ಬೆಂಗಳೂರು: ನಟ ಪ್ರಕಾಶ್‌ ರೈಗೆ ದೇಶದ ಬಹುತೇಕ ಭಾಷೆಗಳ ಅಭಿಮಾನಿಗಳಿದ್ದಾರೆ. ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ ಭಾಷೆಯ ಪ್ರೇಕ್ಷಕರಿಗೂ ಪರಿಚಿತರು. ಸದ್ಯ ಇಂತಹ ನಟ ಧನುಷ್ ಅವರಿಗೆ ಕಂಗ್ರಾಟ್ಸ್ ಹೇಳಿದ್ದಾರೆ.

ತಮಿಳಿನಲ್ಲಿ ಪ್ರಕಾಶ್ ರೈ ನಿರೂಪಣೆಯಲ್ಲಿ ಮೂಡಿಬಂದಿದ್ದ ವೈಲ್ಡ್ ಕರ್ನಾಟಕ ಡಾಕ್ಯುಮೆಂಟರಿ ನೋಡಿ, ಖುಷಿಯಾದ ಧನುಷ್‌ ಅವರು ಪ್ರಕಾಶ್‌ಗೆ ಕಂಗ್ರಾಟ್ಸ್ ಹೇಳಿದ್ದಾರೆ. ಕರ್ನಾಟಕ ಅರಣ್ಯ ಇಲಾಖೆಯ ಆಶ್ರಯದಲ್ಲಿ ಅಮೋಘವರ್ಷ ಮತ್ತು ಕಲ್ಯಾಣ್‌ ವರ್ಮ ವೈಲ್ಡ್ ಕರ್ನಾಟಕ ಸಾಕ್ಷ್ಯಚಿತ್ರವನ್ನು ನಿರ್ಮಿಸಿದ್ದರು. ಹಲವು ವರ್ಷಗಳ ಶ್ರಮದಿಂದ ಈ ವೈಲ್ಡ್ ಕರ್ನಾಟಕ ಡಾಕ್ಯುಮೆಂಟರಿ ನಿರ್ಮಾಣಗೊಂಡಿತ್ತು. ಈ ಡಾಕ್ಯುಮೆಂಟರಿಗೆ ಆಯಾ ಭಾಷೆಗಳಿಂದ ಒಬ್ಬೊಬ್ಬ ಕಲಾವಿದರಿಂದ ನಿರೂಪಣೆ ಮಾಡಿಸಲಾಗಿತ್ತು.

ಈಗ ತಮಿಳಿನಲ್ಲಿ ನೋಡಿರುವ ಧನುಷ್, ಕರ್ನಾಟಕದ ಜೀವವೈವಿಧ್ಯತೆ ಬಗ್ಗೆ ಪ್ರಾದೇಶಿಕ ಭಾಷೆಗಳಾದ ತೆಲುಗು, ತಮಿಳಿನಲ್ಲಿ ನಿರೂಪಣೆ ಮಾಡಿದ್ದಕ್ಕೆ ನಿಮಗೆ ಕಂಗ್ರಾಟ್ಸ್ ಪ್ರಕಾಶ್ ರೈ ಸರ್.. ಎಂದು ಧನುಷ್ ಟ್ವೀಟ್ ಮಾಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಪಾಕ್ ರೂಪದರ್ಶಿಗೆ ಟ್ರೋಲ್ ಮಾಡುತ್ತಿರುವ ಕಿಡಿಗೇಡಿಗಳು!

ಕರಾಚಿ ವಿಮಾನ ದುರಂತದಲ್ಲಿ ಸಾವನ್ನಪ್ಪಿದ ಪಾಕ್ ರೂಪದರ್ಶಿಯನ್ನು ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡಲಾಗುತ್ತಿದೆ.

'ಲಾ' ಸಿನಿಮಾ ಬಗ್ಗೆ ಕುತೂಹಲಕಾರಿ ಮಾಹಿತಿ ಹಂಚಿಕೊಂಡ ನಟಿ ರಾಗಿಣಿ ಚಂದ್ರನ್‌

ಕನ್ನಡದ ʻಲಾʼ ಸಿನಿಮಾ ಬಿಡುಗಡೆಯ ಬಗ್ಗೆ ಚಿತ್ರದ ನಾಯಕಿ ಬಹಳ ಉತ್ಸುಕರಾಗಿದ್ದಾರೆ. ಇದೇ ಜುಲೈ 17…

ಪುನೀತ್‌ಗೆ ‘ಕರ್ನಾಟಕ ರತ್ನ’- ಶೀಘ್ರದಲ್ಲಿಯೇ ದಿನಾಂಕ ನಿಗದಿ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ನಟ ದಿವಂಗತ ಪುನೀತ್ ರಾಜ್‌ಕುಮಾರ್‌ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಕೊಡುವ ಸಂಬಂಧ ಆದಷ್ಟು…