ಬಳ್ಳಾರಿ : ದಿನದಿಂದ ದಿನಕ್ಕೆ ಜಿಂದಾಲ್ನಲಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಮೈಸೂರಿನ ಜ್ಯೂಬಿಲಿಯೆಂಟ್ ಕಾರ್ಖಾನೆಯನ್ನು ಮೀರಿಸಿರುವ ಜಿಂದಾಲ್ನದಲ್ಲಿ ಕೊರೊನಾ ಶತಕ ಬಾರಿಸಿದೆ.
ರಾಜ್ಯದ ನಂಬರ್ ಒನ್ ಉಕ್ಕು ಕಾರ್ಖಾನೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಜಿಂದಾಲ್ ಈಗ ಕೊರೊನಾ ಕಾರ್ಖಾನೆಯಾಗಿ ಮಾರ್ಪಾಡಾಗಿದೆ. ಬಳ್ಳಾರಿಯಲ್ಲಿ ದಾಖಲಾದ 11 ಪ್ರಕರಣಗಳಲ್ಲಿ 8 ಪ್ರಕರಣ ಜಿಂದಾಲ್ ನೌಕರರಲ್ಲಿ ಕಾಣಿಸಿಕೊಂಡಿದೆ. ಹೀಗಾಗಿ ಜಿಲ್ಲೆಯಲ್ಲಿ ದಾಖಲಾದ ಒಟ್ಟು 181 ಸೋಂಕಿತರಲ್ಲಿ ಸಿಂಹಪಾಲು ಅಂದರೆ 103 ಪ್ರಕರಣ ಜಿಂದಾಲ್ಗೆಡ ಸೇರಿದೆ. ಅಂದರೆ ಜಿಂದಾಲ್ ಒಂದೇ ಶತಕ ಬಾರಿಸಿ ಮುಂದುವರಿಯುತ್ತಿದೆ.
ಹಾಲು ಹಾಕುತ್ತಿದ್ದ ವ್ಯಕ್ತಿಗೆ ಸೋಂಕು ದೃಢವಾಗುತ್ತಿದ್ದಂತೆ ನಗರದ ಜಿಲ್ಲಾ ಕೊರೊನಾ ಆಸ್ಪತ್ರೆಗೆ ಆತನನ್ನು ದಾಖಲು ಮಾಡಲಾಗಿದೆ. ಈತ ವಾಸವಾಗಿರುವ ತಿಮ್ಮಲಾಪುರ ಗ್ರಾಮದ ನಿವಾಸ ಪ್ರದೇಶವನ್ನು ಕಂಟೈನ್ಮೆಂಟ್ ಮಾಡಲಾಗಿದೆ.
ಜಿಂದಾಲ್ ವಿರುದ್ಧ ಗ್ರಾಮಸ್ಥರ ಆಕ್ರೋಶ ಹೆಚ್ಚಾಗಿದ್ದು, ಜಿಂದಾಲ್ ಸಂಪೂರ್ಣ ಬಂದ್ ಮಾಡುವಂತೆ ಆಗ್ರಹಿಸಿದ್ದಾರೆ.

1 comment
Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿ ಕೋವಿಡ್ ಕರ್ಪ್ಯೂ! ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳೇನು?

ಈಗಾಗಲೇ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಲಾಕ್ ಡೌನ್ ಮಾದರಿಯಲ್ಲೆ ರಾಜ್ಯ ಸರ್ಕಾರ ಕೋವಿಡ್ ಕರ್ಪ್ಯೂ ಘೋಷಿಸಿದೆ. ಸಚಿವ ಸಂಪುಟದಲ್ಲಿ ಈ ನಿರ್ಧಾರ ತೆಗೆದುಕೊಂಡು ಇನ್ನು ಹಲವು ನಿರ್ಧಾರಗಳನ್ನು ಸಂಪುಟ ಸಭೆಯಲ್ಲಿ ಸರ್ಕಾರ ತೆಗೆದುಕೊಂಡಿದೆ.

ನೊಂದವರ ನೆರವಿಗೆ ದಾಸೋಹ ಕಾರ್ಯವಾಗಬೇಕು: ತೋಂಟದ ಸಿದ್ಧರಾಮಶ್ರೀಗಳು

ನಮ್ಮ ಭಾರತ ದೇಶದ ಸಂಸ್ಕಾರ ಸಂಸ್ಕೃತಿಯೇ ವೈರಸ್ ಕಾಟ ಕಡಿಮೆಯಾಗಲು ಕಾರಣವಾಗಿದೆ. ಆದರೆ ಇಂದು ಕಲಿತವರಿಂದ ಕೆಲ ಆಚರಣೆ ಗಾಳಿಗೆ ತೂರಲಾಗಿದೆ. ಹೀಗಾಗಿ ವೈರಸ್ ಕಾಟದಿಂದ ಸಾಕಷ್ಟು ಜನರು ಸಂಕಷ್ಟು ಎದುರಿಸುವಂತಾಗಿದೆ.

ಅರವಿಂದ್ ಕೇಜ್ರಿವಾಲ್ ಗೆ ಕೊರೊನಾ ಟೆಸ್ಟ್ – ಪರೀಕ್ಷೆಯಲ್ಲಿ ಪಾಸ್ ಆದ ಸಿಎಂ!

ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಕೊರೊನಾ ವರದಿ ನೆಗೆಟಿವ್ ಎಂದು ಬಂದಿದೆ. ನಿನ್ನೆ…

ಅಂಬೇಡ್ಕರ್ ವಿಚಾರಧಾರೆಗಳು ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕ :ಮಾರುತಿ ಕಟ್ಟೀಮನಿ

ಕನ್ನಡ ಮತ್ತು ಸಂಸ್ಕತಿ ಇಲಾಖೆ, ಕೆ.ಎಲ್.ಇ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಸಾಹಿತ್ಯ ಸಂಘ ಹಾಗೂ ಗ್ರಂಥಾಲಯ ಮತ್ತು ಮಾಹಿತಿ ವಿಭಾಗಗಳ ಸಂಯುಕ್ತಾಶ್ರಯದಲ್ಲಿ ಸಂವಿಧಾನ ಶಿಲ್ಪಿ ಭಾರತರತ್ನಡಾ.ಬಿ.ಆರ್.ಅಂಬೇಡ್ಕರ್‌ ಓದು ಕಾರ್ಯಕ್ರಮದ ಅಂಗವಾಗಿ ರಸಪ್ರಶ್ನೆ ಹಾಗು ಪ್ರಬಂಧ ಸ್ಪರ್ಧೆಆಯೋಜಿಸಲಾಗಿತ್ತು.