ದೆಹಲಿ: ಚೀನಾ, ನೇಪಾಳ ಗಡಿಯಲ್ಲಿ ಸಂಭವಿಸಿರುವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ #MaunModiMissing ಟ್ರೆಂಡಿಂಗ್ ಆಗಿದೆ. ಇದರೊಂದಿಗೆ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ನಡೆಸಿರುವ ಸುದ್ದಿ ಗೋಷ್ಠಿಯ ವಿಡಿಯೋವನ್ನು ಕೆಲವರು ಹಂಚಿಕೊಂಡಿದ್ದಾರೆ.
1971ರ ಬಾಂಗ್ಲಾ ಮತ್ತು ಪಾಕಿಸ್ತಾನ ವಿಷಯಕ್ಕೆ ಸಂಬಂಧಿಸಿದಂತೆ ಅಮೆರಿದ ಒತ್ತಡದ ನಡುವೆ ಕೂಡ ಉಕ್ಕಿನ ಮಹಿಳೆ ಇಂದಿರಾ ಗಾಂಧಿ ತಲೆಬಾಗಲಿಲ್ಲ ಎಂದು ವಿಡಿಯೋವನ್ನು ಹಂಚಿಕೊಂಡವರು ಬರೆದುಕೊಂಡಿದ್ದಾರೆ.
ಈ ಮೂಲಕ ಅಧಿಕಾರಕ್ಕೆ ಬಂದು ಆರು ವರ್ಷಗಳಾದರೂ, ನೆರೆಹೊರೆಯ ರಾಷ್ಟ್ರಗಳು ದೇಶದ ಮೇಲೆ ಕಾಲು ಕೆರೆಯುತ್ತಿರುವಾಗಲು ಪ್ರಧಾನಿ ನರೇಂದ್ರ ಮೋದಿಯವರು ಮೌನವಾಗಿದ್ದಾರೆ. ಅವರು ಮಾತಾಡಬೇಕು ಎಂದು ಪರೋಕ್ಷವಾಗಿ ಒತ್ತಾಯಿಸಿದ್ದಾರೆ.
ವಾಸ್ತವದಲ್ಲಿ ಪ್ರಧಾನಿ ನರೇಂದ್ರ ಮೋದಿ ಇದುವರೆಗೆ ಒಂದೇ ಒಂದು ಸುದ್ದಿ ಗೋಷ್ಠಿಯನ್ನು ನಡೆಸಿಲ್ಲ. ಅವರು ಅಧಿಕಾರಕ್ಕೆ ಬಂದ ನಂತರ ಸರ್ಕಾರಿ ವಾಹಿನಿಯಾದ ದೂರದರ್ಶನದಲ್ಲಿ ದೇಶವನ್ನು ಉದ್ದೇಶಿಸಿ ಭಾಷಣ ಮಾಡುವುದು, ಆಲ್ ಇಂಡಿಯಾ ರೇಡಿಯೋದಲ್ಲಿ ಮನ್ ಕಿ ಬಾತ್ ಆಡುವುದು, ಆಯ್ದ ಕೆಲವು ಸುದ್ದಿ ವಾಹಿನಿಗಳಿಗೆ ಸಂದರ್ಶನಕ್ಕೆ ಸಿಕ್ಕಿದ್ದಾರೆ. ಆದರೆ, ಇಷ್ಟು ದಿನಗಳ ಅವರ ಅಧಿಕಾರದ ಅವಧಿಯಲ್ಲಿ ಒಮ್ಮೆಯೂ ಪತ್ರಕರ್ತರೊಂದಿಗೆ ಸುದ್ದಿ ಗೋಷ್ಠಿ ನಡೆಸಿಲ್ಲ.
ದೇಶ ಕೊರೊನಾ ಸಂಕಷ್ಟಕ್ಕೆ ಸಿಲುಕಿದ ಸಮಯದಲ್ಲಿ ಕೂಡ ಪ್ರಧಾನಿ ಮೋದಿ, ದೂರದರ್ಶನದಲ್ಲಿ ಜನರಿಗೆ ಲಾಕ್ ಡೌನ್ ವಿಷಯ ತಿಳಿಸಿದರು. ನಂತರ ಕೊರೊನಾ ಯೋಧರಿಗೆ ನಮನ ಸಲ್ಲಿಸಲು ದೀಪ ಹಚ್ಚಿ, ದೀಪ ಆರಿಸಿ ಎಂದು ಕರೆನೀಡಿದ್ದರು.
2019ರ ಲೋಕಸಭೆ ಚುನಾವಣೆಯಲ್ಲಿ ಪಕ್ಷವನ್ನು ಅಭೂತಪೂರ್ವವಾಗಿ ಗೆಲ್ಲಿಸಿದ ನಂತರ ಅವರು ಸುದ್ದಿ ಗೋಷ್ಠಿಯಲ್ಲಿ ಹಾಜರಿದ್ದರು. ಆಗ ಎಲ್ಲರೂ ತೀವ್ರವಾಗಿ ಕುತೂಹಲದಿಂದ ಕಾಯುತ್ತಿದ್ದರು. ಆದರೆ, ಅಂದು ಅವರು ನಾನು ಮಾತಾಡುವುದಿಲ್ಲ. ನಮ್ಮದು ಶಿಸ್ತಿನ ಪಕ್ಷ. ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಮಾತಾಡುತ್ತಾರೆ ಎಂಬರ್ಥದ ಮಾತುಗಳನ್ನು ಹೇಳಿ, ಮೈಕ್ ಅನ್ನು ಪಕ್ಕಕ್ಕೆ ಸರಿಸಿದ್ದರು.

