ಗದಗ: ಇಲ್ಲಿನ ರಾಜೀವ್ ಗಾಂಧಿ ನಗರದಲ್ಲಿರುವ ಬಾಗಲಕೋಟೆ ಜಿಲ್ಲೆಯ ನೀರು‌ ಸರಬರಾಜು ಮಂಡಳಿಯ ಎಇಇ ಹನುಮಂತ ಪ್ರಭಣ್ಣವರ್ ಮನೆ‌ ಮೇಲೆ ಬೆಳ್ಳಂಬೆಳಿಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಎಸಿಬಿ ಡಿವೈಎಸ್ಪಿ ವಾಸುದೇವರಾಮ್ ನೇತೃತ್ವದ ತಂಡ ದಾಳಿ ನಡೆಸಿದೆ. ಭ್ರಷ್ಟಾಚಾರ ದೂರಿನ‌ ಮೇರೆಗೆ ದಾಳಿಮಾಡಿದ ಅಧಿಕಾರಿಗಳು ಮಹತ್ವದ ದಾಖಲೆ ವಶಪಡಿಸಿ ಕೊಂಡು ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.
ಇನ್ನು ಎಇಇ ಹನುಮಂತ ಮನೆ‌ಮೇಲೆ ಮತ್ತು ಬಾಗಲಕೋಟೆಯ ಅವರ ಕಚೇರಿ ಮೇಲೆ ಏಕಕಾಲದಲ್ಲಿ ದಾಳಿ ನಡೆದಿದ್ದು ಹನಮಂತ ಅವರನ್ನು ಬಾಗಲಕೋಟೆಯಲ್ಲಿಯೆ ಎಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ದಾಳಿ ವೇಳೆ ಮಹತ್ವದ ದಾಖಲೆ ಸಂಗ್ರಹಿಸಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ಕಡತಗಳ ಪರಿಶೀಲನೆ ಮುಂದುವರೆದಿದ್ದು ಎಇಇ ಹನಮಂತ ಮತ್ತು ಮನೆಯವರನ್ನು ವಿಚಾರಣೆಗೊಳಪಡಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಶಾಸಕ ಬಂಡಿ ಅವರಿಗೆ ಎಸ್‌ಎಫ್‌ಐ ಮನವಿ ಸರ್ಕಾರಿ ಸ್ನಾತಕೋತ್ತರ ಪದವಿ ಕೇಂದ್ರ ಸ್ಥಾಪಿಸಲು ಒತ್ತಾಯ

ಗಜೇಂದ್ರಗಡ: ಪಟ್ಟಣದ ಸರ್ಕಾರಿ ಸ್ನಾತಕೋತ್ತರ ಪದವಿ ಕೇಂದ್ರ ಸ್ಥಾಪಿಸಲು ಹಾಗೂ ಸರಕಾರಿ ಬಾಲಕರ ಮೆಟ್ರಿಕ್ ನಂತರದ ಹಾಸ್ಟೆಲ್ ಪ್ರಾರಂಭಿಸಲು ಸೇರಿದಂತೆ ಇನ್ನಿತರ ಶೈಕ್ಷಣಿಕ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ ಕಾರ್ಯಕರ್ತರು ಶಾಸಕರಿಗೆ ಮನವಿ ಸಲ್ಲಿಸಿದರು.

ಕೆಎಎಸ್ ಅಧಿಕಾರಿ ಸುಧಾ ಅವರ ಮನೆಯಲ್ಲಿ ಸಿಕ್ಕ ಚಿನ್ನಾಭರಣ ಎಷ್ಟು ಗೊತ್ತಾ?

ಬೆಂಗಳೂರು : ಕೆಎಎಸ್ ಅಧಿಕಾರಿ ಡಾ. ಸುಧಾ ಅವರ ಮನೆಯ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ದಾಳಿ ನಡೆಸಿದ್ದು, ಬರೋಬ್ಬರಿ 3.7 ಕೆಜಿ ಚಿನ್ನ ಹಾಗೂ 10.5 ಕೆಜಿ ಬೆಳ್ಳಿಯ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಸೇವಾಲಾಲ್ ದೇವಸ್ಥಾನಕ್ಕೆ ದಕ್ಕೆ

ಅರೇಹಳ್ಳಿ ಗ್ರಾಮದ ಗೋಮಾಳ ಜಾಗದಲ್ಲಿ ನಿರ್ಮಾಣ ಹಂತದಲ್ಲಿದ್ದ ಸಂತ ಸೇವಾಲಾಲ್ ದೇವಸ್ಥಾನದ ಅಡಿಪಾಯವನ್ನು ಕೆಡವಿಹಾಕಿದ್ದರಿಂದ ಬಂಜಾರ ಹಾಗೂ ಇನ್ನಿತರ ಸಮುದಾಯಗಳ ನಡುವೆ ನಡೆದ ಘರ್ಷಣೆಯಿಂದಾಗಿ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣಗೊಂಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಗ್ರಾಮದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ಇ-ರ‌್ಯಾಲಿ ಪರಿಣಾಮ: 25 ಬಿಜೆಪಿ ಲೀಡರ್ಸ್ ಪಾಸಿಟಿವ್

ಪಾಟ್ನಾ: ಬಿಜೆಪಿಯ ಪಾಟ್ನಾ ಕೇಂದ್ರ ಕಚೇರಿಯಲ್ಲಿ ಆತಂಕ ಶುರುವಾಗಿದೆ. ರಾಜ್ಯ ಸಂಘಟನಾ ಕಾರ್ಯದರ್ಶಿ ನಾಗೇಂದ್ರನಾಥ್, ಪ್ರಧಾನ ಕಾರ್ಯದರ್ಶಿ ದೇವೇಶ್ಕುಮಾರ್ ಮತ್ತು ರಾಜ್ಯ ಬಿಜೆಪಿ ಉಪಾಧ್ಯಕ್ಷ