ಮಂಗಳೂರು: ಇಲ್ಲೊಬ್ಬ ವ್ಯಕ್ತಿ ಕೊರೊನಾ ಸೋಂಕು ತಗುಲಿ ತಿಂಗಳಾದರು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಬರೋಬ್ಬರಿ 6 ಬಾರಿ ಪರೀಕ್ಷೆ ನಡೆಸಿದರೂ ವರದಿ ಪಾಸಿಟಿವ್ ಬರುತ್ತಿದೆ.

ಹೀಗಾಗಿ ಇದೊಂದು ಕೇಸ್ ವೈದ್ಯರಿಗೆ ಸವಾಲಾಗಿ ಪರಿಣಮಿಸಿದೆ. ಈ ವ್ಯಕ್ತಿ ಮೇ. 12ರ ರಾತ್ರಿ ಲಾಕ್‌ಡೌನ್‌ ಬಳಿಕ ಆರಂಭಗೊಂಡ ಪ್ರಥಮ ಅಂತಾರಾಷ್ಟ್ರೀಯ ವಿಮಾನದಲ್ಲಿ ದುಬೈನಿಂದ ಮಂಗಳೂರಿಗೆ 81 ವರ್ಷದ ವ್ಯಕ್ತಿಯೊಬ್ಬರು ಆಗಮಿಸಿದ್ದರು. ಅವರೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದ ಪತ್ನಿ, ಮಗಳು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಆದರೆ, ಆ ಹಿರಿಯ ವ್ಯಕ್ತಿ ಒಂದು ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಬಿಡದೆ ಅವರ ತಪಾಸಣೆ ನಡೆಯುತ್ತಿದೆ. ಆದರೆ, ಅವರು ಮಾತ್ರ ಗುಣ ಹೊಂದುತ್ತಿಲ್ಲ. ಆದರೆ, ಕೊಠಡಿಯಲ್ಲಿಯೇ ಆರಾಮವಾಗಿಯೇ ತಿರುಗಾಡುತ್ತಿದ್ದಾರೆ. ಆದರೆ, ತಪಾಸಣೆಯ ವರದಿ ಮಾತ್ರ ನೆಗೆಟಿವ್ ಬರುತ್ತಿಲ್ಲ. ಹೀಗಾಗಿ ವೈದ್ಯರಿಗೆ ಇದೊಂದು ಕೇಸ್ ತಲೆನೋವಾಗಿ ಪರಿಣಮಿಸಿದೆ.

ಒಂದು ತಿಂಗಳಿಂದ ಆಸ್ಪತ್ರೆಯಲ್ಲಿರುವ ಕಾರಣ ತೀವ್ರ ಒತ್ತಡಕ್ಕೆ ಒಳಗಾಗಿದ್ದಾರೆ. ಪ್ರತಿ ದಿನ ಮನೆಗೆ, ಸಂಬಂಧಿಕರಿಗೆ ಕರೆ ಮಾಡಿ, ನಾನು ಆರೋಗ್ಯವಂತನಾಗಿದ್ದೇನೆ. ನನಗೆ ಆಹಾರ ತಂದು ಕೊಡದಿದ್ದರೂ ಪರವಾಗಿಲ್ಲ. ಒಮ್ಮೆ ನನ್ನನ್ನು ಈ ಜೈಲಿನಿಂದ ಮನೆಗೆ ಕರೆದುಕೊಂಡು ಹೋಗಿ ಎಂದು ಬೇಡಿಕೊಳ್ಳುತ್ತಿದ್ದಾರೆ. ಆಸ್ಪತ್ರೆಯಲ್ಲೇ ಇದ್ದು, ಮಾನಸಿಕ ನೋವಿಗೆ ಒಳಗಾಗಿದ್ದಾರೆ. ಹೀಗಾಗಿ ಅವರಿಗೆ ಹೊಸದಾಗಿ ಯೂರಿಕ್‌ ಆ್ಯಸಿಡ್‌ ಕಾಯಿಲೆ ತಗುಲಿದೆ ಎಂದು ವೈದ್ಯರು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೂತುಹಲ ಕೆರಳಿಸಿದ ಸಿದ್ದರಾಮಯ್ಯ ದೆಹಲಿ ಬೇಟಿ

ಮಾಜಿ ಸಿಎಂ ಹಾಗೂ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ದಿಢೀರ್‌ ದೆಹಲಿ ಭೇಟಿಗೆ ಮುಂದಾಗಿದ್ದಾರೆ.

ಶಾಲೆಗಳು ಪ್ರಾರಂಭವಾಗಲು ಕೂಡಿ ಬಂದಿದೆಯೇ ಮುಹೂರ್ತ!?

ಬೆಂಗಳೂರು : ಕೊರೊನಾ ಹಾವಳಿಯಿಂದಾಗಿ ರಾಜ್ಯದಲ್ಲಿ ಶಾಲೆಗಳು ಮುಚ್ಚಿವೆ. ಆದರೆ, ಸದ್ಯ ಕೊರೊನಾ ತಗ್ಗುತ್ತಿದ್ದು, ಶಾಲೆಗಳನ್ನು ತೆರೆಯುವ ಕುರಿತು ಚಿಂತನೆ ನಡೆಯುತ್ತಿದೆ.

ಪಿಎಂ ಕೇರ್ಸ್ ಅಡಿ ಸಂಗ್ರಹವಾದ ಮೊತ್ತದ ಲೆಕ್ಕ ಕೊಡಿ: ಸಿದ್ದರಾಮಯ್ಯ

ಬೆಂಳೂರು: ಪ್ರತಿಪಕ್ಷ ನಾಯಕರಾಗಿ ಅಧಿಕಾರಿಗಳ ಸಭೆಯನ್ನೇ ನಡೆಸಿಲ್ಲ ಎಂದು ಬಿಜೆಪಿ ಮುಖಂಡ ಬಿ.ಎಲ್.ಸಂತೋಷ ಆರೋಪಿಸಿದ್ದಾರೆ. ವಿಧಾನಸೌಧದಲ್ಲಿರುವ…

ಮಜ್ಜೂರು ಕೆರೆಗೆ ತಹಶೀಲ್ದಾರ ಭೇಟಿ

ಕಳೆದ ನಾಲ್ಕೈದು ದಿನಗಳ ಹಿಂದೆ ಸುರಿದ ಭಾರೀ ಮಳೆಗೆ ಮಜ್ಜೂರು ಗ್ರಾಮದ ಕೆರೆ ಕೋಡಿ ಬಿದ್ದು ಅಪಾರ ಪ್ರಮಾಣದ ಬೆಳೆ ಹಾನಿಯಾದ ಹೊಲಗಳಿಗೆ ತಹಶೀಲ್ದಾರ ಭೇಟಿ ನೀಡಿದರು. ಳೀಯ ರೈತರ ಮನವಿಗೆ ಸ್ಪಂದಿಸಿ ಮಂಗಳವಾರ ತಹಶೀಲ್ದಾರ ಯಲ್ಲಪ್ಪ ಗೊಣೆಣ್ಣವರ ಸ್ಥಳಕ್ಕೆ ಭೇಟಿ ನೀಡಿದರು. ಕೆರೆ ಕೊಡಿ ಬಿದ್ದು ಕೆರೆಯ ಸುತ್ತಮುತ್ತಿಲಿನ ಬಹುತೇಕ ಜಮೀನುಗಳಿಗೆ ನೀರು ರಭಸವಾಗಿ ನುಗ್ಗಿದ್ದರಿಂದ