ದೆಹಲಿ: ಚೀನಾ, ನೇಪಾಳ ಗಡಿಯಲ್ಲಿ ಸಂಭವಿಸಿರುವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ #MaunModiMissing ಟ್ರೆಂಡಿಂಗ್ ಆಗಿದೆ. ಇದರೊಂದಿಗೆ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ನಡೆಸಿರುವ ಸುದ್ದಿ ಗೋಷ್ಠಿಯ ವಿಡಿಯೋವನ್ನು ಕೆಲವರು ಹಂಚಿಕೊಂಡಿದ್ದಾರೆ.
1971ರ ಬಾಂಗ್ಲಾ ಮತ್ತು ಪಾಕಿಸ್ತಾನ ವಿಷಯಕ್ಕೆ ಸಂಬಂಧಿಸಿದಂತೆ ಅಮೆರಿದ ಒತ್ತಡದ ನಡುವೆ ಕೂಡ ಉಕ್ಕಿನ ಮಹಿಳೆ ಇಂದಿರಾ ಗಾಂಧಿ ತಲೆಬಾಗಲಿಲ್ಲ ಎಂದು ವಿಡಿಯೋವನ್ನು ಹಂಚಿಕೊಂಡವರು ಬರೆದುಕೊಂಡಿದ್ದಾರೆ.
ಈ ಮೂಲಕ ಅಧಿಕಾರಕ್ಕೆ ಬಂದು ಆರು ವರ್ಷಗಳಾದರೂ, ನೆರೆಹೊರೆಯ ರಾಷ್ಟ್ರಗಳು ದೇಶದ ಮೇಲೆ ಕಾಲು ಕೆರೆಯುತ್ತಿರುವಾಗಲು ಪ್ರಧಾನಿ ನರೇಂದ್ರ ಮೋದಿಯವರು ಮೌನವಾಗಿದ್ದಾರೆ. ಅವರು ಮಾತಾಡಬೇಕು ಎಂದು ಪರೋಕ್ಷವಾಗಿ ಒತ್ತಾಯಿಸಿದ್ದಾರೆ.
ವಾಸ್ತವದಲ್ಲಿ ಪ್ರಧಾನಿ ನರೇಂದ್ರ ಮೋದಿ ಇದುವರೆಗೆ ಒಂದೇ ಒಂದು ಸುದ್ದಿ ಗೋಷ್ಠಿಯನ್ನು ನಡೆಸಿಲ್ಲ. ಅವರು ಅಧಿಕಾರಕ್ಕೆ ಬಂದ ನಂತರ ಸರ್ಕಾರಿ ವಾಹಿನಿಯಾದ ದೂರದರ್ಶನದಲ್ಲಿ ದೇಶವನ್ನು ಉದ್ದೇಶಿಸಿ ಭಾಷಣ ಮಾಡುವುದು, ಆಲ್ ಇಂಡಿಯಾ ರೇಡಿಯೋದಲ್ಲಿ ಮನ್ ಕಿ ಬಾತ್ ಆಡುವುದು, ಆಯ್ದ ಕೆಲವು ಸುದ್ದಿ ವಾಹಿನಿಗಳಿಗೆ ಸಂದರ್ಶನಕ್ಕೆ ಸಿಕ್ಕಿದ್ದಾರೆ. ಆದರೆ, ಇಷ್ಟು ದಿನಗಳ ಅವರ ಅಧಿಕಾರದ ಅವಧಿಯಲ್ಲಿ ಒಮ್ಮೆಯೂ ಪತ್ರಕರ್ತರೊಂದಿಗೆ ಸುದ್ದಿ ಗೋಷ್ಠಿ ನಡೆಸಿಲ್ಲ.
ದೇಶ ಕೊರೊನಾ ಸಂಕಷ್ಟಕ್ಕೆ ಸಿಲುಕಿದ ಸಮಯದಲ್ಲಿ ಕೂಡ ಪ್ರಧಾನಿ ಮೋದಿ, ದೂರದರ್ಶನದಲ್ಲಿ ಜನರಿಗೆ ಲಾಕ್ ಡೌನ್ ವಿಷಯ ತಿಳಿಸಿದರು. ನಂತರ ಕೊರೊನಾ ಯೋಧರಿಗೆ ನಮನ ಸಲ್ಲಿಸಲು ದೀಪ ಹಚ್ಚಿ, ದೀಪ ಆರಿಸಿ ಎಂದು ಕರೆನೀಡಿದ್ದರು.
2019ರ ಲೋಕಸಭೆ ಚುನಾವಣೆಯಲ್ಲಿ ಪಕ್ಷವನ್ನು ಅಭೂತಪೂರ್ವವಾಗಿ ಗೆಲ್ಲಿಸಿದ ನಂತರ ಅವರು ಸುದ್ದಿ ಗೋಷ್ಠಿಯಲ್ಲಿ ಹಾಜರಿದ್ದರು. ಆಗ ಎಲ್ಲರೂ ತೀವ್ರವಾಗಿ ಕುತೂಹಲದಿಂದ ಕಾಯುತ್ತಿದ್ದರು. ಆದರೆ, ಅಂದು ಅವರು ನಾನು ಮಾತಾಡುವುದಿಲ್ಲ. ನಮ್ಮದು ಶಿಸ್ತಿನ ಪಕ್ಷ. ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಮಾತಾಡುತ್ತಾರೆ ಎಂಬರ್ಥದ ಮಾತುಗಳನ್ನು ಹೇಳಿ, ಮೈಕ್ ಅನ್ನು ಪಕ್ಕಕ್ಕೆ ಸರಿಸಿದ್ದರು.

