ಬೆಂಗಳೂರು: ರೈತರು ಕೋವಿಡ್ ಸಂದರ್ಭದಲ್ಲಿಯೂ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡಿದ ಕೃಷಿ ಅಧಿಕಾರಿಗಳು ಸಹ ಕೊರೊನಾ ವಾರಿಯರ್ಸ್‌ಗಳಂತೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ವಿಕಾಸಸೌಧದಲ್ಲಿ ನಡೆದ‌ 2020-21ನೇ ಸಾಲಿನ‌ ಮುಂಗಾರು ಹಂಗಾಮು ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಕೃಷಿ ಇಲಾಖೆ ಮುಳ್ಳಿನ ಹಾಸಿಗೆ ಇದ್ದಂತೆ. ಬಹಳಷ್ಟು ಸವಾಲುಗಳು ಈ ಇಲಾಖೆಯಲ್ಲಿ ಬರುತ್ತವೆ. ಕೃಷಿ ಮತ್ತು ರೈತರಿಗಾಗಿ ದುಡಿಯುವ ಅವಕಾಶ ತಮಗೆ ಲಭಿಸಿದೆ. ಕೃಷಿ ಇಲಾಖೆಯಲ್ಲಿ ಅಭಿವೃದ್ಧಿಗಳಾದರೆ ಸರ್ಕಾರಕ್ಕೂ ಹೆಸರು ಬರುತ್ತದೆ. ದೇಶದ ಜನರಿಗೆ ಅನ್ನವೂ ಸಿಗುತ್ತದೆ. ಕೋವಿಡ್ ಸಂದಿಗ್ಧತೆ ಎನ್ನುವುದು ಯುದ್ಧದಂತೆ‌ ಎಂದರು.

ಕೈಕೊಟ್ಟ ಸೋಯಾ ಬೆಳೆ
ಸೋಯಾಬಿನ್ ಮಧ್ಯಪ್ರದೇಶ ಹಾಗೂ ಆಂದ್ರದಿಂದ ಪೂರೈಕೆಯಾಗುತ್ತಿತ್ತು. ಸುಗ್ಗಿ ಸಂದರ್ಭದಲ್ಲಿ ಫ್ಲಡ್ ಬಂದಿರುವುದರಿಂದ ಬಹಳ ಕಡೆ ಸೋಯಾಬೀನ್ ಬೆಳೆ ಬಂದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಈ ಬಾರಿ ರೈತರು ಸೋಯಾ ಬೆಳೆಯುವುದಕ್ಕೂ ಮೊದಲೇ ಭೂಮಿ ಮತ್ತು ವಾತಾವರಣವನ್ನು ನೋಡಿಕೊಂಡು ಮುಂದಾಗಬೇಕು. 1.5 ಲಕ್ಷ ಕ್ವಿಂಟಾಲ್ ಸೋಯಾಬೀನ್ ಬೀಜಕ್ಕೆ ಬೇಡಿಕೆ ಇತ್ತು. ಈಗಾಗಲೇ 1.04 ಲಕ್ಷ ಕ್ವಿಂಟಾಲ್ ಪೂರೈಸಿದ್ದೇವೆ. ಕಳೆದ ಬಾರಿಯ ಪ್ರವಾಹದಿಂದಾಗಿ ಸೋಯಾ ಫಸಲು ಈ ಬಾರಿ ಉತ್ತಮವಾಗಿ ಬರುವುದು ಅನುಮಾನ‌. ಮುನ್ನೆಚ್ಚರಿಕೆ ಕ್ರಮವಾಗಿ ರೈತರು ತಮ್ಮ ಭೂಮಿ ಮತ್ತು ಪೂರಕ ವಾತಾವರಣಕ್ಕೆ ಅನುಗುಣವಾದ ಪರ್ಯಾಯ ಬಿತ್ತನೆಗೆ ಮುಂದಾಗಲಿ ಎಂದು ಸಲಹೆ ನೀಡಿದರು.

