹೂರ್ತ ಫಿಕ್ಸ್!

ಲಾಕ್ ಡೌನ್ ನಿಂದಾಗಿ ಬಿಡುವು ಪಡೆದಿದ್ದ ಸೆನ್ಸಾರ್ ಮಂಡಳಿ ಸದ್ಯ ಮತ್ತೆ ಕೆಲಸ ಆರಂಭಿಸಿದೆ. ಅಲ್ಲದೇ, ಚಿತ್ರರಂಗ ಕೂಡ ತನ್ನ ಕೆಲಸ ಪ್ರಾರಂಭಿಸಿದೆ.

ನಿಖಿಲ್ ಕುಮಾರಸ್ವಾಮಿ ವಿವಾಹ: ಪಾಸ್ ನೀಡಿದ ವಾಹನಗಳ ವಿವರಣೆ ಕೇಳಿದ ಕೋರ್ಟ್..!

ದೇಶಾದ್ಯಂತ ಲಾಕ್ ಡೌನ್ ಮದ್ಯೆಯೂ ನಟ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ವಿವಾಹ ಇತ್ತಿಚೆಗಷ್ಟೆ ನಡೆದಿತ್ತು. ವಿವಾಹ ಸಂದರ್ಭದಲ್ಲಿ ಎಷ್ಟು ವಾಹನಗಳಿಗೆ ಪಾಸ್ ನೀಡಲಾಗಿತ್ತು ಎನ್ನುವ ಬಗ್ಗೆ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.

ಮಹಾರಾಷ್ಟ್ರದಲ್ಲಿ ಸಿಲುಕಿದ್ದ ಕನ್ನಡಿಗನ್ನು ರಕ್ಷಿಸಿದ ನಟ!

ಕೊರೊನಾ ಲಾಕ್ ಡೌನ್ ನಿಂದಾಗಿ ಮಹಾರಾಷ್ಟ್ರದಲ್ಲಿ ಸಿಲುಕಿದ್ದ ಕರ್ನಾಟಕದ ನೂರಾರು ವಲಸೆ ಕಾರ್ಮಿಕರಿಗೆ ಅವರ ಊರುಗಳಿಗೆ ತಲುಪಿಸಲು ಬಾಲಿವುಡ್ ನಟ ಸೋನು ಸೂದ್ ಮುಖ್ಯ ಪಾತ್ರ ವಹಿಸಿದ್ದರು.

ಖ್ಯಾತ ಸಂಗೀತ ನಿರ್ದೇಶಕ ವಾಜಿದ್ ಖಾನ್ ನಿಧನ

ಮುಂಬೈ: ಬಾಲಿವುಡ್ ನ ಖ್ಯಾತ ಸಂಗೀತ ನಿರ್ದೇಶಕ ವಾಜಿದ್ ಖಾನ್ ನಿಧನ ಹೊಂದಿದ್ದಾರೆ. ಕಿಡ್ನಿ ವೈಫಲ್ಯದಿಂದ…