ಬೆಂಗಳೂರು: ರಾಜ್ಯದಲ್ಲಿಂದು 176 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 7000 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 312 ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 3955 ಕೇಸ್ ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 2956 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ ಐವರು ಮೃತಪಟ್ಟಿದ್ದು, ಮೃತರ ಸಂಖ್ಯೆ 86 ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ ಸೋಂಕಿತರಲ್ಲಿ 88 ಕೇಸ್ ಗಳಿಗೆ ಅಂತರಾಜ್ಯ ಪ್ರವಾಸದ ಹಿನ್ನೆಲೆ ಇದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲಿಟಿನ್ ನಲ್ಲಿ ತಿಳಿಸಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ- 42
ಯಾದಗಿರಿ – 22
ಉಡುಪಿ -21
ಬೀದರ್-20
ಕಲಬುರಗಿ- 13
ಧಾರವಾಡ-10
ಬಳ್ಳಾರಿ -08
ಕೋಲಾರ- 07
ಉತ್ತರ ಕನ್ನಡ – 06
ಮಂಡ್ಯ – 05
ದಕ್ಷಿಣ ಕನ್ನಡ -05
ಬಾಗಲಕೋಟೆ- 04
ರಾಮನಗರ -03
ರಾಯಚೂರು – 02
ಶಿವಮೊಗ್ಗ -02
ಬೆಳಗಾವಿ -01
ಹಾಸನ – 01
ವಿಜಯಪುರ -01
ಬೆಂಗಳೂರು ಗ್ರಾಮಾಂತರ -01
ಹಾವೇರಿ -01

Leave a Reply

Your email address will not be published. Required fields are marked *

You May Also Like

ವಿಶ್ವ ಬ್ಯಾಂಕ್ ನಿಂದ ದೇಶಕ್ಕೆ 1 ಬಿಲಿಯನ್ ಯುಎಸ್ಡಿ ಡಾಲರ್ ನೆರವು

ಭಾರತ ಸರ್ಕಾರದ ಹಲವು ಯೋಜನೆಗಳನ್ನು ಪರಾಮರ್ಶಿಸಿ ಕೊರೋನಾ ಸಂಕಷ್ಟ ಕಾಲದಲ್ಲಿ ಇದೀಗ ವಿಶ್ವ ಬ್ಯಾಂಕ್ ಭಾರತದ ನೆರವಿಗೆ ಧಾವಿಸಿದೆ.

ಗದಗ ಜಿಲ್ಲೆಗೆ ಕೊರೊನಾ ಗ್ರಹಣ : ಇಂದು 19 ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 19 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 199…

ಪಿಜಿ ಬಾಡಿಗೆ ಹಣ ಕೊಡದಿದ್ದಕ್ಕೆ ಮಾಲಿಕ ಮಾಡಿದ್ದೇನು?

ಪಿಜಿ ಬಾಡಿಗೆ ನೀಡಿಲ್ಲವೆಂಬ ಕಾರಣಕ್ಕೆ ಯುವತಿಯರನ್ನು ಪಿಜಿ ಮಾಲೀಕ ಕೂಡಿ ಹಾಕಿದ ಘಟನೆ ನಗರದ ಕುವೆಂಪುನಗರ ಬಡಾವಣೆಯಲ್ಲಿ ನಡೆದಿದೆ.

ಕೊರೋನಾ ಸೋಂಕು ಹರಡುತ್ತಿರುವುದರ ಹಿಂದಿನ ಕ್ವಾರಂಟೈನ್ ಕಥೆ ಏನು ಗೊತ್ತಾ..!

ಈಗಾಗಲೇ ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚತ್ತಲಿದ್ದು ಜನರಲ್ಲಿ ಸಹಜವಾಗಿಯೇ ಆತಂಕ ಮನೆಮಾಡಿದೆ. ಆದರೆ ಕೊರೋನಾ ಸೋಂಕು ಇನ್ನೇನು ನಿಯಂತ್ರಣಕ್ಕೆ ಬರುತ್ತದೆ ಎನ್ನುವಷ್ಟರಲ್ಲಿ ವಲಸಿಗರಿಗೆ ವಿನಾಯಿತಿ ನೀಡಲಾಯಿತು. ಇದು ಒಂದು ರೀತಿಯಿಂದ ಸೋಂಕು ಮತ್ತಷ್ಟು ಹರಡಲು ಕಾರಣವಾಯಿತು ಎನ್ನಬಹುದು.