ಬೆಂಗಳೂರು: ಎನ್ ಆರ್ ಸಿ, ಸಿಎಎ ವಿರುದ್ಧದ ಪ್ರತಿಭಟನೆ ವೇಳೆ ಬೆಂಗಳೂರಿನಲ್ಲಿ ಪಾಕ್ ಪರ ಘೋಷಣೆ ಕೂಗಿ ಸೆರೆಮನೆ ಪಾಲಾಗಿದ್ದ ವಿದ್ಯಾರ್ಥಿನಿ ಅಮೂಲ್ಯ ಲಿಯೋನಾಗೆ ಕಡೆಗೂ ಜಾಮೀನು ಸಿಕ್ಕಿದ್ದು, ಅವರು ಬಿಡುಗಡೆಯಾಗಿದ್ದಾರೆ.
ಫೆ. 21ರಂದು ಬೆಂಗಳೂರಿನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಸಿಎಎ, ಎನ್ ಆರ್ ಸಿ ವಿರೋಧಿಸಿ ಬೃಹತ್ ಸಮಾವೇಶ ಆಯೋಜನೆಯಾಗಿತ್ತು. ಸಂಸದ ಅಸಾದುದ್ದಿನ್ ಓವೈಸಿ ಸೇರಿದಂತೆ ಅನೇಕ ಸಾಮಾಜಿಕ ಹೋರಾಟಗಾರರು ಸಮಾವೇಶದಲ್ಲಿ ಭಾಗಿಯಾಗಿದ್ದರು. ಈ ವೇಳೆ ಮೈಕ್ ಹಿಡಿದ ಅಮೂಲ್ಯ ಲಿಯೋನಾ ‘ಪಾಕಿಸ್ತಾನ್ ಜಿಂದಾಬಾದ್’ ಎಂದಿದ್ದರು. ಅವರು ಮುಂದುವರೆದು ಏನನ್ನೋ ಹೇಳು ಹೊರಟಿದ್ದರು. ಆದರೆ, ಸಂಘಟಕರು ಮತ್ತು ಸ್ವತಃ ಅಸಾದುದ್ದಿನ್ ಓವೈಸಿ ಅಮೂಲ್ಯ ಅವರಿಗೆ ಮುಂದೆ ಮಾತಾಡಲು ಅವಕಾಶವನ್ನು ನೀಡಿರಲಿಲ್ಲ.
ಮುಂದಿನ ಬೆಳವಣಿಗೆಯಲ್ಲಿ ಅವರನ್ನು ದೇಶದ್ರೋಹದ ಆರೋಪದಡಿ ಬಂಧಿಸಲಾಗಿತ್ತು. ಅನಂತರ ಅವರ ಜಾಮೀನು ಅರ್ಜಿ ತಿರಸ್ಕರಿಸಲಾಗಿತ್ತು. ಕಡೆಗೆ ಸಿ ಆರ್ ಪಿ ಸಿ ಸೆಕ್ಷನ್ 162 ಕಲಂ 2ರ ಅಡಿಯಲ್ಲಿ ಷರತ್ತುಬದ್ಧ ಜಾಮೀನನ್ನು ಅವರಿಗೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಬಿಡುಗಡೆ ಮಾಡಲಾಗಿದೆ.

Leave a Reply

Your email address will not be published. Required fields are marked *

You May Also Like

ಯುವ ಕಾಂಗ್ರೆಸ್ ಅಧ್ಯಕ್ಷ ಸರ್ಫರಾಜ್ ಅವರಿಗೆ ಅಭಿನಂದನೆ

ಬ್ಲಾಕ್ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಸರ್ಫರಾಜ್ ಸೂರಣಗಿಯವರನ್ನು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಜಿ.ಎಸ್.ಗಡ್ಡದೇವರಮಠ ಅಭಿನಂದಿಸಿದರು.

ರಾಜ್ಯದಲ್ಲಿಂದು 271 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು 271 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 6516 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 464. ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 3440 ಕೇಸ್ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 2995 ಸಕ್ರೀಯ ಪ್ರಕರಣಗಳಿವೆ.

ಆಲಮಟ್ಟಿ ಬಳಿ ಬೈಕ್, ಬಸ್ ಡಿಕ್ಕಿ; ಇರ್ವರ ಸಾವು

ಆಲಮಟ್ಟಿ; ಬೈಕ್ ಹಾಗು ಖಾಸಗಿ ಬಸ್ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಪ್ರಾಣ…

ದೇಶದಲ್ಲಿ 59 ಲಕ್ಷದ ಗಡಿ ದಾಟಿದ ಮಹಾಮಾರಿ!

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 85,362 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ ದೇಶದಲ್ಲಿ 59 ಲಕ್ಷದ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.