ಚಿತ್ರದುರ್ಗ: ಭೋವಿ, ಲಂಬಾಣಿ, ಕೊರಮ, ಕೊರಚ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಟ್ಟಿಲ್ಲ ಹಾಗೂ ಬಿಡುವುದಿಲ್ಲ ಎಂದು ಡಿಸಿಎಂ ಗೋವಿಂದ ಕಾರಜೊಳ ಹೇಳಿಕೆಯನ್ನು ಸ್ವಾಗತಿಸುತ್ತೇವೆ ಎಂದು ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು.
ಹೊಸದುರ್ಗ ನಗರದಲ್ಲಿ ಶನಿವಾರ ಪತ್ರ ಚಳುವಳಿ ಕುರಿತ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತಾನಾಡಿದ ಅವರು, ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಮೀಸಲಾತಿಯಲ್ಲಿ 1927ರಲ್ಲೇ ಗುರುತಿಸಿ, ಈ ಸಮುದಾಯಗಳ ಅಭ್ಯುದಯಕ್ಕೆ ಬುನಾದಿ ಹಾಕಿದ್ದಾರೆ. ಕಾಲಕ್ರಮೇಣ ಬದಲಾದ ಪ್ರಭುತ್ವ ವ್ಯವಸ್ಥೆಯಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ 1950ರಲ್ಲಿ ಆರು ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಗುರುತಿಸಿದ್ದು, ಮೂಲ ಪರಿಶಿಷ್ಟ ಜಾತಿಗಳಾಗಿ ಭೋವಿ, ಲಂಬಾಣಿ, ಕೊರಮ, ಕೊರಚ ಸಮುದಾಯಗಳನ್ನು ಗುರುತಿಸಿದ್ದಾರೆ ಎಂದರು.
ಈ ಸಮುದಾಯಗಳು ಅಲೆಮಾರಿ ಹಾಗೂ ಅರೆಅಲೆಮಾರಿ ಮತ್ತು ಶ್ರಮ ಸಂಸ್ಕೃತಿಯ ಸಮುದಾಯಗಳಾದ ಕಾರಣ, ಅಕ್ಷರ ಸಂಸ್ಕೃತಿಯಿಂದ ವಿಮುಖವಾಗಿವೆ. ವಿದ್ಯಾವಂತರ ಕೊರತೆಯಿಂದ ಸರ್ಕಾರಿ ಮೀಸಲಾತಿ ಪ್ರಯೋಜನ ಪಡೆಯುವಲ್ಲಿ ಹಿನ್ನಡೆ ಉಂಟಾಗಿದೆ. ಶೇ.95ರಷ್ಟು ಕುಟುಂಬಗಳಿಗೆ ಇಂದಿಗೂ ಮನೆ, ಆಸ್ತಿ, ಜಮೀನು ಇಲ್ಲ. ಹೊಟ್ಟೆ ಪಾಡಿಗಾಗಿ ಊರೂರು ಅಲೆದು ಜೀವನ ನಡೆಸುತ್ತಿದ್ದಾರೆ ಎಂದರು.
ಈ ಸಮುದಾಯಗಳಿಗೆ ಸೇರಿದವರು ಸರಿಯಾದ ನೆಲೆ ಸಿಗದೆ ಗುಳೆ ಹೋಗಿ ಬದುಕುತ್ತಿದ್ದಾರೆ. ಕಾರಣ ಈ ಸಮುದಾಯಗಳನ್ನು ಗುರುತಿಸಿ ಅಭಿವೃದ್ಧಿ ಪಥದ ಕಡೆಗೆ ತರಲು ವಿಶೇಷ ಯೋಚನೆಯಲ್ಲಿ ಅಭಿವೃದ್ಧಿ ನಿಗಮಕ್ಕೆ ಚಾಲನೆ ನೀಡಿದೆ. ಅನೇಕ ಕಾರಣಗಳಿಂದ ಮೀಸಲಾತಿ ಪ್ರಾರಂಭವಾದ ದಿನಗಳಿಂದ ಇಲ್ಲಿಯವರೆಗೆ ಶೇಕಡ 11% ರಷ್ಟು ಅಭಿವೃದ್ಧಿ ಆಗಬೇಕಿತ್ತು. ಆದರೆ ಅಭಿವೃದ್ಧಿ ಆಗಿರುವುದು ಶೇಕಡ 3% ಮಾತ್ರ. ಈ ವಿಚಾರ ಸರ್ಕಾರಿ ಅಂಕಿಅಂಶಗಳಲ್ಲಿ ಇರುವುದನ್ನು ಗಮನಿಸಿ ಸರ್ಕಾರ ಭೋವಿ ಲಂಬಾಣಿ ಕೊರಮ ಕೊರಚ ಸಮೂದಾಯಗಳನ್ನು ಸಂವಿಧಾನಿಕ ಪರಿಶಿಷ್ಟ ಜಾತಿಗಳಾಗಿ ಸಂರಕ್ಷಿಸಬೇಕೆಂದು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ಚಂದ್ರಪ್ಪ, ಮಂಜಣ್ಣ, ರಂಗಪ್ಪ, ಶೇಖರಪ್ಪ, ತಿಪ್ಪೇಸ್ವಾಮಿ, ಕುಮಾರ ಇನ್ನಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ವೈಯಕ್ತಿಕ ಸೌಂದರ್ಯ ವರ್ಧಕಕ್ಕೆ ಹೊಸ ಬ್ರ್ಯಾಂಡ್ ಬಿಡುಗಡೆ ಮಾಡಿದ ಸಲ್ಮಾನ್ ಖಾನ್

