ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಅವರಿಗೆ ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಅಭಿವೃದ್ಧಿ ನಿಗಮ ಲಿಮಿಟೆಡ್ (ಕಿಯೋನಿಕ್ಸ್) ಅಧ್ಯಕ್ಷ ಗಾದಿ ಒಲಿದಿದೆ. ಸರ್ಕಾರ ಈ ಕುರಿತು ಆದೇಶ ಹೊರಡಿಸಿದ್ದು, ಬಿಲ್ಲವ ಸಮುದಾಯಕ್ಕೆ ಕಿಯೋನಿಕ್ಸ್ ಗೆ ಅಧ್ಯಕ್ಷ ಪದವಿ ದಕ್ಕಿದೆ.
ಕಿಯೋನಿಕ್ಸ್ ರಾಜ್ಯ ಸರ್ಕಾರದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾಗಿದ್ದು, ಸರ್ಕಾರಿ ಇಲಾಖೆಗಳಿಗೆ ಮಾಹಿತಿ ತಂತ್ರಜ್ಞಾನ ಹಾಗೂ ಮಾನವ ಸಂಪನ್ಮೂಲ ಸೇವೆಯನ್ನು ಒದಗಿಸುತ್ತದೆ.
ಇನ್ನು ಹರಿಕೃಷ್ಣ ಅವರು, 2017ರಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರ ವಿರುದ್ಧ ಕೆಲವು ಆರೋಪಗಳನ್ನು ಹೊರಿಸಿ, ಪಕ್ಷ ತೊರೆದು ಬಿಜೆಪಿ ಸೇರಿದ್ದರು. ಇದಾದ ಕೆಲವೇ ವರ್ಷಗಳಲ್ಲಿ ಅವರು ಬಿಜೆಪಿಯಲ್ಲಿ ಜಿಲ್ಲಾ ಉಪಾಧ್ಯಕ್ಷರಾಗಿ ನೇಮಕವಾಗಿದ್ದರು. ಜೊತೆಗೆ, ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಕಾರ್ಯನಿರ್ವಾಹಕ ಸದಸ್ಯ, ವಕ್ತಾರ, ಮುಲ್ಕಿಯ ರಾಷ್ಟ್ರೀಯ ಬಿಲ್ಲವ ಮಹಾ ಮಂಡಲದ ವಕ್ತಾರರಾಗಿದ್ದಾರೆ.
ಈಗ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅವರಿಗೆ ಕಿಯೋನಿಕ್ಸ್ ಅಧ್ಯಕ್ಷ ಹುದ್ದೆಗೆ ನೇಮಿಸಿ, ಆದೇಶ ಹೊರಡಿಸಿದೆ.

Leave a Reply

Your email address will not be published. Required fields are marked *

You May Also Like

ದಿನದಿಂದ ದಿನಕ್ಕೆ ದೇಶದಲ್ಲಿ ಹೆಚ್ಚಾಗುತ್ತಿದೆ ಕೊರೊನಾ ಆತಂಕ!

ಬೆಂಗಳೂರು: ದೇಶದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಹಲವು ದೇಶಗಳಲ್ಲಂತೂ ಇದರ ನಾಗಾಲೋಟ…

ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ

ಬೆಂಗಳೂರು: ದಿನದಿಂದ ದಿನಕ್ಕೆ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಕೊರೊನಾ ಸೋಂಕಿತರ ವಿಶೇಷ ಚಿಕಿತ್ಸೆಗಾಗಿ ಐಸಿಯು ವಾರ್ಡನಲ್ಲಿ…

ದೆಹಲಿಯಲ್ಲಿ ಜುಲೈ ಅಂತ್ಯಕ್ಕೆ ಸೋಂಕಿತರ ಸಂಖ್ಯೆ ಎಷ್ಟಿರಲಿದೆ ಗೊತ್ತಾ?

ಕೊರೊನಾಗೆ ದೆಹಲಿ ತತ್ತರಿಸಿ ಹೋಗಿದೆ. ಇದು ಹೀಗೆ ಮುಂದುವರೆದರೆ ಜುಲೈ ಅಂತ್ಯದ ವೇಳೆಗೆ ದೆಹಲಿಯಲ್ಲಿ 5.5 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಳ್ಳಲಿದೆ ಎಂದು ಡಿಸಿಎಂ ಮನೀಶ್ ಸಿಸೋಡಿಯಾ ಆತಂಕ ವ್ಯಕ್ತಪಡಿಸಿದ್ದಾರೆ.

ಡ್ರಗ್ಸ್ ಮಾಫಿಯಾ – ವಿಚಾರಣೆಗೆ ಹಾಜರಾದ ನಿರೂಪಕಿ ಅನುಶ್ರೀ!

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕಿ ಹಾಗೂ ಕಿರುತೆರೆ ನಟಿ ಅನುಶ್ರೀ ಅವರು ಇಂದು ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ.