ಬೆಂಗಳೂರು: ರಾಜ್ಯ ಸರ್ಕಾರ, ಎಲ್.ಕೆ.ಜಿ, ಯು.ಕೆ.ಜಿ ಹಾಗೂ ಪ್ರಾಥಮಿಕ ಹಂತದ 7ನೇ ತರಗತಿವರೆಗಿನ ಆನ್ ಲೈನ್ ಶಿಕ್ಷಣವನ್ನು ಗುರುವಾರ ರದ್ದುಗೊಳಿಸಿದೆ.

ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಜೆಸಿ ಮಾಧುಸ್ವಾಮಿ ಅವರು, ಆನ್ ಲೈನ್ ಶಿಕ್ಷಣವನ್ನು 5ನೇ ತರಗತಿ ಬದಲು 7ನೇ ತರಗತಿವರೆಗೂ ರದ್ದುಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು.

ನಿನ್ನೆಯಷ್ಟೇ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಅಧಿಕಾರಿಗಳು ಹಾಗೂ ಶಿಕ್ಷಣ ತಜ್ಞರೊಂದಿಗೆ ಹಲವು ಸುತ್ತಿನ ಚರ್ಚೆ ನಡೆಸಿದ ನಂತರ 5ನೇ ತರಗತಿವರೆಗೆ ಆನ್ ಲೈನ್ ಶಿಕ್ಷಣ ರದ್ದುಗೊಳಿಸುವ ನಿರ್ಧಾರ ಪ್ರಕಟಿಸಿದ್ದರು. ಇಂದು ಅದನ್ನು 7ನೇ ತರಗತಿವರೆಗೂ ಸರ್ಕಾರ ವಿಸ್ತರಿಸಿದೆ.
ಅಲ್ಲದೇ, ಜುಲೈನಲ್ಲಿ ಶಾಲೆ ತೆರೆಯುವ ಮಾತೇ ಇಲ್ಲ. ಆಗಸ್ಟ್ 15ರವರೆಗೆ ಶಾಲೆಗಳನ್ನು ತೆರೆಯುವುದಿಲ್ಲ. ಆನಂತರ ಪರೀಸ್ಥಿತಿ ನೋಡಿಕೊಂಡು ನಿರ್ಧರಿಸಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ.

Leave a Reply

Your email address will not be published. Required fields are marked *

You May Also Like

ಎಬಿವಿಪಿಯಿಂದ ಕಾಲೇಜು ಕಟ್ಟಡದ ದುರಸ್ತಿಗಾಗಿ ಪ್ರತಿಭಟನೆ.

ಉತ್ತರ ಪ್ರಭ ಸುದ್ದಿರೋಣ : ಪಟ್ಟಣದ ಸರಕಾರಿ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯ ಶಿಥಿಲಾವಸ್ಥೆಯಲ್ಲಿರುವ ಕಟ್ಟಡವನ್ನು…

ನಿತ್ಯೋತ್ಸವ ಕವಿ ನಿಸಾರ್ ಅಹ್ಮದ್ ಇನ್ನಿಲ್ಲ..!

ನಿತ್ಯೋತ್ಸವ ಕವಿ ಎಂದೇ ಖ್ಯಾತರಾಗಿದ್ದ ಕನ್ನಡದ ಹಿರಿಯ ಕವಿ ಕೆ.ಎಸ್.ನಿಸಾರ್ ಅಹ್ಮದ್ ಇಂದು ನಿಧನ ಹೊಂದಿದ್ದಾರೆ. ಹಲವು ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದ ನಿಸಾರ ಅಹ್ಮದ್ ಇಂದು ಕೊನೆ ಉಸಿರೆಳೆದರು.

ಶೀಘ್ರ 16000 ಪೊಲೀಸ್ ಸಿಬ್ಬಂದಿ ನೇಮಕ: ಸಚಿವ ಬೊಮ್ಮಾಯಿ

ರಾಜ್ಯ ಪೊಲೀಸ್‌ ಇಲಾಖೆಗೆ ನೂತನ 16 ಸಾವಿರ ಪೊಲೀಸ್‌ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸಚಿವ ನಾಗೇಶ ನಾಯಕತ್ವ: ಅಭಿವೃದ್ಧಿ ಪಥದಲ್ಲಿ ಶಿಕ್ಷಣ ಇಲಾಖೆ- ಸ್ಪಂದನಾಭಾವದಿಂದ ಸಮಸ್ಯೆಗಳು ಕ್ಷೀಣ…!

ಉತ್ತರಪ್ರಭ ಸುದ್ದಿಆಲಮಟ್ಟಿ: ಶಿಕ್ಷಣ ಇಲಾಖೆಯ ಅಭಿವೃದ್ಧಿ ಕಾರ್ಯಕ್ಕೆ ಇಡೀ ಇಲಾಖೆ, ಶಿಕ್ಷಕರು, ಮಕ್ಕಳು, ಸಂಘಟನೆಗಳು, ಪಾಲಕರು-ಪೋಷಕರು,…