Leave a Reply

Your email address will not be published. Required fields are marked *

You May Also Like

ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಏರಿಕೆ?

ನವದೆಹಲಿ: 2021 ರ ಆರಂಭದಲ್ಲೇ ಕೇಂದ್ರ ಸರ್ಕಾರಿ ನೌಕರರಿಗೆ ಜನವರಿ 2021 ರಿಂದ ಅನ್ವಯವಾಗುವಂತೆ, ತುಟ್ಟಿ…

ಬೇರೆ ರಾಜ್ಯ, ದೇಶಗಳಿಂದ ಆಗಮಿಸಿದ ಕನ್ನಡಿಗರು!

ಆಪರೇಷನ್ ವಂದೇ ಭಾರತ್ ಮೆಗಾ ಏರ್‌ಲಿಫ್ಟ್ ಮೂಲಕ ಬೇರೆ ಬೇರೆ ರಾಜ್ಯಗಳಿಂದ ಮತ್ತು ವಿದೇಶಗಳಿಂದ ಕನ್ನಡಿಗರು ಮರಳುತ್ತಿದ್ದು, ನಗರಕ್ಕೆ ಇಂದು 326 ಜನ ಕನ್ನಡಿಗರು ಆಗಮಿಸಿದ್ದಾರೆ.

ಕೊರೊನಾದಿಂದಾಗಿ ಮಲೆ ಮಹದೇಶ್ವರನಿಗೆ ಎಷ್ಟು ನಷ್ಟವಾಗಿದೆ ಗೊತ್ತಾ?

ಹುಂಡಿಯೊಂದರಲ್ಲಿಯೇ ಪ್ರತಿ ತಿಂಗಳು ಕೋಟಿ ರೂ.ಗೂ ಹೆಚ್ಚು ಸಂಗ್ರಹವಾಗುತ್ತಿತ್ತು. ಚಿನ್ನದ ತೇರು, ವಿವಿಧ ಸೇವೆ ಲಾಡು ಮಾರಾಟ ಹಾಗೂ ವಸತಿ ಗೃಹ ಮೊದಲಾದ ಮೂಲಗಳಿಂದ ಬರುತ್ತಿದ್ದ ಆದಾಯದಲ್ಲಿ ಇದೀಗ ಕೋಟಿಗಟ್ಟಲೆ ಕಡಿತವಾಗಿದೆ.

ಮದುಮಗ ಹಾರ ಹಾಕಿದ್ ಕೂಡಲೇ ಖುಷಿಯಾದ ಮದುಮಗಳು ಮಾಡಿದ್ದೇನು?

ಉತ್ತರ ಪ್ರದೇಶ: ಪ್ರತಿಯೊಬ್ಬರಿಗೂ ಮದುವೆ ಬಗ್ಗೆ ಅವರದ್ದೆ ಕನಸಿರುತ್ತೆ. ಆಸೆ-ಆಕಾಂಕ್ಷೆಗಳಿರುತ್ತೆ. ಆದರೆ ಇಲ್ಲೊಬ್ಬ ಯುವತಿ ಮದುಮಗ ತನ್ನ ಕೊರಳಿಗೆ ಹಾರ ಹಾಕಿದ ತಕ್ಷಣ ತನ್ನ ಪ್ರತಿಕ್ರಿಯೇ ಹೇಗಿರಬೇಕೆಂದು ವಿಭಿನ್ನ ಕಲ್ಪನೆಯೊಂದನ್ನು ಕಟ್ಟಿಕೊಂಡಿದ್ದಳು. ಈ ಕಾರಣಕ್ಕಾಗಿ ಏನೋ ಮಾಡಲು ಹೋಗಿ ಯಡವಟ್ಟು ಮಾಡಿಕೊಂಡ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.