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ FRSH ಹೆಸರಿನ ವೈಯಕ್ತಿಕ ಸೌಂದರ್ಯ ಬ್ರಾಂಡ್ ಬಿಡುಗಡೆ ಮಾಡಿದ್ದಾರೆ. ವೈಯಕ್ತಿಕ ಉಡುಪು, ದೇಹದಾರ್ಡ್ಯ ಸಲಕರಣೆ, ಜಿಮ್ ಮತ್ತು ಈ-ಸೈಕಲ್ ಬಿಡುಗಡೆಯ ನಂತರ ಇದೀಗ ಹೊಸ ಬ್ರಾಂಡ್ ಪರಿಚಯಿಸಿದ್ದಾರೆ.

ಧಾರವಾಡದ ಜಿಟಿಟಿಸಿಯಲ್ಲಿ ಪೋಸ್ಟ್ ಡಿಪ್ಲೋಮಾ ಇನ್ನ ಟುಲ್ ಡಿಸೈನ್ ಕೋರ್ಸ್ ಗೆ ಪ್ರವೇಶ ಪ್ರಾರಂಭ

 ಧಾರವಾಡ: ವಿದ್ಯಾಕಾಶಿ ಧಾರವಾಡ ನಗರದಲ್ಲಿ ಜಿಟಿಟಿಸಿ ವತಿಯಿಂದ ಡಿಪ್ಲೋಮಾ ಕೊರ್ಸಗಳಿಗೆ ಪ್ರವೇಶ ಪ್ರಾರಂಭವಾಗಿದ್ದು. ಅರ್ಹತೆ:  ಡಿಪ್ಲೋಮಾ…

ಪ್ರಾಮಾಣಿಕ ಗುತ್ತಿಗೆದಾರರಿಗೆ ಕಾಮಗಾರಿ ನೀಡಿ: ಹೊಂಬಾಳಿಮಠ

ಸುಗನಹಳ್ಳಿ ಗ್ರಾಮದ ಆಲದಮ್ಮ ಕೆರೆಯ ಅಭಿವೃದ್ಧಿಗೆ ಟೆಂಡರ್ ಕರೆದಿದ್ದು, ಪ್ರಾಮಾಣಿಕ ಗುತ್ತಿಗೆದಾರರಿಗೆ ಅಧಿಕಾರಿಗಳು ಕಾಮಗಾರಿ ನೀಡುವುದರ ಮೂಲಕ ಸಾರ್ವಜನಿಕರ ಹಿತದೃಷ್ಟಿ ಕಾಯಬೇಕೆಂದು ಬನ್ನಿಕೊಪ್ಪ ಗ್ರಾಪಂ ಅಧ್ಯಕ್ಷ ಸಿದ್ದಲಿಂಗಯ್ಯ ಹೊಂಬಾಳಿಮಠ ಆಗ್ರಹಿಸಿದರು.

ಸ್ವಪ್ನ ಸುಂದರಿ ಸಾಗಿಸಿದ್ದು 30 ಅಲ್ಲ, 180 ಕೆಜಿ ಚಿನ್ನವಂತೆ!

ಯುಎಇಯಿಂದ 30 ಕೆಜಿ ಚಿನ್ನ ಸಾಗಿಸಿದ ಆರೋಪ ಎದುರಿಸುತ್ತಿರುವ ಸ್ವಪ್ನ ಟೀಮ್ ಇದೇ ಮಾದರಿಯಲ್ಲಿ ಒಟ್ಟು 180 ಕೆಜಿ ಚಿನ್ನ ಸಾಗಿಸಿದೆ ಎನ್ನಲಾಗಿದೆ.ಯುಎಇಯಿಂದ ಕೇರಳಕ್ಕೆ 30 ಕೆಜಿ ಚಿನ್ನವನ್ನು