Leave a Reply

Your email address will not be published. Required fields are marked *

You May Also Like

ಗೋಧ್ರಾ ಹತ್ಯಾಕಾಂಡ: 19 ವರ್ಷಗಳ ಬಳಿಕ ಪ್ರಮುಖ ಆರೋಪಿ ಬಂಧನ

ಗೋಧ್ರಾ ರೈಲು ಹತ್ಯಾಕಾಂಡದ ಪ್ರಮುಖ ಆರೋಪಿಯನ್ನು 19 ವರ್ಷಗಳ ಬಳಿಕ ಬಂಧಿಸಲಾಗಿದೆ. ಗೋಧ್ರಾ ನಗರದ ರಫೀಕ್ ಹುಸೇನ್ ಭಾತುಕ್ ಬಂಧಿತ ಆರೋಪಿ. ಈತನೇ ಸಂಚು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಎಂದು ಪಂಚಮಹಲ್ ಪೊಲೀಸ್ ವರಿಷ್ಠಾಧಿಕಾರಿ ಲೀನಾ ಪಾಟೀಲ್ ತಿಳಿಸಿದ್ದಾರೆ.

ವಾರಂಟಿಯೇ ಇಲ್ಲದ ಮೇಲೆ ಗ್ಯಾರಂಟಿ ಹೇಗೆ ?
ಕಾಂಗೈ ಕಾಡ್೯ ಠುಸ್ಸು ಪರಸ್ಥಿತಿ ಈಗ ಬಲು ದುಸ್ಥಿತಿ ಸಿ.ಟಿ.ರವಿ ವ್ಯಂಗ್ಯ

ಆಲಮಟ್ಟಿ: ಕಾಂಗ್ರೆಸ್ ಪಕ್ಷ ರಾಜ್ಯದ ಜನತೆಗೆ ಭರಪೂರ ಸುಳ್ಳು ಭರವಸೆ ನೀಡುತ್ತಿದ್ದು, ಆ ಪಕ್ಷದ ವಾರಂಟಿಯೇ…

ವಿದ್ಯುತ್ ಕಾಯ್ದೆ ತಿದ್ದುಪಡಿಗೆ ಡಿಕೆಶಿ ವಿರೋಧ

ಬೆಂಗಳೂರು: 2003ರ ವಿದ್ಯುತ್ ಕಾಯ್ದೆ ತಿದ್ದುಪಡಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರೋಧ ವ್ಯಕ್ತಪಡಿಸಿದ್ದಾರೆ.ಈ ಕುರಿತು ಟ್ವೀಟ್…

ಶರಣೇಗೌಡ ಬಯ್ಯಾಪುರ ಗೆಲುವಿಗೆ ಮಸ್ಕಿಯಲ್ಲಿ ಸಂಭ್ರಮ

 ಉತ್ತರಪ್ರಭ ವರದಿ:ವಿಠ್ಠಲ ಕೆಳೊತ ಮಸ್ಕಿ: ರಾಯಚೂರು ಕೊಪ್ಪಳ ವಿಧಾನ ಪರಿಷತ್ ಚುನಾವಣೆಯಲ್ಲಿ ಶರಣೇಗೌಡ ಪಾಟೀಲ್ ಬಯ್ಯಾಪೂರು…