ಬೆಂಗಳೂರು: ಎನ್ ಆರ್ ಸಿ, ಸಿಎಎ ವಿರುದ್ಧದ ಪ್ರತಿಭಟನೆ ವೇಳೆ ಬೆಂಗಳೂರಿನಲ್ಲಿ ಪಾಕ್ ಪರ ಘೋಷಣೆ ಕೂಗಿ ಸೆರೆಮನೆ ಪಾಲಾಗಿದ್ದ ವಿದ್ಯಾರ್ಥಿನಿ ಅಮೂಲ್ಯ ಲಿಯೋನಾಗೆ ಕಡೆಗೂ ಜಾಮೀನು ಸಿಕ್ಕಿದ್ದು, ಅವರು ಬಿಡುಗಡೆಯಾಗಿದ್ದಾರೆ.
ಫೆ. 21ರಂದು ಬೆಂಗಳೂರಿನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಸಿಎಎ, ಎನ್ ಆರ್ ಸಿ ವಿರೋಧಿಸಿ ಬೃಹತ್ ಸಮಾವೇಶ ಆಯೋಜನೆಯಾಗಿತ್ತು. ಸಂಸದ ಅಸಾದುದ್ದಿನ್ ಓವೈಸಿ ಸೇರಿದಂತೆ ಅನೇಕ ಸಾಮಾಜಿಕ ಹೋರಾಟಗಾರರು ಸಮಾವೇಶದಲ್ಲಿ ಭಾಗಿಯಾಗಿದ್ದರು. ಈ ವೇಳೆ ಮೈಕ್ ಹಿಡಿದ ಅಮೂಲ್ಯ ಲಿಯೋನಾ ‘ಪಾಕಿಸ್ತಾನ್ ಜಿಂದಾಬಾದ್’ ಎಂದಿದ್ದರು. ಅವರು ಮುಂದುವರೆದು ಏನನ್ನೋ ಹೇಳು ಹೊರಟಿದ್ದರು. ಆದರೆ, ಸಂಘಟಕರು ಮತ್ತು ಸ್ವತಃ ಅಸಾದುದ್ದಿನ್ ಓವೈಸಿ ಅಮೂಲ್ಯ ಅವರಿಗೆ ಮುಂದೆ ಮಾತಾಡಲು ಅವಕಾಶವನ್ನು ನೀಡಿರಲಿಲ್ಲ.
ಮುಂದಿನ ಬೆಳವಣಿಗೆಯಲ್ಲಿ ಅವರನ್ನು ದೇಶದ್ರೋಹದ ಆರೋಪದಡಿ ಬಂಧಿಸಲಾಗಿತ್ತು. ಅನಂತರ ಅವರ ಜಾಮೀನು ಅರ್ಜಿ ತಿರಸ್ಕರಿಸಲಾಗಿತ್ತು. ಕಡೆಗೆ ಸಿ ಆರ್ ಪಿ ಸಿ ಸೆಕ್ಷನ್ 162 ಕಲಂ 2ರ ಅಡಿಯಲ್ಲಿ ಷರತ್ತುಬದ್ಧ ಜಾಮೀನನ್ನು ಅವರಿಗೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಬಿಡುಗಡೆ ಮಾಡಲಾಗಿದೆ.

Leave a Reply

Your email address will not be published. Required fields are marked *

You May Also Like

ಅಧಿಕಾರಿಗಳ ನಿರ್ಲಕ್ಷ್ಯ : ಪೈಪ ಒಡೆದು ನೀರು ಪೊಲು ರಸ್ತೆ ದಾಟಲು ವಿದ್ಯಾರ್ಥಿಗಳ ಪರದಾಟ

ಒಂದು ವಾರದಿಂದ ಕುಡಿಯೋ ನೀರಿನ ಪೈಪ ಹೊಡದೈತರಿ ಹಂಗ ನೀರ ಹರದ ರೊಡ ಮತ್ತು ಹೊಲಕ್ಕ ಹರಿಯಾಕತೈತಿ ಯಾರು ಬಂದು ಅದನ್ನು ರೀಪೆರಿ ಮಾಡಿಲ್ಲ ಶಾಲೆ ಹುಡುಗರು, ಮುದುಕರು ಮತ್ತು ಬಹಳ ಗಾಡಿಯವರು ಜಾರಿ ಬಿದ್ದ ಗಾಯಾ ಮಾಡಕೊಂಡಾರ ಅಷ್ಟ ಅಲ್ಲರಿ ಹೊಲದಾಗ ಒಟ್ಟಿರೊ ಬಣವಿಗೆ ನೀರ್ ಹೊಕ್ಕೊಂಡು ಮೇವ ಹಾಳಾಗೈತಿ, ಈ ಸಮಸ್ಯೆ ಯಾರಿಗ ಹೆಳೋದು ಅಂತ ತಿಳಿವಲ್ದ, ಒಟ್ಟಾರೆ ಸರಿಹೋದ್ರ ಸಾಕು. -ಸೋಮನಗೌಡರ ಪಾಟೀಲ್ ಅಡವಿಸೋಮಾಪುರ ಗ್ರಾಮದ ನಿವಾ

ಇಲಿಗಳೂ ಸಾರಾಯಿ ಕುಡಿಯುತ್ತವೆ.

ಆ ಟ್ಯೂಬ್ ನಲ್ಲಿ ಇದ್ದ ಸಾರಾಯಿಯನ್ನು ಮುದ್ದೆ ಮಾಲು ಕೊಠಡಿಯಲ್ಲಿ ಇದ್ದ ಇಲಿಗಳು ಕುಡಿದಿವೆ ಅಂತ ಹೇಳಿದ. ಆ ಕೊಠಡಿಯಲ್ಲಿ ಇಲಿ ಇದ್ದದ್ದು ನಿಜ ಆದರೆ ಇಲಿ ಸಾರಾಯಿ ಕುಡಿದಿದ್ದು ಯಾರು ಗಮನಿಸಿಲ್ಲ. ಆದರೂ ಇಲಿ ಸಾರಾಯಿ ಕುಡಿದಿದ್ದು, ನಿಜ..!

ಗದಗ ಜಿಲ್ಲೆಯಲ್ಲಿಂದು 39 ಪಾಸಿಟಿವ್ : ಸೋಂಕಿನ ಮಿಂಚಿನ ಓಟ!

ಜಿಲ್ಲೆಯಲ್ಲಿಂದು 39 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 370 ಕ್ಕೆ ಏರಿಕೆಯಾಗಿದೆ. ಒಟ್ಟು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 194.