ಗದಗ: ಇಲ್ಲಿನ ರಾಜೀವ್ ಗಾಂಧಿ ನಗರದಲ್ಲಿರುವ ಬಾಗಲಕೋಟೆ ಜಿಲ್ಲೆಯ ನೀರು‌ ಸರಬರಾಜು ಮಂಡಳಿಯ ಎಇಇ ಹನುಮಂತ ಪ್ರಭಣ್ಣವರ್ ಮನೆ‌ ಮೇಲೆ ಬೆಳ್ಳಂಬೆಳಿಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಎಸಿಬಿ ಡಿವೈಎಸ್ಪಿ ವಾಸುದೇವರಾಮ್ ನೇತೃತ್ವದ ತಂಡ ದಾಳಿ ನಡೆಸಿದೆ. ಭ್ರಷ್ಟಾಚಾರ ದೂರಿನ‌ ಮೇರೆಗೆ ದಾಳಿಮಾಡಿದ ಅಧಿಕಾರಿಗಳು ಮಹತ್ವದ ದಾಖಲೆ ವಶಪಡಿಸಿ ಕೊಂಡು ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.
ಇನ್ನು ಎಇಇ ಹನುಮಂತ ಮನೆ‌ಮೇಲೆ ಮತ್ತು ಬಾಗಲಕೋಟೆಯ ಅವರ ಕಚೇರಿ ಮೇಲೆ ಏಕಕಾಲದಲ್ಲಿ ದಾಳಿ ನಡೆದಿದ್ದು ಹನಮಂತ ಅವರನ್ನು ಬಾಗಲಕೋಟೆಯಲ್ಲಿಯೆ ಎಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ದಾಳಿ ವೇಳೆ ಮಹತ್ವದ ದಾಖಲೆ ಸಂಗ್ರಹಿಸಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ಕಡತಗಳ ಪರಿಶೀಲನೆ ಮುಂದುವರೆದಿದ್ದು ಎಇಇ ಹನಮಂತ ಮತ್ತು ಮನೆಯವರನ್ನು ವಿಚಾರಣೆಗೊಳಪಡಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಡಿಕೆಶಿ ಮಗಳ ಮದುವೆ; ದಾಂಪತ್ಯ ಜೀವನಕ್ಕೆ ಕಾಲಿಟ್ಟ ಐಶ್ವರ್ಯ-ಅಮರ್ಥ್ಯ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಗಳು ಐಶ್ವರ್ಯ ಹಾಗೂ ಕೆಫೆ ಕಾಫಿ ಡೇ ಸಂಸ್ಥಾಪಕ ಸಿದ್ಧಾರ್ಥ್ ಹೆಗ್ಡೆ ಅವರ ಮಗ ಅಮರ್ಥ್ಯ ಹೆಗ್ಡೆ ಪ್ರೇಮಿಗಳ ದಿನದಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಅದ್ದೂರಿಯಾಗಿ ನಡೆದ ಮದುವೆಯಲ್ಲಿ ಶಾಸ್ತ್ರೋಕ್ತವಾಗಿ ಇಬ್ಬರೂ ಸಪ್ತಪದಿ ತುಳಿದಿದ್ದಾರೆ. ಎಸ್.ಎಂ.ಕೃಷ್ಣ ಅವರ ಮೊಮ್ಮಗ ಅಮರ್ಥ್ಯ ಹೆಗ್ಡೆ ಹಾಗೂ ಡಿ.ಕೆ.ಶಿವಕುಮಾರ್ ಪುತ್ರಿಯ ಮದುವೆಯಲ್ಲಿ ಇಂದು ಕಾಂಗ್ರೆಸ್, ಬಿಜೆಪಿ ರಾಜಕೀಯ ನಾಯಕರೂ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಇಂದಿನ ಮದುವೆಗೆ ಒಟ್ಟು ೮೦೦ ಗಣ್ಯರಿಗೆ ಆಹ್ವಾನ ನೀಡಲಾಗಿದೆ.

ಕಲಬುರಗಿಗೂ ಲಾಕ್ ಡೌನ್ ಸಡಲಿಕೆಗೂ ಸಂಬಂಧವಿಲ್ಲ!!

ಕಲಬುರಗಿ ಜಿಲ್ಲೆಯಲ್ಲಿ ಕೊರೊನಾ ಕಾಟ ಇನ್ನೂ ತಪ್ಪುತ್ತಿಲ್ಲ. ಸದ್ಯ ಕೊರೊನಾ ಅರ್ಧ ಶತಕ ಮೀರಿ ಸಾಗುತ್ತಿದೆ. ಜಿಲ್ಲೆಯಾದ್ಯಂತ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ವಿಸ್ತರಿಸಲಾಗಿದೆ.

ಹಿಜಾಬ್ ಪ್ರಕರಣ: ಅರ್ಜಿದಾರರ ಅರ್ಜಿ ವಜಾ

ಬೆಂಗಳೂರು: ಹಿಜಾಬ್ ಪ್ರಕರಣದ ತಿರ್ಪುನ್ನು ಇಡಿ ದೇಶದ ಜನತೆಯ ಚಿತ್ತ ನ್ಯಾಯಾಲಯದತ್ತ ನೆಟ್ಟಿತ್ತು.ಅದರಲ್ಲೂ ಕರ್ನಾಟಕದ ನ್ಯಾಯಾಲಯವು…