ಬೆಂಗಳೂರು: ಎನ್ ಆರ್ ಸಿ, ಸಿಎಎ ವಿರುದ್ಧದ ಪ್ರತಿಭಟನೆ ವೇಳೆ ಬೆಂಗಳೂರಿನಲ್ಲಿ ಪಾಕ್ ಪರ ಘೋಷಣೆ ಕೂಗಿ ಸೆರೆಮನೆ ಪಾಲಾಗಿದ್ದ ವಿದ್ಯಾರ್ಥಿನಿ ಅಮೂಲ್ಯ ಲಿಯೋನಾಗೆ ಕಡೆಗೂ ಜಾಮೀನು ಸಿಕ್ಕಿದ್ದು, ಅವರು ಬಿಡುಗಡೆಯಾಗಿದ್ದಾರೆ.
ಫೆ. 21ರಂದು ಬೆಂಗಳೂರಿನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಸಿಎಎ, ಎನ್ ಆರ್ ಸಿ ವಿರೋಧಿಸಿ ಬೃಹತ್ ಸಮಾವೇಶ ಆಯೋಜನೆಯಾಗಿತ್ತು. ಸಂಸದ ಅಸಾದುದ್ದಿನ್ ಓವೈಸಿ ಸೇರಿದಂತೆ ಅನೇಕ ಸಾಮಾಜಿಕ ಹೋರಾಟಗಾರರು ಸಮಾವೇಶದಲ್ಲಿ ಭಾಗಿಯಾಗಿದ್ದರು. ಈ ವೇಳೆ ಮೈಕ್ ಹಿಡಿದ ಅಮೂಲ್ಯ ಲಿಯೋನಾ ‘ಪಾಕಿಸ್ತಾನ್ ಜಿಂದಾಬಾದ್’ ಎಂದಿದ್ದರು. ಅವರು ಮುಂದುವರೆದು ಏನನ್ನೋ ಹೇಳು ಹೊರಟಿದ್ದರು. ಆದರೆ, ಸಂಘಟಕರು ಮತ್ತು ಸ್ವತಃ ಅಸಾದುದ್ದಿನ್ ಓವೈಸಿ ಅಮೂಲ್ಯ ಅವರಿಗೆ ಮುಂದೆ ಮಾತಾಡಲು ಅವಕಾಶವನ್ನು ನೀಡಿರಲಿಲ್ಲ.
ಮುಂದಿನ ಬೆಳವಣಿಗೆಯಲ್ಲಿ ಅವರನ್ನು ದೇಶದ್ರೋಹದ ಆರೋಪದಡಿ ಬಂಧಿಸಲಾಗಿತ್ತು. ಅನಂತರ ಅವರ ಜಾಮೀನು ಅರ್ಜಿ ತಿರಸ್ಕರಿಸಲಾಗಿತ್ತು. ಕಡೆಗೆ ಸಿ ಆರ್ ಪಿ ಸಿ ಸೆಕ್ಷನ್ 162 ಕಲಂ 2ರ ಅಡಿಯಲ್ಲಿ ಷರತ್ತುಬದ್ಧ ಜಾಮೀನನ್ನು ಅವರಿಗೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಬಿಡುಗಡೆ ಮಾಡಲಾಗಿದೆ.

Leave a Reply

Your email address will not be published. Required fields are marked *

You May Also Like

ಸಾರಿಗೆ ಸಿಬ್ಬಂಧಿಗಳ ಸಮಸ್ಯೆ ಕುರಿತು ಸರ್ಕಾರದ ಗಮನ ಸೆಳೆದ ಸಾರಿಗೆ ನೌಕರರ ಮಹಾ ಮಂಡಳ

ಬೆಂಗಳೂರು: ಕೋವಿಡ್-19ರ ದುಷ್ಪರಿಣಾಮದಿಂದ ಸಾರಿಗೆ ಸಂಸ್ಥೆಗಳ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಸಾರಿಗೆ ಸಂಸ್ಥೆಗಳನ್ನು ಪುನಶ್ಚೇತನಗೊಳಿಸುವ…

ಕೊರೊನಾ ಎಫೆಕ್ಟ್: ಎಂಜನೀಯರಿಂಗ್, ಡಿಪ್ಲೋಮಾ, ಎಂಬಿಎ, ಐಟಿಐ ಉದ್ಯೋಗಿಗಳು ನರೆಗಾ ಕೆಲಸಕ್ಕೆ..!

ಉನ್ನತ ಶಿಕ್ಷಣ ಪಡೆದು ತಿಂಗಳಾದರೆ ಸಾಕು ಕೈತುಂಬ ಸಂಬಳ ಎಣಿಸುತ್ತಿದ್ದವರು ಬದುಕಿನ ಅನಿವಾರ್ಯತೆಗೆ ನರೇಗಾ ಕೂಲಿ ಕೆಲಸಕ್ಕೆ ಹೊರಟಿದ್ದಾರೆ.

ಹೊಗಳು ಭಟ್ಟರಿಂದ ದೂರವಿರುವಂತೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಸಲಹೆ ನೀಡಿದ ವಿಶ್ವನಾಥ್!

ಮೈಸೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಹಳ್ಳಿ ಹಕ್ಕಿ ಸಲಹೆ ನೀಡಿದೆ. ಅವರಿಗೆ ಪಕ್ಷದಲ್ಲಿ ಮನ್ನಣೆ ಸಿಗುತ್ತಿಲ್ಲ. ಅವರು ಹೊಗಳು ಭಟ್ಟರಿಂದ ದೂರ ಇರಬೇಕು ಎಂದು ಮಾಜಿ ಸಚಿವ ಎಚ್. ವಿಶ್ವನಾಥ್ ಎಚ್ಚರಿಕೆ ನೀಡಿದ್ದಾರೆ.