ದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 10,956 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಭಾರತ ಇದುವರೆಗಿನ ಕೊರಾನಾ ಪಾಸಿಟಿವ್ ದಾಖಲೆಗಳನ್ನೆಲ್ಲ ಮುರಿದು, ಜಗತ್ತಿನಲ್ಲೇ ನಂಬರ್ ಒನ್ ಸ್ಥಾನದತ್ತ ದಾಪುಗಾಲಿಡುತ್ತಿದೆ.
ದೇಶದಲ್ಲಿ ಇದುವರೆಗಿನ ಕೊರೊನಾ ಪೀಡಿತರ ಸಂಖ್ಯೆ 2,97,535. ಸಕ್ರಿಯ ಪ್ರಕರಣಗಳು 1,41,842. ಗುಣಮುಖರಾದವರು 1,47,195. ಮಡಿದವರ ಸಂಖ್ಯೆ 8,498 ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ.
ಈ ಎಲ್ಲ ಬೆಳವಣಿಗೆಗಳ ನಡುವೆ ಭಾರತ ಕೊರೊನಾ ಪೀಡಿತ ರಾಷ್ಟ್ರಗಳ ಪೈಕಿ 4ನೇ ಸ್ಥಾನಕ್ಕೆ ಏರಿಕೆ ಕಂಡಿದೆ. ಅಮೆರಿಕ, ಬ್ರೆಜಿಲ್ ಮತ್ತು ರಷ್ಯಾ ದೇಶಗಳು ಮೊದಲ ಮೂರು ಸ್ಥಾನಗಳಲ್ಲಿದ್ದು ನಂತರದ ಸ್ಥಾನವನ್ನು ಭಾರತ ಅಲಂಕರಿಸಿದೆ.
ದೇಶದಲ್ಲಿ ಅತ್ಯಂತ ವೇಗವಾಗಿ ಕೊರೊನಾ ಏರಿಕೆಯಾಗುತ್ತಿದ್ದರೂ, ದೇಶದಲ್ಲಿ ಕೊರೊನಾ ಸಮುದಾಯಕ್ಕೆ ಪಸರಿಸಿಲ್ಲ ಎಂದು ಕೇಂದ್ರ ಸರ್ಕಾರ ನಿನ್ನೆ ಹೇಳಿಕೆ ನೀಡಿದೆ.

Leave a Reply

Your email address will not be published. Required fields are marked *

You May Also Like

ಹ್ಯಾಂಡ್ ಸ್ಯಾನಿಟೈಸರ್ ಅಗತ್ಯ ವಸ್ತುವಂತೆ!: ಅದರ ಮೇಲೆ ಶೇ.18 ಜಿ.ಎಸ್.ಟಿ ಏಕಂತೆ?

ಕೇಂದ್ರ ಸರ್ಕಾರ ಹ್ಯಾಂಡ್ ಸ್ಯಾನಿಟೈಸರ್ ಅಗತ್ಯ ವಸ್ತು ಎನ್ನುತ್ತದೆ . ಆದರೆ ತೆರಿಗೆ ಇಲಾಖೆಯು ಅದನ್ನು ‘ಆಲ್ಕೊಹಾಲ್’ ಕೆಟಗರಿಗೆ ಸೇರಿಸಿ ಶೇ.18 ಜಿ.ಎಸ್.ಟಿ ತೆರಿಗೆ ಹೇರಿದ್ದನ್ನು ಸಮರ್ಥಿಸುತ್ತದೆ.

ಮನುಕುಲದ ಸೂರ್ಯ ಲಿಂ.ತೋಂಟದ ಸಿದ್ದಲಿಂಗ ಶ್ರೀ

ಆಲಮಟ್ಟಿ : ಲಿಂ, ತೋಂಟದ ಡಾ.ಸಿದ್ದಲಿಂಗ ಶ್ರೀ ಕರುನಾಡು,ದೇಶ ಕಂಡ ಅಪರೂಪದ ಜೀವ ದೈವ. ನಿಭೀ೯ಡೆ…

ಇಂದಿನಿಂದಲೇ ವಾಹನಗಳಿಗೆ ಫಾಸ್ಟ್ಯಾಗ್ ಕಡ್ಡಾಯ

ಸ್ವಯಂಚಾಲಿತ ಟೋಲ್ ಪ್ಲಾಜಾ ಪಾವತಿ ವ್ಯವಸ್ಥೆ ಫಾಸ್ಟ್ಯಾಗ್ ಇಂದಿನಿಂದಲೇ ಕಡ್ಡಾಯವಾಗಲಿದೆ ಎಂದು ಕೇಂದ್ರ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಕಾಂಗ್ರೆಸ್ ನಿಂದ ಬಿಜೆಪಿಗೆ ಹೋದವರಿಂದಲೇ ಶೆಟ್ಟರ್ ಗೆ ಸಿಎಂ ಮಾಡಲು ಯತ್ನ

ಈಗಾಗಲೇ ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ಹೋದವರು ಸಚಿವ ಜಗದೀಶ್ ಶೆಟ್ಟರ್ ಅವರನ್ನು ಸಿಎಂ ಮಾಡಲು ಯತ್ನಿಸಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.