ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಅವರಿಗೆ ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಅಭಿವೃದ್ಧಿ ನಿಗಮ ಲಿಮಿಟೆಡ್ (ಕಿಯೋನಿಕ್ಸ್) ಅಧ್ಯಕ್ಷ ಗಾದಿ ಒಲಿದಿದೆ. ಸರ್ಕಾರ ಈ ಕುರಿತು ಆದೇಶ ಹೊರಡಿಸಿದ್ದು, ಬಿಲ್ಲವ ಸಮುದಾಯಕ್ಕೆ ಕಿಯೋನಿಕ್ಸ್ ಗೆ ಅಧ್ಯಕ್ಷ ಪದವಿ ದಕ್ಕಿದೆ.
ಕಿಯೋನಿಕ್ಸ್ ರಾಜ್ಯ ಸರ್ಕಾರದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾಗಿದ್ದು, ಸರ್ಕಾರಿ ಇಲಾಖೆಗಳಿಗೆ ಮಾಹಿತಿ ತಂತ್ರಜ್ಞಾನ ಹಾಗೂ ಮಾನವ ಸಂಪನ್ಮೂಲ ಸೇವೆಯನ್ನು ಒದಗಿಸುತ್ತದೆ.
ಇನ್ನು ಹರಿಕೃಷ್ಣ ಅವರು, 2017ರಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರ ವಿರುದ್ಧ ಕೆಲವು ಆರೋಪಗಳನ್ನು ಹೊರಿಸಿ, ಪಕ್ಷ ತೊರೆದು ಬಿಜೆಪಿ ಸೇರಿದ್ದರು. ಇದಾದ ಕೆಲವೇ ವರ್ಷಗಳಲ್ಲಿ ಅವರು ಬಿಜೆಪಿಯಲ್ಲಿ ಜಿಲ್ಲಾ ಉಪಾಧ್ಯಕ್ಷರಾಗಿ ನೇಮಕವಾಗಿದ್ದರು. ಜೊತೆಗೆ, ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಕಾರ್ಯನಿರ್ವಾಹಕ ಸದಸ್ಯ, ವಕ್ತಾರ, ಮುಲ್ಕಿಯ ರಾಷ್ಟ್ರೀಯ ಬಿಲ್ಲವ ಮಹಾ ಮಂಡಲದ ವಕ್ತಾರರಾಗಿದ್ದಾರೆ.
ಈಗ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅವರಿಗೆ ಕಿಯೋನಿಕ್ಸ್ ಅಧ್ಯಕ್ಷ ಹುದ್ದೆಗೆ ನೇಮಿಸಿ, ಆದೇಶ ಹೊರಡಿಸಿದೆ.

Leave a Reply

Your email address will not be published. Required fields are marked *

You May Also Like

ಮಾಗಡಿ : ಗ್ರಾಪಂ ಮಾಜಿ ಸದಸ್ಯರ ಬಣವಿಗೆ ಬೆಂಕಿ..!

ತಾಲೂಕಿನ ಮಾಗಡಿ ಗ್ರಾಪಂ ವ್ಯಾಪ್ತಿಯ ಪರಸಾಪೂರ (ವಾರ್ಡ ನಂ:6) ಗ್ರಾಮದಲ್ಲಿ ಶೇಂಗಾ ಬಣವಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ. ಮಾಜಿ ಗ್ರಾಪಂ ಸದಸ್ಯ ಬಸಪ್ಪ ಬೇರಗಣ್ಣವರ ಸದ್ಯ ನಡೆಯುತ್ತಿರುವ ಚುನಾವಣೆಗೆ ಅವರ ಮಗ‌ನನ್ನು ಕಣಕ್ಕೆ ಇಳಿಸಿದ್ದರು.

ಬೇರೆ ರಾಜ್ಯ, ದೇಶಗಳಿಂದ ಆಗಮಿಸಿದ ಕನ್ನಡಿಗರು!

ಆಪರೇಷನ್ ವಂದೇ ಭಾರತ್ ಮೆಗಾ ಏರ್‌ಲಿಫ್ಟ್ ಮೂಲಕ ಬೇರೆ ಬೇರೆ ರಾಜ್ಯಗಳಿಂದ ಮತ್ತು ವಿದೇಶಗಳಿಂದ ಕನ್ನಡಿಗರು ಮರಳುತ್ತಿದ್ದು, ನಗರಕ್ಕೆ ಇಂದು 326 ಜನ ಕನ್ನಡಿಗರು ಆಗಮಿಸಿದ್ದಾರೆ.

ಕೊರೊನಾ ಕಾರಣ: ಗದಗ ಜಿಲ್ಲೆಯಲ್ಲಿ ನಿಯಂತ್ರಿತ ಪ್ರದೇಶ(ಕಂಟೇನ್ಮೆಂಟ ಝೋನ್) ವಿವರ

ಕೊರೊನಾ ಕಾರಣ: ಗದಗ ಜಿಲ್ಲೆಯಲ್ಲಿ ನಿಯಂತ್ರಿತ ಪ್ರದೇಶ(ಕಂಟೇನ್ಮೆಂಟ ಝೋನ್) ವಿವರ

ಕಂಡಕ್ಟರ್- ಡ್ರೈವರ್ ಗಳಿಗೆ ವೇತನ ರಹಿತ ರಜೆಗೆ ಚಿಂತನೆ?

ಬೆಂಗಳೂರು: ಲಾಕ್ ಡೌನ್ ಹಿನ್ನೆಲೆ ಬಂದ್ ಆಗಿದ್ದ ಬಸ್ ಸಂಚಾರ ಈಗಷ್ಟೆ ಆರಂಭವಾಗಿದೆ. ಆದರೆ ಪ್ರಯಾಣಿಕರು…