ಭೂಮಿ ಮಾರಾಟಕ್ಕೆ ಮಾರ್ಗಸೂಚಿ

ಕರ್ನಾಟಕದಲ್ಲಿ ಮಾತ್ರ ಕೃಷಿ ಭೂಮಿ ಮಾರಾಟಕ್ಕೆ ನಿಬಂಧನೆ ಇತ್ತು. ಈಗ ಮಾರಾಟಕ್ಕೆ ಸಚಿವ ಸಂಪುಟದಲ್ಲಿ ನಿರ್ಧರಿಸಲಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ಕೃಷಿ ಭೂಮಿ ಮಾರಾಟದ ಬಗ್ಗೆ ಸರ್ಕಾರ ಕಂದಾಯ ಇಲಾಖೆ ಮಾರ್ಗಸೂಚಿ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಲಿದೆ.

ಕೋವಿಡ್‌ನಿಂದ ಪರಿಸ್ಥಿತಿಯೇ ಬದಲಾಗಿದೆ.
ವರ್ಷಕ್ಕೆ ಕೃಷಿ ವಿಶ್ವವಿದ್ಯಾಲಯದಿಂದ ನಾಲ್ಕು ಲಕ್ಷ ಪದವೀಧರರು ಹೊರಬರುತ್ತಿದ್ದಾರೆ. ಎಲ್ಲರಿಗೂ ಉದ್ಯೋ ಕಷ್ಟ.ಇಂತಹ ಪದವೀಧರರು ಈ ಹೊಸ‌ನಿಯಮದಿಂದ ಕೃಷಿಯತ್ತ ಆಕರ್ಷಕವಾಗಿ ಕೃಷಿಯಲ್ಲಿ ಆಗ್ರೋ ಇಂಡಸ್ಟ್ರೀಸ್‌ಗೂ ಕೃಷಿ ಭೂಮಿ ಅನುಕೂಲವಾಗಲಿದೆ. ಸಂಸ್ಕರಣಾ ಘಟಕ ಶೀಥಲೀಕರಣ ಆಹಾರ ಉತ್ಪಾದನಾ ಘಟಕಗಳಿಗೂ ಇದು ಬಳಕೆಯಾಗಬಹುದು.ಕೃಷಿ ಭೂಮಿ ಕೃಷಿಗೆ ಕೃಷಿ ಚಟುವಟಿಕೆಗಳಿಗೆ ಪೂರಕವಾಗಬೇಕು. ಕೃಷಿಭೂಮಿ ದುರ್ಬಳಕೆಯಾಗಬಾರದು ಎಂದು ಬಿ.ಸಿ.ಪಾಟೀಲರು ಸ್ಪಷ್ಟಪಡಿಸಿದರು.

Leave a Reply

Your email address will not be published. Required fields are marked *

You May Also Like

ಕೊರೋನಾ : ನಗರ ಪ್ರದೇಶಗಳ ಆತಂಕ

ನವದೆಹಲಿ : ಕೊರೊನಾದಿಂದಾಗಿ ನಗರ ಪ್ರದೇಶಗಳು ಅಕ್ಷರಶಃ ಆತಂಕದಲ್ಲಿ ಇವೆ. ಕೊರೊನಾದಿಂದಾಗಿ ನಿರುದ್ಯೋಗ, ಬಡತನ, ಅಸಮಾನತೆ…

ಕೊರೊನಾಕ್ಕೆ ಹೆದರಿ ಆತ್ಮಹತ್ಯೆ – ವರದಿ ನೆಗೆಟಿವ್!

ಬೀದರ್ : ತನಗೆ ಕೊರೊನಾ ವೈರಸ್ ಬಂದಿದೆ ಎಂದು ಆತಂಕಗೊಂಡ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆದರೆ, ಆತನ ಕೊರೊನಾ ವರದಿ ಮಾತ್ರ ನೆಗೆಟಿವ್ ಬಂದಿದೆ.

ಲಿಂ, ತೋಂಟದ ಸಿದ್ದಲಿಂಗ ಶ್ರೀ ಆದರ್ಶಗಳ ಮೇರು ಪರ್ವತ – ಡಾ.ಸಿದ್ದರಾಮ ಸ್ವಾಮೀಜಿ ಅಭಿಮತ

ಸಚಿತ್ರ ವರದಿ : ಗುಲಾಬಚಂದ ಜಾಧವ ಗದಗ : ಕ್ರಿಯಾಶೀಲತೆಯ ಮಾತೃ ಹೃದಯಿ ಲಿಂಗೈಕ್ಯ ಡಾ.ತೋಂಟದ…

Казино Leonbets играть онлайн бесплатно, официальный сайт, скачать клиент

Как скачать приложение Leonbets на Айфон iOS бесплатно Есть леон ру скачать…