ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿಯ ಈರಣ್ಣ ಕಡಾಡಿ, ಅಶೋಕ್ ಗಸ್ತಿ ರಾಜ್ಯಸಭೆಗೆ ಅವಿರೋಧ ಆಯ್ಕೆಯಾಗಿದ್ದಾರೆ.
ವಿಧಾನ ಸಭೆ ಕಾರ್ಯದರ್ಶಿ ಹಾಗೂ ರಾಜ್ಯಸಭಾ ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಈ ವಿಷಯವನ್ನು ಘೋಷಿಸಿದರು. ಜೆಡಿಎಸ್ ನಿಂದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಕಾಂಗ್ರೆಸ್ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿಯಿಂದ ಅಶೋಕ್ ಗಸ್ತಿ, ಈರಣ್ಣ ಕಡಾಡಿ ಈ ಬಾರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಾಮಪತ್ರ ವಾಪಸ್ ಗೆ ಇಂದು ಕಡೆಯ ದಿನವಾಗಿತ್ತು. ಒಬ್ಬರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಆದರೆ, ಅವರಿಗೆ ಸೂಚಕರ ಸಹಿ ಇರಲಿಲ್ಲ. ಆದ್ದರಿಂದ ಕಣದಲ್ಲಿ ಉಳಿದ ನಾಲ್ವರನ್ನೂ ಆಯ್ಕೆಯಾಗಿದ್ದಾರೆ ಎಂದು ಘೋಷಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಗಾಯನ ಲೋಕ ಬಿಟ್ಟು ಬೇರೆ ಲೋಕಕ್ಕೆ ತೆರಳಿದ ಎಸ್ ಪಿಬಿ!

ಚೆನ್ನೈ : ಹಿರಿಯ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ(74) ಗಾಯನ ಲೋಕ ತೊರೆದಿದ್ದಾರೆ. ಕೊರೊನಾ ಮಹಾಮಾರಿಯಿಂದಾಗಿ ಹಲವು…

ಯತ್ನಾಳ್ ರಾಜಿನಾಮೆಗೆ ಒತ್ತಾಯಿಸಿ ಕರವೇ ಪ್ರತಿಭಟನೆ: ಭೂತ ದಹನಕ್ಕೆ ಪೊಲೀಸರ ಅಡ್ಡಿ, ಪೊಲೀಸ್ ಹಾಗೂ ಪ್ರತಿಭಟನಾಕಾರರ ಮದ್ಯೆ ವಾಗ್ವಾದ

ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕನ್ನಡಪರ ಹೋರಾಟಗಾರರ ಬಗ್ಗೆ ಕೀಳಾಗಿ ಮಾತನಾಡಿರುವುದನ್ನು ಖಂಡಿಸಿ ನಗರದ ಗಾಂಧಿ ವೃತ್ತದಲ್ಲಿಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಅಮೇರಿಕಾದಲ್ಲಾದ ಹಾನಿಯನ್ನು ಚೀನಾ ದೇಶವೇ ತುಂಬಿಕೊಲಿ:ಟ್ರಂಪ್ ಆಗ್ರಹ..!

ಚೀನಾದ ನಿಷ್ಕಾಳಜಿಯೇ ಕೊರೋನಾ ಸೋಂಕು ವ್ಯಾಪಕವಾಗಲು ಕಾರಣ ಹೀಗಾಗಿ ನಮಗೆ ಆಗಿರುವ ಹಾನಿಯನ್ನು ತುಂಬಿಕೊಡುವಂತೆ ಚೀನಾ ದೇಶವನ್ನು ಆಗ್ರಹಿಸುತ್ತೇನೆ ಎಂದು ಅಮೇರಿಕಾ ಅಧ್ಯಕ್ಷ ಟ್ರಂಪ್ ಅಸಮಾಧಾನ ಹೊರಹಾಕಿದರು.